AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣ ಬಿಸಿಲಿನಿಂದ ಬಳ್ಳಿಯಲ್ಲೇ ಬಾಡ್ತಿದೆ ದ್ರಾಕ್ಷಿ; ವಾಟರ್ ಸ್ಪ್ರೇ ಮಾಡುವ ಮೂಲಕ ರಕ್ಷಣೆಗೆ ಮುಂದಾದ ರೈತ

ದ್ರಾಕ್ಷಿ ಬೆಳೆಯುವಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಫೇಮಸ್. ಪ್ರತಿ ವರ್ಷ ಸೀಸನ್​ನಲ್ಲಿ ದ್ರಾಕ್ಷಿ ಬೆಳೆದು ಲಕ್ಷಾಂತರ ರೂಪಾಯಿ ಸಂಪಾದನೆ ಮಾಡುವುದರ ಮೂಲಕ ನೆಮ್ಮದಿ ಬದುಕು ಕಟ್ಟಿಕೊಂಡಿದ್ದರು. ಆದ್ರೆ, ಈ ಭಾರಿಯ ರಣ ಬಿಸಿಲಿನ ತಾಪಮಾನ ಮತ್ತು ಉಷ್ಣಾಂಶದಿಂದ ದ್ರಾಕ್ಷಿ ಬೆಳೆ ರಕ್ಷಣೆ ಮಾಡಿಕೊಳ್ಳುವುದೇ ದೊಡ್ಡ ಸಾಹಸವಾಗಿದೆ. ಈ ಕುರಿತ ಒಂದು ಸ್ಟೋರಿ ಇಲ್ಲಿದೆ.

ರಣ ಬಿಸಿಲಿನಿಂದ ಬಳ್ಳಿಯಲ್ಲೇ ಬಾಡ್ತಿದೆ ದ್ರಾಕ್ಷಿ; ವಾಟರ್ ಸ್ಪ್ರೇ ಮಾಡುವ ಮೂಲಕ ರಕ್ಷಣೆಗೆ ಮುಂದಾದ ರೈತ
ಚಿಕ್ಕಬಳ್ಳಾಪುರದಲ್ಲಿ ರಣ ಬಿಸಿಲಿನಿಂದ ಬಳ್ಳಿಯಲ್ಲೇ ಬಾಡ್ತಿದೆ ದ್ರಾಕ್ಷಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: May 10, 2024 | 6:59 PM

Share

ಚಿಕ್ಕಬಳ್ಳಾಪುರ, ಮೇ.10: ಚಿಕ್ಕಬಳ್ಳಾಪುರ ಜಿಲ್ಲೆಯೂ ದ್ರಾಕ್ಷಿ ಬೆಳೆ(Grape crop)ಗೆ ಹೆಸರುವಾಸಿಯಾಗಿದೆ. ಅದರಂತೆ ಪ್ರತಿ ವರ್ಷ ಸೀಸನ್​ನಲ್ಲಿಯೂ ದ್ರಾಕ್ಷಿ ಬೆಳೆದು ಲಕ್ಷಾಂತರ ರೂಪಾಯಿ ಸಂಪಾದನೆ ಮಾಡಿ ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದರು. ಆದರೆ, ಈ ಬಾರಿ ರಣ ಬಿಸಿಲಿನ ತಾಪ ಹಾಗೂ ಉಷ್ಣತೆ ಹೆಚ್ಚಾದ ಪರಿಣಾಮ ಬಳ್ಳಿಯಲ್ಲಿಯೇ ದ್ರಾಕ್ಷಿ ಬಾಡಿ ಹೋಗುತ್ತಿದೆ. ಮತ್ತೊಂದೆಡೆ ದ್ರಾಕ್ಷಿಗೆ ಕಾಯಿಲೆ ಆರಂಭವಾಗಿದೆ. ಇದರಿಂದ ಪ್ರತಿನಿತ್ಯ ಔಷಧಿ ಸಿಂಪಡಿಸುವ ಜೊತೆಗೆ ಬೂಮರ್ ಯಂತ್ರಗಳ ಮೂಲಕ ದಿನಕ್ಕೆ ನಾಲ್ಕು ಬಾರಿ ವಾಟರ್ ಸ್ಪ್ರೇ ಮಾಡುವುದರ ಮೂಲಕ ದ್ರಾಕ್ಷಿಯನ್ನು ರಕ್ಷಣೆ ಮಾಡಿಕೊಳ್ಳವಂತಾಗಿದೆ.

ಇನ್ನು ಚಿಕ್ಕಬಳ್ಳಾಪರ ತಾಲ್ಲೂಕಿನ ದೊಡ್ಡಮರಳಿ ಗ್ರಾಮದ ರೈತ ಸಹೋದರರಾದ ವೆಂಕಟೇಶ ಹಾಗೂ ಮಂಜುನಾಥ್, ತಮ್ಮ ಎರಡೂವರೆ ಎಕರೆ ತೋಟದಲ್ಲಿ ಸುಮಾರು ಹತ್ತು ಲಕ್ಷ ಖರ್ಚು ಮಾಡಿ ರೆಡ್ ಗ್ಲೋಬ್ ಎಂಬ ಆಸ್ಟ್ರೇಲಿಯನ್ ಬ್ರೀಡ್ ದ್ರಾಕ್ಷಿ ಬೆಳೆದಿದ್ದಾರೆ. ಒಂದು ಕೆಜಿ ರೆಡ್ ಗ್ಲೋಬ್ ದ್ರಾಕ್ಷಿಯ ಬೆಲೆ ಬರೊಬ್ಬರಿ ನೂರ ಇಪ್ಪತ್ತರಿಂದ ನೂರೈವತ್ತು ರೂಪಾಯಿವರೆಗೂ ಮಾರಾಟವಾಗುತ್ತಿದೆ. ಆದ್ರೆ, ಈಗ ಬಿಸಿಲಿನಿಂದ ಬೆಳೆ ರಕ್ಷಣೆ ಮಾಡಿಕೊಳ್ಳುವುದೆ ಒಂದು ಸಾಹಸವಾಗಿದೆ.

ಇದನ್ನೂ ಓದಿ:ವಿಜಯಪುರ: ಒಣದ್ರಾಕ್ಷಿ ಬೆಳೆದ ರೈತನಿಗೆ ಬೆಲೆ ಕುಸಿತದ ಬರೆ; ಬೆಂಬಲ ಬೆಲೆ ನಿಗದಿ ಮಾಡಲು ಸರ್ಕಾರಕ್ಕೆ ಮನವಿ

ಒಟ್ಟಿನಲ್ಲಿ ಕುಂಬಾರನಿಗೆ ವರ್ಷ ದೊಣ್ಣೆಗೆ ನಿಮಿಷ ಎಂಬ ಗಾದೆ ಮಾತಿನ ಹಾಗೆ ವರ್ಷಾನುಗಟ್ಟಲೇ ಬೆವರು ಸುರಿಸಿ ಬೆಳೆದ ದ್ರಾಕ್ಷಿ ಬೆಳೆಯನ್ನು ರಣ ಬಿಸಿಲು ಕೆಲವೇ ದಿನಗಳಲ್ಲಿ ನಾಶವಾಗುವಂತೆ ಮಾಡುತ್ತಿದೆ. ಇದರಿಂದ ಬಿಸಿಲಿಗೆ ಸವಾಲ್ ಹಾಕಿರುವ ರೈತರು, ಬೂಮರ್ ಯಂತ್ರದ ಮೂಲಕ ವಾಟರ್ ಸ್ಪ್ರೇ ಮಾಡಿ ರಕ್ಷಣೆಗೆ ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು