AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣ ಬಿಸಿಲಿನಿಂದ ಬಳ್ಳಿಯಲ್ಲೇ ಬಾಡ್ತಿದೆ ದ್ರಾಕ್ಷಿ; ವಾಟರ್ ಸ್ಪ್ರೇ ಮಾಡುವ ಮೂಲಕ ರಕ್ಷಣೆಗೆ ಮುಂದಾದ ರೈತ

ದ್ರಾಕ್ಷಿ ಬೆಳೆಯುವಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಫೇಮಸ್. ಪ್ರತಿ ವರ್ಷ ಸೀಸನ್​ನಲ್ಲಿ ದ್ರಾಕ್ಷಿ ಬೆಳೆದು ಲಕ್ಷಾಂತರ ರೂಪಾಯಿ ಸಂಪಾದನೆ ಮಾಡುವುದರ ಮೂಲಕ ನೆಮ್ಮದಿ ಬದುಕು ಕಟ್ಟಿಕೊಂಡಿದ್ದರು. ಆದ್ರೆ, ಈ ಭಾರಿಯ ರಣ ಬಿಸಿಲಿನ ತಾಪಮಾನ ಮತ್ತು ಉಷ್ಣಾಂಶದಿಂದ ದ್ರಾಕ್ಷಿ ಬೆಳೆ ರಕ್ಷಣೆ ಮಾಡಿಕೊಳ್ಳುವುದೇ ದೊಡ್ಡ ಸಾಹಸವಾಗಿದೆ. ಈ ಕುರಿತ ಒಂದು ಸ್ಟೋರಿ ಇಲ್ಲಿದೆ.

ರಣ ಬಿಸಿಲಿನಿಂದ ಬಳ್ಳಿಯಲ್ಲೇ ಬಾಡ್ತಿದೆ ದ್ರಾಕ್ಷಿ; ವಾಟರ್ ಸ್ಪ್ರೇ ಮಾಡುವ ಮೂಲಕ ರಕ್ಷಣೆಗೆ ಮುಂದಾದ ರೈತ
ಚಿಕ್ಕಬಳ್ಳಾಪುರದಲ್ಲಿ ರಣ ಬಿಸಿಲಿನಿಂದ ಬಳ್ಳಿಯಲ್ಲೇ ಬಾಡ್ತಿದೆ ದ್ರಾಕ್ಷಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: May 10, 2024 | 6:59 PM

Share

ಚಿಕ್ಕಬಳ್ಳಾಪುರ, ಮೇ.10: ಚಿಕ್ಕಬಳ್ಳಾಪುರ ಜಿಲ್ಲೆಯೂ ದ್ರಾಕ್ಷಿ ಬೆಳೆ(Grape crop)ಗೆ ಹೆಸರುವಾಸಿಯಾಗಿದೆ. ಅದರಂತೆ ಪ್ರತಿ ವರ್ಷ ಸೀಸನ್​ನಲ್ಲಿಯೂ ದ್ರಾಕ್ಷಿ ಬೆಳೆದು ಲಕ್ಷಾಂತರ ರೂಪಾಯಿ ಸಂಪಾದನೆ ಮಾಡಿ ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದರು. ಆದರೆ, ಈ ಬಾರಿ ರಣ ಬಿಸಿಲಿನ ತಾಪ ಹಾಗೂ ಉಷ್ಣತೆ ಹೆಚ್ಚಾದ ಪರಿಣಾಮ ಬಳ್ಳಿಯಲ್ಲಿಯೇ ದ್ರಾಕ್ಷಿ ಬಾಡಿ ಹೋಗುತ್ತಿದೆ. ಮತ್ತೊಂದೆಡೆ ದ್ರಾಕ್ಷಿಗೆ ಕಾಯಿಲೆ ಆರಂಭವಾಗಿದೆ. ಇದರಿಂದ ಪ್ರತಿನಿತ್ಯ ಔಷಧಿ ಸಿಂಪಡಿಸುವ ಜೊತೆಗೆ ಬೂಮರ್ ಯಂತ್ರಗಳ ಮೂಲಕ ದಿನಕ್ಕೆ ನಾಲ್ಕು ಬಾರಿ ವಾಟರ್ ಸ್ಪ್ರೇ ಮಾಡುವುದರ ಮೂಲಕ ದ್ರಾಕ್ಷಿಯನ್ನು ರಕ್ಷಣೆ ಮಾಡಿಕೊಳ್ಳವಂತಾಗಿದೆ.

ಇನ್ನು ಚಿಕ್ಕಬಳ್ಳಾಪರ ತಾಲ್ಲೂಕಿನ ದೊಡ್ಡಮರಳಿ ಗ್ರಾಮದ ರೈತ ಸಹೋದರರಾದ ವೆಂಕಟೇಶ ಹಾಗೂ ಮಂಜುನಾಥ್, ತಮ್ಮ ಎರಡೂವರೆ ಎಕರೆ ತೋಟದಲ್ಲಿ ಸುಮಾರು ಹತ್ತು ಲಕ್ಷ ಖರ್ಚು ಮಾಡಿ ರೆಡ್ ಗ್ಲೋಬ್ ಎಂಬ ಆಸ್ಟ್ರೇಲಿಯನ್ ಬ್ರೀಡ್ ದ್ರಾಕ್ಷಿ ಬೆಳೆದಿದ್ದಾರೆ. ಒಂದು ಕೆಜಿ ರೆಡ್ ಗ್ಲೋಬ್ ದ್ರಾಕ್ಷಿಯ ಬೆಲೆ ಬರೊಬ್ಬರಿ ನೂರ ಇಪ್ಪತ್ತರಿಂದ ನೂರೈವತ್ತು ರೂಪಾಯಿವರೆಗೂ ಮಾರಾಟವಾಗುತ್ತಿದೆ. ಆದ್ರೆ, ಈಗ ಬಿಸಿಲಿನಿಂದ ಬೆಳೆ ರಕ್ಷಣೆ ಮಾಡಿಕೊಳ್ಳುವುದೆ ಒಂದು ಸಾಹಸವಾಗಿದೆ.

ಇದನ್ನೂ ಓದಿ:ವಿಜಯಪುರ: ಒಣದ್ರಾಕ್ಷಿ ಬೆಳೆದ ರೈತನಿಗೆ ಬೆಲೆ ಕುಸಿತದ ಬರೆ; ಬೆಂಬಲ ಬೆಲೆ ನಿಗದಿ ಮಾಡಲು ಸರ್ಕಾರಕ್ಕೆ ಮನವಿ

ಒಟ್ಟಿನಲ್ಲಿ ಕುಂಬಾರನಿಗೆ ವರ್ಷ ದೊಣ್ಣೆಗೆ ನಿಮಿಷ ಎಂಬ ಗಾದೆ ಮಾತಿನ ಹಾಗೆ ವರ್ಷಾನುಗಟ್ಟಲೇ ಬೆವರು ಸುರಿಸಿ ಬೆಳೆದ ದ್ರಾಕ್ಷಿ ಬೆಳೆಯನ್ನು ರಣ ಬಿಸಿಲು ಕೆಲವೇ ದಿನಗಳಲ್ಲಿ ನಾಶವಾಗುವಂತೆ ಮಾಡುತ್ತಿದೆ. ಇದರಿಂದ ಬಿಸಿಲಿಗೆ ಸವಾಲ್ ಹಾಕಿರುವ ರೈತರು, ಬೂಮರ್ ಯಂತ್ರದ ಮೂಲಕ ವಾಟರ್ ಸ್ಪ್ರೇ ಮಾಡಿ ರಕ್ಷಣೆಗೆ ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ