Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣ ಬಿಸಿಲಿನಿಂದ ಬಳ್ಳಿಯಲ್ಲೇ ಬಾಡ್ತಿದೆ ದ್ರಾಕ್ಷಿ; ವಾಟರ್ ಸ್ಪ್ರೇ ಮಾಡುವ ಮೂಲಕ ರಕ್ಷಣೆಗೆ ಮುಂದಾದ ರೈತ

ದ್ರಾಕ್ಷಿ ಬೆಳೆಯುವಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಫೇಮಸ್. ಪ್ರತಿ ವರ್ಷ ಸೀಸನ್​ನಲ್ಲಿ ದ್ರಾಕ್ಷಿ ಬೆಳೆದು ಲಕ್ಷಾಂತರ ರೂಪಾಯಿ ಸಂಪಾದನೆ ಮಾಡುವುದರ ಮೂಲಕ ನೆಮ್ಮದಿ ಬದುಕು ಕಟ್ಟಿಕೊಂಡಿದ್ದರು. ಆದ್ರೆ, ಈ ಭಾರಿಯ ರಣ ಬಿಸಿಲಿನ ತಾಪಮಾನ ಮತ್ತು ಉಷ್ಣಾಂಶದಿಂದ ದ್ರಾಕ್ಷಿ ಬೆಳೆ ರಕ್ಷಣೆ ಮಾಡಿಕೊಳ್ಳುವುದೇ ದೊಡ್ಡ ಸಾಹಸವಾಗಿದೆ. ಈ ಕುರಿತ ಒಂದು ಸ್ಟೋರಿ ಇಲ್ಲಿದೆ.

ರಣ ಬಿಸಿಲಿನಿಂದ ಬಳ್ಳಿಯಲ್ಲೇ ಬಾಡ್ತಿದೆ ದ್ರಾಕ್ಷಿ; ವಾಟರ್ ಸ್ಪ್ರೇ ಮಾಡುವ ಮೂಲಕ ರಕ್ಷಣೆಗೆ ಮುಂದಾದ ರೈತ
ಚಿಕ್ಕಬಳ್ಳಾಪುರದಲ್ಲಿ ರಣ ಬಿಸಿಲಿನಿಂದ ಬಳ್ಳಿಯಲ್ಲೇ ಬಾಡ್ತಿದೆ ದ್ರಾಕ್ಷಿ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on: May 10, 2024 | 6:59 PM

ಚಿಕ್ಕಬಳ್ಳಾಪುರ, ಮೇ.10: ಚಿಕ್ಕಬಳ್ಳಾಪುರ ಜಿಲ್ಲೆಯೂ ದ್ರಾಕ್ಷಿ ಬೆಳೆ(Grape crop)ಗೆ ಹೆಸರುವಾಸಿಯಾಗಿದೆ. ಅದರಂತೆ ಪ್ರತಿ ವರ್ಷ ಸೀಸನ್​ನಲ್ಲಿಯೂ ದ್ರಾಕ್ಷಿ ಬೆಳೆದು ಲಕ್ಷಾಂತರ ರೂಪಾಯಿ ಸಂಪಾದನೆ ಮಾಡಿ ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದರು. ಆದರೆ, ಈ ಬಾರಿ ರಣ ಬಿಸಿಲಿನ ತಾಪ ಹಾಗೂ ಉಷ್ಣತೆ ಹೆಚ್ಚಾದ ಪರಿಣಾಮ ಬಳ್ಳಿಯಲ್ಲಿಯೇ ದ್ರಾಕ್ಷಿ ಬಾಡಿ ಹೋಗುತ್ತಿದೆ. ಮತ್ತೊಂದೆಡೆ ದ್ರಾಕ್ಷಿಗೆ ಕಾಯಿಲೆ ಆರಂಭವಾಗಿದೆ. ಇದರಿಂದ ಪ್ರತಿನಿತ್ಯ ಔಷಧಿ ಸಿಂಪಡಿಸುವ ಜೊತೆಗೆ ಬೂಮರ್ ಯಂತ್ರಗಳ ಮೂಲಕ ದಿನಕ್ಕೆ ನಾಲ್ಕು ಬಾರಿ ವಾಟರ್ ಸ್ಪ್ರೇ ಮಾಡುವುದರ ಮೂಲಕ ದ್ರಾಕ್ಷಿಯನ್ನು ರಕ್ಷಣೆ ಮಾಡಿಕೊಳ್ಳವಂತಾಗಿದೆ.

ಇನ್ನು ಚಿಕ್ಕಬಳ್ಳಾಪರ ತಾಲ್ಲೂಕಿನ ದೊಡ್ಡಮರಳಿ ಗ್ರಾಮದ ರೈತ ಸಹೋದರರಾದ ವೆಂಕಟೇಶ ಹಾಗೂ ಮಂಜುನಾಥ್, ತಮ್ಮ ಎರಡೂವರೆ ಎಕರೆ ತೋಟದಲ್ಲಿ ಸುಮಾರು ಹತ್ತು ಲಕ್ಷ ಖರ್ಚು ಮಾಡಿ ರೆಡ್ ಗ್ಲೋಬ್ ಎಂಬ ಆಸ್ಟ್ರೇಲಿಯನ್ ಬ್ರೀಡ್ ದ್ರಾಕ್ಷಿ ಬೆಳೆದಿದ್ದಾರೆ. ಒಂದು ಕೆಜಿ ರೆಡ್ ಗ್ಲೋಬ್ ದ್ರಾಕ್ಷಿಯ ಬೆಲೆ ಬರೊಬ್ಬರಿ ನೂರ ಇಪ್ಪತ್ತರಿಂದ ನೂರೈವತ್ತು ರೂಪಾಯಿವರೆಗೂ ಮಾರಾಟವಾಗುತ್ತಿದೆ. ಆದ್ರೆ, ಈಗ ಬಿಸಿಲಿನಿಂದ ಬೆಳೆ ರಕ್ಷಣೆ ಮಾಡಿಕೊಳ್ಳುವುದೆ ಒಂದು ಸಾಹಸವಾಗಿದೆ.

ಇದನ್ನೂ ಓದಿ:ವಿಜಯಪುರ: ಒಣದ್ರಾಕ್ಷಿ ಬೆಳೆದ ರೈತನಿಗೆ ಬೆಲೆ ಕುಸಿತದ ಬರೆ; ಬೆಂಬಲ ಬೆಲೆ ನಿಗದಿ ಮಾಡಲು ಸರ್ಕಾರಕ್ಕೆ ಮನವಿ

ಒಟ್ಟಿನಲ್ಲಿ ಕುಂಬಾರನಿಗೆ ವರ್ಷ ದೊಣ್ಣೆಗೆ ನಿಮಿಷ ಎಂಬ ಗಾದೆ ಮಾತಿನ ಹಾಗೆ ವರ್ಷಾನುಗಟ್ಟಲೇ ಬೆವರು ಸುರಿಸಿ ಬೆಳೆದ ದ್ರಾಕ್ಷಿ ಬೆಳೆಯನ್ನು ರಣ ಬಿಸಿಲು ಕೆಲವೇ ದಿನಗಳಲ್ಲಿ ನಾಶವಾಗುವಂತೆ ಮಾಡುತ್ತಿದೆ. ಇದರಿಂದ ಬಿಸಿಲಿಗೆ ಸವಾಲ್ ಹಾಕಿರುವ ರೈತರು, ಬೂಮರ್ ಯಂತ್ರದ ಮೂಲಕ ವಾಟರ್ ಸ್ಪ್ರೇ ಮಾಡಿ ರಕ್ಷಣೆಗೆ ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ