AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur News: ಚಿಕ್ಕಬಳ್ಳಾಪುರ: ಗಿಫ್ಟ್ ಪಡೆಯಲು ಹೋಗಿ 2 ಲಕ್ಷ ರೂ. ಕಳೆದುಕೊಂಡ ಎಂಬಿಎ ಪದವೀಧರೆ!

ಚಿಕ್ಕಬಳ್ಳಾಪುರ ತಾಲ್ಲೂಕು ಮಂಚನಬೆಲೆ ಗ್ರಾಮದ ನಿವಾಸಿ ಎಂಬಿಎ ಪಧವೀಧರೆ ಕುಮಾರಿ ನಯನಾ ಆನ್​ಲೈನ್ ವಂಚನೆಗೆ ಒಳಗಾಗಿ 2,19,603 ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ.

Chikkaballapur News: ಚಿಕ್ಕಬಳ್ಳಾಪುರ: ಗಿಫ್ಟ್ ಪಡೆಯಲು ಹೋಗಿ 2 ಲಕ್ಷ ರೂ. ಕಳೆದುಕೊಂಡ ಎಂಬಿಎ ಪದವೀಧರೆ!
ಸಾಂದರ್ಭಿಕ ಚಿತ್ರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jul 25, 2023 | 9:25 PM

Share

ಚಿಕ್ಕಬಳ್ಳಾಪುರ: ಬಿ.ಇ, ಎಂ.ಬಿ.ಎ ಸೇರಿದಂತೆ ಕೆಲವು ವೃತ್ತಿಪರ ಕೋರ್ಸ್​​​ಗಳ ವಿದ್ಯಾಬ್ಯಾಸ ಮಾಡಿದವರು ವಿದ್ಯಾವಂತರು, ಬುದ್ಧಿವಂತರು, ತರ್ಕಬದ್ದರು ಅನ್ನುವ ನಂಬಿಕೆ ಸಾಮಾನ್ಯ. ಆದರೆ ಇಲ್ಲಿ (Chikkaballapur) ಎಂಬಿಎ ಪದವೀಧರೆಯೊಬ್ಬರು ಉಡುಗೊರೆಯ ಆಸೆಗೆ ಬಿದ್ದು 2,19,603 ರೂಪಾಯಿಗಳನ್ನು ಕಳೆದುಕೊಂಡು (Online Fraud) ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ತಾಲ್ಲೂಕು ಮಂಚನಬೆಲೆ ಗ್ರಾಮದ ನಿವಾಸಿ ಎಂಬಿಎ ಪಧವೀಧರೆ ಕುಮಾರಿ ನಯನಾ, ಮೋಸ ಹೋಗಿರುವ ಯುವತಿ. ನಯನಾ ಪೋನ್ ನಂಬರ್​​ಗೆ ಕರೆ ಮಾಡಿದ ಸೈಬರ್ ವಂಚಕರು, ತಾವು ರಿಲಯನ್ಸ್ ಎಜಿ ಕಂಪನಿಯಿಂದ ಕರೆ ಮಾಡುತ್ತಿರುವುದಾಗಿ ಪರಿಚಯ ಮಾಡಿಕೊಂಡಿದ್ದಾರೆ. ನಿಮಗೆ 05 ಗಿಫ್ಟ್​​ಗಳು ಬಂದಿವೆ, ನೀವು ನಿಮಗೆ ಯಾವುದು ಬೇಕೋ ಅದನ್ನು ಸೆಲೆಕ್ಟ್ ಮಾಡಿ ಕಳುಹಿಸಲು ತಿಳಿಸಿದ್ದಾರೆ. ವಂಚಕರ ಮಾತು ನಂಬಿದ ನಯಾನಾ, 05 ಐಟಂ ಗಳನ್ನು ಸೆಲೆಕ್ಟ್ ಮಾಡಿ ಕಳುಹಿಸಿದ್ದಾರೆ. ನಂತರ 9651160917 ಪೋನ್ ನಂಬರ್ ನಿಂದ ಕರೆ ಮಾಡಿದ ವಂಚಕರು ಸೆಲೆಕ್ಟ್ ಮಾಡಿರುವ ಗಿಪ್ಟ್ ಬರಬೇಕಾದರೆ ನೀವು 9863 ರೂ.ಗಳನ್ನು ಕಳುಹಿಸಬೇಕು ಎಂದು ತಿಳಿಸಿದ್ದಾರೆ. ಅವರ ಮಾತು ನಂಬಿದ ನಯನಾ ಗಿಫ್ಟ್​ಗಳಿಗೆಲ್ಲ ಲೆಕ್ಕ ಹಾಕಿ ಒಟ್ಟು 2,19,603 ರೂಪಾಯಿಗಳನ್ನು ವರ್ಗಾಯಿಸಿದ್ದರು. ಕೊನೆಗೆ ಮೋಸು ಹೋಗಿರುವುದು ಗೊತ್ತಾಗಿದೆ.

ಇದನ್ನೂ ಓದಿ: Chikkaballapur: ಹೆಂಡತಿ ಮಕ್ಕಳಿದ್ದರೂ ಪಕ್ಕದ ಮನೆಯಾಕೆ ಜೊತೆ ಮದುವೆಗೆ ಪ್ಲಾನ್, ಪ್ರಶ್ನಿಸಿದ ಯುವತಿಯ ತಾಯಿಗೆ ಚಾಕು ಇರಿತ

ಸದ್ಯ ತನಗಾದ ಅನ್ಯಾಯವನ್ನು ಸರಿ ಪಡಿಸಿಕೊಡುವಂತೆ ಚಿಕ್ಕಬಳ್ಳಾಪುರ ಸಿಇಎನ್ ಪೊಲೀಸರ ಮೊರೆ ಹೋಗಿದ್ದಾರೆ. ಪೊಲೀಸರು ಕಲಂ 66(ಸಿ), 66(ಡಿ) ಐಟಿ ಆ್ಯಕ್ಟ್ ಮತ್ತು ಕಲಂ 406, 419, 420 ಐಪಿಸಿ ರೀತ್ಯಾ ಪ್ರಕರಣದ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ