AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur News: ಚಿಕ್ಕಬಳ್ಳಾಪುರ: ಗಿಫ್ಟ್ ಪಡೆಯಲು ಹೋಗಿ 2 ಲಕ್ಷ ರೂ. ಕಳೆದುಕೊಂಡ ಎಂಬಿಎ ಪದವೀಧರೆ!

ಚಿಕ್ಕಬಳ್ಳಾಪುರ ತಾಲ್ಲೂಕು ಮಂಚನಬೆಲೆ ಗ್ರಾಮದ ನಿವಾಸಿ ಎಂಬಿಎ ಪಧವೀಧರೆ ಕುಮಾರಿ ನಯನಾ ಆನ್​ಲೈನ್ ವಂಚನೆಗೆ ಒಳಗಾಗಿ 2,19,603 ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ.

Chikkaballapur News: ಚಿಕ್ಕಬಳ್ಳಾಪುರ: ಗಿಫ್ಟ್ ಪಡೆಯಲು ಹೋಗಿ 2 ಲಕ್ಷ ರೂ. ಕಳೆದುಕೊಂಡ ಎಂಬಿಎ ಪದವೀಧರೆ!
ಸಾಂದರ್ಭಿಕ ಚಿತ್ರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jul 25, 2023 | 9:25 PM

Share

ಚಿಕ್ಕಬಳ್ಳಾಪುರ: ಬಿ.ಇ, ಎಂ.ಬಿ.ಎ ಸೇರಿದಂತೆ ಕೆಲವು ವೃತ್ತಿಪರ ಕೋರ್ಸ್​​​ಗಳ ವಿದ್ಯಾಬ್ಯಾಸ ಮಾಡಿದವರು ವಿದ್ಯಾವಂತರು, ಬುದ್ಧಿವಂತರು, ತರ್ಕಬದ್ದರು ಅನ್ನುವ ನಂಬಿಕೆ ಸಾಮಾನ್ಯ. ಆದರೆ ಇಲ್ಲಿ (Chikkaballapur) ಎಂಬಿಎ ಪದವೀಧರೆಯೊಬ್ಬರು ಉಡುಗೊರೆಯ ಆಸೆಗೆ ಬಿದ್ದು 2,19,603 ರೂಪಾಯಿಗಳನ್ನು ಕಳೆದುಕೊಂಡು (Online Fraud) ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ತಾಲ್ಲೂಕು ಮಂಚನಬೆಲೆ ಗ್ರಾಮದ ನಿವಾಸಿ ಎಂಬಿಎ ಪಧವೀಧರೆ ಕುಮಾರಿ ನಯನಾ, ಮೋಸ ಹೋಗಿರುವ ಯುವತಿ. ನಯನಾ ಪೋನ್ ನಂಬರ್​​ಗೆ ಕರೆ ಮಾಡಿದ ಸೈಬರ್ ವಂಚಕರು, ತಾವು ರಿಲಯನ್ಸ್ ಎಜಿ ಕಂಪನಿಯಿಂದ ಕರೆ ಮಾಡುತ್ತಿರುವುದಾಗಿ ಪರಿಚಯ ಮಾಡಿಕೊಂಡಿದ್ದಾರೆ. ನಿಮಗೆ 05 ಗಿಫ್ಟ್​​ಗಳು ಬಂದಿವೆ, ನೀವು ನಿಮಗೆ ಯಾವುದು ಬೇಕೋ ಅದನ್ನು ಸೆಲೆಕ್ಟ್ ಮಾಡಿ ಕಳುಹಿಸಲು ತಿಳಿಸಿದ್ದಾರೆ. ವಂಚಕರ ಮಾತು ನಂಬಿದ ನಯಾನಾ, 05 ಐಟಂ ಗಳನ್ನು ಸೆಲೆಕ್ಟ್ ಮಾಡಿ ಕಳುಹಿಸಿದ್ದಾರೆ. ನಂತರ 9651160917 ಪೋನ್ ನಂಬರ್ ನಿಂದ ಕರೆ ಮಾಡಿದ ವಂಚಕರು ಸೆಲೆಕ್ಟ್ ಮಾಡಿರುವ ಗಿಪ್ಟ್ ಬರಬೇಕಾದರೆ ನೀವು 9863 ರೂ.ಗಳನ್ನು ಕಳುಹಿಸಬೇಕು ಎಂದು ತಿಳಿಸಿದ್ದಾರೆ. ಅವರ ಮಾತು ನಂಬಿದ ನಯನಾ ಗಿಫ್ಟ್​ಗಳಿಗೆಲ್ಲ ಲೆಕ್ಕ ಹಾಕಿ ಒಟ್ಟು 2,19,603 ರೂಪಾಯಿಗಳನ್ನು ವರ್ಗಾಯಿಸಿದ್ದರು. ಕೊನೆಗೆ ಮೋಸು ಹೋಗಿರುವುದು ಗೊತ್ತಾಗಿದೆ.

ಇದನ್ನೂ ಓದಿ: Chikkaballapur: ಹೆಂಡತಿ ಮಕ್ಕಳಿದ್ದರೂ ಪಕ್ಕದ ಮನೆಯಾಕೆ ಜೊತೆ ಮದುವೆಗೆ ಪ್ಲಾನ್, ಪ್ರಶ್ನಿಸಿದ ಯುವತಿಯ ತಾಯಿಗೆ ಚಾಕು ಇರಿತ

ಸದ್ಯ ತನಗಾದ ಅನ್ಯಾಯವನ್ನು ಸರಿ ಪಡಿಸಿಕೊಡುವಂತೆ ಚಿಕ್ಕಬಳ್ಳಾಪುರ ಸಿಇಎನ್ ಪೊಲೀಸರ ಮೊರೆ ಹೋಗಿದ್ದಾರೆ. ಪೊಲೀಸರು ಕಲಂ 66(ಸಿ), 66(ಡಿ) ಐಟಿ ಆ್ಯಕ್ಟ್ ಮತ್ತು ಕಲಂ 406, 419, 420 ಐಪಿಸಿ ರೀತ್ಯಾ ಪ್ರಕರಣದ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!