AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur News: ಹಣ ದ್ವಿಗುಣದ ಆಸೆಗೆ 3.21 ಲಕ್ಷ ರೂಪಾಯಿ ಕಳೆದುಕೊಂಡ ಚಿಕ್ಕಬಳ್ಳಾಪುರ ಶಿಕ್ಷಕಿ!

ಇನ್​​​ಸ್ಟಾಗ್ರಾಂನಲ್ಲಿ ಬ್ಲಾಕ್ ಚೈನ್ ಎಂಬ ಕಂಪನಿಯ ಲಿಂಕ್ ಬಂದಿದ್ದು, ಅದನ್ನು ಶಿಕ್ಷಕಿ ಓಪನ್ ಮಾಡಿದ್ದಾರೆ. ಆಗ ಆ್ಯಪ್​​ನಲ್ಲಿ ಹಣವನ್ನು ಹೂಡಿಕೆ ಮಾಡಿದರೆ ಹಣ ದ್ವಿಗುಣಗೊಳಿಸಿ ಕೊಡುವುದಾಗಿ ಮಾಹಿತಿ ಬಂದಿದೆ.

Chikkaballapur News: ಹಣ ದ್ವಿಗುಣದ ಆಸೆಗೆ 3.21 ಲಕ್ಷ ರೂಪಾಯಿ ಕಳೆದುಕೊಂಡ ಚಿಕ್ಕಬಳ್ಳಾಪುರ ಶಿಕ್ಷಕಿ!
ಸಾಂದರ್ಭಿಕ ಚಿತ್ರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jul 22, 2023 | 5:38 PM

Share

ಚಿಕ್ಕಬಳ್ಳಾಪುರ: ಸಾಮಾಜಿಕ ಜಾಲತಾಣ ಇನ್​​ಸ್ಟಾಗ್ರಾಮ್​​ನಲ್ಲಿ (Instagram) ಬಂದ ಆನ್ ಲೈನ್ ಲಿಂಕ್ ಅನ್ನು ನಂಬಿದ ಶಿಕ್ಷಕಿಯೊಬ್ಬರು, ಹಣ ದ್ವಿಗುಣದ ಆಸೆಗೆ ಮರುಳಾಗಿ 3 ಲಕ್ಷ 21 ಸಾವಿರ ರೂಪಾಯಿ ಹಣ ಕಳೆದುಕೊಂಡ ಬಗ್ಗೆ ವರದಿಯಾಗಿದೆ. ಬ್ಲಾಕ್ ಚೈನ್ ಎಂಬ ಕಂಪನಿಯ ಲಿಂಕ್ ಅನ್ನು ನಂಬಿ ಹಣ ದ್ವಿಗುಣದ ಆಸೆಗೆ ಮರುಳಾದ ಶಿಕ್ಷಕಿ ಅವರು ಹೇಳಿದಂತೆ ಕೇಳಿ ಕೊನೆಗೆ ಪಂಗನಾಮ ಹಾಕಿಸಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಮುಷ್ಟೂರು ಗ್ರಾಮದ ನಿವಾಸಿ ಶ್ರೀಮತಿ ಕೆ.ರಾಗಿಣಿ ಕೋಂ ಎಂ ರಮೇಶ್ ಬಾಬು ಎನ್ನುವ ಖಾಸಗಿ ಶಾಲಾ ಶಿಕ್ಷಕಿಯೇ ಮೋಸ ಹೋಗಿರುವ ಮಹಿಳೆಯಾಗಿದ್ದಾರೆ.

ಇನ್​​​ಸ್ಟಾಗ್ರಾಂನಲ್ಲಿ ಬ್ಲಾಕ್ ಚೈನ್ ಎಂಬ ಕಂಪನಿಯ ಲಿಂಕ್ ಬಂದಿದ್ದು, ಅದನ್ನು ಶಿಕ್ಷಕಿ ಓಪನ್ ಮಾಡಿದ್ದಾರೆ. ಆಗ ಆ್ಯಪ್​​ನಲ್ಲಿ ಹಣವನ್ನು ಹೂಡಿಕೆ ಮಾಡಿದರೆ ಹಣ ದ್ವಿಗುಣಗೊಳಿಸಿ ಕೊಡುವುದಾಗಿ ಮಾಹಿತಿ ಬಂದಿದೆ. ಹೀಗಾಗಿ ಬಿಡುವಿನ ಸಮಯದಲ್ಲಿ ಹಣವನ್ನು ಹಾಕಿ ಹೆಚ್ಚಿನ ಹಣವನ್ನು ಸಂಪಾದನೆ ಮಾಡೋಣವೆಂದು ಯೋಚನೆ ಮಾಡಿದ ಶಿಕ್ಷಕಿ, ಬ್ಯಾಂಕ್ ಖ್ಯಾತೆಗಳಿಂದ ವಿವಿಧ ದಿನಾಂಕಗಳಲ್ಲಿ ಒಟ್ಟು 3,21,000 ರೂ, ಹಣವನ್ನು ಹೂಡಿಕೆ ಮಾಡಿದ್ದಾರೆ.

ಇದಾದ ನಂತರ ಬ್ಲಾಕ್ ಚೈನ್ ಆ್ಯಪ್ ಅಕೌಂಟ್​​ನಲ್ಲಿ ರಾಗಿಣಿ ಹೆಸರಿನಲ್ಲಿ 10 ಲಕ್ಷ ಹಣ ಇರುವುದಾಗಿ ಕಾಣಿಸಿದೆಯಂತೆ. ಇದರಿಂದ ಸಂತಸಗೊಂಡ ಶಿಕ್ಷಕಿ ಕೊನೆಗೆ ಹಣ ಡ್ರಾ ಮಾಡಲು ಯತ್ನಿಸಿದಾಗ ಸಾಧ್ಯವಾಗಿಲ್ಲ. ಇದರಿಂದ ಅನುಮಾನಗೊಂಡು ಕಂಪನಿಯವರನ್ನು ಸಂಪರ್ಕಿಸಲು ಯತ್ನಿಸಿದಾಗ ಯಾರೂ ಸಂಪರ್ಕಕ್ಕೆ ಸಿಕ್ಕಿಲ್ಲ. ಕೊನೆಗೆ ಮೋಸ ಹೋಗಿರುವ ಬಗ್ಗೆ ಅವರಿಗೆ ಅರಿವಾಗಿದೆ.

ಇದನ್ನೂ ಓದಿ: Devanahalli News: ದೇವನಹಳ್ಳಿಯಲ್ಲಿ ಬ್ಯಾಂಕ್ ಮ್ಯಾನೇಜರ್​​ನಿಂದಲೇ ಗ್ರಾಹಕರ ಖಾತೆಗೆ ಕನ್ನ; 1.89 ಕೋಟಿ ರೂ. ವರ್ಗಾವಣೆ

ಈಗ ಶಿಕ್ಷಕಿ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾರೆ. ಚಿಕ್ಕಬಳ್ಳಾಪುರ ಸಿಇಎನ್ ಠಾಣೆ ಪೊಲೀಸರು ಐಟಿ ಕಾಯ್ದೆಯ ಕಲಂ 66(ಡಿ) ಮತ್ತು ಭಾರತೀಯ ದಂಡಸಂಹಿತೆಯ ಕಲಂ 419, 420 ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?