AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣ ಬಿಸಿಲಿನಿಂದ ಬಳ್ಳಿಯಲ್ಲೇ ಬಾಡ್ತಿದೆ ದ್ರಾಕ್ಷಿ; ವಾಟರ್ ಸ್ಪ್ರೇ ಮಾಡುವ ಮೂಲಕ ರಕ್ಷಣೆಗೆ ಮುಂದಾದ ರೈತ

ದ್ರಾಕ್ಷಿ ಬೆಳೆಯುವಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಫೇಮಸ್. ಪ್ರತಿ ವರ್ಷ ಸೀಸನ್​ನಲ್ಲಿ ದ್ರಾಕ್ಷಿ ಬೆಳೆದು ಲಕ್ಷಾಂತರ ರೂಪಾಯಿ ಸಂಪಾದನೆ ಮಾಡುವುದರ ಮೂಲಕ ನೆಮ್ಮದಿ ಬದುಕು ಕಟ್ಟಿಕೊಂಡಿದ್ದರು. ಆದ್ರೆ, ಈ ಭಾರಿಯ ರಣ ಬಿಸಿಲಿನ ತಾಪಮಾನ ಮತ್ತು ಉಷ್ಣಾಂಶದಿಂದ ದ್ರಾಕ್ಷಿ ಬೆಳೆ ರಕ್ಷಣೆ ಮಾಡಿಕೊಳ್ಳುವುದೇ ದೊಡ್ಡ ಸಾಹಸವಾಗಿದೆ. ಈ ಕುರಿತ ಒಂದು ಸ್ಟೋರಿ ಇಲ್ಲಿದೆ.

ರಣ ಬಿಸಿಲಿನಿಂದ ಬಳ್ಳಿಯಲ್ಲೇ ಬಾಡ್ತಿದೆ ದ್ರಾಕ್ಷಿ; ವಾಟರ್ ಸ್ಪ್ರೇ ಮಾಡುವ ಮೂಲಕ ರಕ್ಷಣೆಗೆ ಮುಂದಾದ ರೈತ
ಚಿಕ್ಕಬಳ್ಳಾಪುರದಲ್ಲಿ ರಣ ಬಿಸಿಲಿನಿಂದ ಬಳ್ಳಿಯಲ್ಲೇ ಬಾಡ್ತಿದೆ ದ್ರಾಕ್ಷಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: May 10, 2024 | 6:59 PM

Share

ಚಿಕ್ಕಬಳ್ಳಾಪುರ, ಮೇ.10: ಚಿಕ್ಕಬಳ್ಳಾಪುರ ಜಿಲ್ಲೆಯೂ ದ್ರಾಕ್ಷಿ ಬೆಳೆ(Grape crop)ಗೆ ಹೆಸರುವಾಸಿಯಾಗಿದೆ. ಅದರಂತೆ ಪ್ರತಿ ವರ್ಷ ಸೀಸನ್​ನಲ್ಲಿಯೂ ದ್ರಾಕ್ಷಿ ಬೆಳೆದು ಲಕ್ಷಾಂತರ ರೂಪಾಯಿ ಸಂಪಾದನೆ ಮಾಡಿ ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದರು. ಆದರೆ, ಈ ಬಾರಿ ರಣ ಬಿಸಿಲಿನ ತಾಪ ಹಾಗೂ ಉಷ್ಣತೆ ಹೆಚ್ಚಾದ ಪರಿಣಾಮ ಬಳ್ಳಿಯಲ್ಲಿಯೇ ದ್ರಾಕ್ಷಿ ಬಾಡಿ ಹೋಗುತ್ತಿದೆ. ಮತ್ತೊಂದೆಡೆ ದ್ರಾಕ್ಷಿಗೆ ಕಾಯಿಲೆ ಆರಂಭವಾಗಿದೆ. ಇದರಿಂದ ಪ್ರತಿನಿತ್ಯ ಔಷಧಿ ಸಿಂಪಡಿಸುವ ಜೊತೆಗೆ ಬೂಮರ್ ಯಂತ್ರಗಳ ಮೂಲಕ ದಿನಕ್ಕೆ ನಾಲ್ಕು ಬಾರಿ ವಾಟರ್ ಸ್ಪ್ರೇ ಮಾಡುವುದರ ಮೂಲಕ ದ್ರಾಕ್ಷಿಯನ್ನು ರಕ್ಷಣೆ ಮಾಡಿಕೊಳ್ಳವಂತಾಗಿದೆ.

ಇನ್ನು ಚಿಕ್ಕಬಳ್ಳಾಪರ ತಾಲ್ಲೂಕಿನ ದೊಡ್ಡಮರಳಿ ಗ್ರಾಮದ ರೈತ ಸಹೋದರರಾದ ವೆಂಕಟೇಶ ಹಾಗೂ ಮಂಜುನಾಥ್, ತಮ್ಮ ಎರಡೂವರೆ ಎಕರೆ ತೋಟದಲ್ಲಿ ಸುಮಾರು ಹತ್ತು ಲಕ್ಷ ಖರ್ಚು ಮಾಡಿ ರೆಡ್ ಗ್ಲೋಬ್ ಎಂಬ ಆಸ್ಟ್ರೇಲಿಯನ್ ಬ್ರೀಡ್ ದ್ರಾಕ್ಷಿ ಬೆಳೆದಿದ್ದಾರೆ. ಒಂದು ಕೆಜಿ ರೆಡ್ ಗ್ಲೋಬ್ ದ್ರಾಕ್ಷಿಯ ಬೆಲೆ ಬರೊಬ್ಬರಿ ನೂರ ಇಪ್ಪತ್ತರಿಂದ ನೂರೈವತ್ತು ರೂಪಾಯಿವರೆಗೂ ಮಾರಾಟವಾಗುತ್ತಿದೆ. ಆದ್ರೆ, ಈಗ ಬಿಸಿಲಿನಿಂದ ಬೆಳೆ ರಕ್ಷಣೆ ಮಾಡಿಕೊಳ್ಳುವುದೆ ಒಂದು ಸಾಹಸವಾಗಿದೆ.

ಇದನ್ನೂ ಓದಿ:ವಿಜಯಪುರ: ಒಣದ್ರಾಕ್ಷಿ ಬೆಳೆದ ರೈತನಿಗೆ ಬೆಲೆ ಕುಸಿತದ ಬರೆ; ಬೆಂಬಲ ಬೆಲೆ ನಿಗದಿ ಮಾಡಲು ಸರ್ಕಾರಕ್ಕೆ ಮನವಿ

ಒಟ್ಟಿನಲ್ಲಿ ಕುಂಬಾರನಿಗೆ ವರ್ಷ ದೊಣ್ಣೆಗೆ ನಿಮಿಷ ಎಂಬ ಗಾದೆ ಮಾತಿನ ಹಾಗೆ ವರ್ಷಾನುಗಟ್ಟಲೇ ಬೆವರು ಸುರಿಸಿ ಬೆಳೆದ ದ್ರಾಕ್ಷಿ ಬೆಳೆಯನ್ನು ರಣ ಬಿಸಿಲು ಕೆಲವೇ ದಿನಗಳಲ್ಲಿ ನಾಶವಾಗುವಂತೆ ಮಾಡುತ್ತಿದೆ. ಇದರಿಂದ ಬಿಸಿಲಿಗೆ ಸವಾಲ್ ಹಾಕಿರುವ ರೈತರು, ಬೂಮರ್ ಯಂತ್ರದ ಮೂಲಕ ವಾಟರ್ ಸ್ಪ್ರೇ ಮಾಡಿ ರಕ್ಷಣೆಗೆ ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ