AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur News: ಚಿಕ್ಕಬಳ್ಳಾಪುರ: ಗಿಫ್ಟ್ ಪಡೆಯಲು ಹೋಗಿ 2 ಲಕ್ಷ ರೂ. ಕಳೆದುಕೊಂಡ ಎಂಬಿಎ ಪದವೀಧರೆ!

ಚಿಕ್ಕಬಳ್ಳಾಪುರ ತಾಲ್ಲೂಕು ಮಂಚನಬೆಲೆ ಗ್ರಾಮದ ನಿವಾಸಿ ಎಂಬಿಎ ಪಧವೀಧರೆ ಕುಮಾರಿ ನಯನಾ ಆನ್​ಲೈನ್ ವಂಚನೆಗೆ ಒಳಗಾಗಿ 2,19,603 ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ.

Chikkaballapur News: ಚಿಕ್ಕಬಳ್ಳಾಪುರ: ಗಿಫ್ಟ್ ಪಡೆಯಲು ಹೋಗಿ 2 ಲಕ್ಷ ರೂ. ಕಳೆದುಕೊಂಡ ಎಂಬಿಎ ಪದವೀಧರೆ!
ಸಾಂದರ್ಭಿಕ ಚಿತ್ರ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: Ganapathi Sharma

Updated on: Jul 25, 2023 | 9:25 PM

ಚಿಕ್ಕಬಳ್ಳಾಪುರ: ಬಿ.ಇ, ಎಂ.ಬಿ.ಎ ಸೇರಿದಂತೆ ಕೆಲವು ವೃತ್ತಿಪರ ಕೋರ್ಸ್​​​ಗಳ ವಿದ್ಯಾಬ್ಯಾಸ ಮಾಡಿದವರು ವಿದ್ಯಾವಂತರು, ಬುದ್ಧಿವಂತರು, ತರ್ಕಬದ್ದರು ಅನ್ನುವ ನಂಬಿಕೆ ಸಾಮಾನ್ಯ. ಆದರೆ ಇಲ್ಲಿ (Chikkaballapur) ಎಂಬಿಎ ಪದವೀಧರೆಯೊಬ್ಬರು ಉಡುಗೊರೆಯ ಆಸೆಗೆ ಬಿದ್ದು 2,19,603 ರೂಪಾಯಿಗಳನ್ನು ಕಳೆದುಕೊಂಡು (Online Fraud) ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ತಾಲ್ಲೂಕು ಮಂಚನಬೆಲೆ ಗ್ರಾಮದ ನಿವಾಸಿ ಎಂಬಿಎ ಪಧವೀಧರೆ ಕುಮಾರಿ ನಯನಾ, ಮೋಸ ಹೋಗಿರುವ ಯುವತಿ. ನಯನಾ ಪೋನ್ ನಂಬರ್​​ಗೆ ಕರೆ ಮಾಡಿದ ಸೈಬರ್ ವಂಚಕರು, ತಾವು ರಿಲಯನ್ಸ್ ಎಜಿ ಕಂಪನಿಯಿಂದ ಕರೆ ಮಾಡುತ್ತಿರುವುದಾಗಿ ಪರಿಚಯ ಮಾಡಿಕೊಂಡಿದ್ದಾರೆ. ನಿಮಗೆ 05 ಗಿಫ್ಟ್​​ಗಳು ಬಂದಿವೆ, ನೀವು ನಿಮಗೆ ಯಾವುದು ಬೇಕೋ ಅದನ್ನು ಸೆಲೆಕ್ಟ್ ಮಾಡಿ ಕಳುಹಿಸಲು ತಿಳಿಸಿದ್ದಾರೆ. ವಂಚಕರ ಮಾತು ನಂಬಿದ ನಯಾನಾ, 05 ಐಟಂ ಗಳನ್ನು ಸೆಲೆಕ್ಟ್ ಮಾಡಿ ಕಳುಹಿಸಿದ್ದಾರೆ. ನಂತರ 9651160917 ಪೋನ್ ನಂಬರ್ ನಿಂದ ಕರೆ ಮಾಡಿದ ವಂಚಕರು ಸೆಲೆಕ್ಟ್ ಮಾಡಿರುವ ಗಿಪ್ಟ್ ಬರಬೇಕಾದರೆ ನೀವು 9863 ರೂ.ಗಳನ್ನು ಕಳುಹಿಸಬೇಕು ಎಂದು ತಿಳಿಸಿದ್ದಾರೆ. ಅವರ ಮಾತು ನಂಬಿದ ನಯನಾ ಗಿಫ್ಟ್​ಗಳಿಗೆಲ್ಲ ಲೆಕ್ಕ ಹಾಕಿ ಒಟ್ಟು 2,19,603 ರೂಪಾಯಿಗಳನ್ನು ವರ್ಗಾಯಿಸಿದ್ದರು. ಕೊನೆಗೆ ಮೋಸು ಹೋಗಿರುವುದು ಗೊತ್ತಾಗಿದೆ.

ಇದನ್ನೂ ಓದಿ: Chikkaballapur: ಹೆಂಡತಿ ಮಕ್ಕಳಿದ್ದರೂ ಪಕ್ಕದ ಮನೆಯಾಕೆ ಜೊತೆ ಮದುವೆಗೆ ಪ್ಲಾನ್, ಪ್ರಶ್ನಿಸಿದ ಯುವತಿಯ ತಾಯಿಗೆ ಚಾಕು ಇರಿತ

ಸದ್ಯ ತನಗಾದ ಅನ್ಯಾಯವನ್ನು ಸರಿ ಪಡಿಸಿಕೊಡುವಂತೆ ಚಿಕ್ಕಬಳ್ಳಾಪುರ ಸಿಇಎನ್ ಪೊಲೀಸರ ಮೊರೆ ಹೋಗಿದ್ದಾರೆ. ಪೊಲೀಸರು ಕಲಂ 66(ಸಿ), 66(ಡಿ) ಐಟಿ ಆ್ಯಕ್ಟ್ ಮತ್ತು ಕಲಂ 406, 419, 420 ಐಪಿಸಿ ರೀತ್ಯಾ ಪ್ರಕರಣದ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್