ರಣ ಬಿಸಿಲಿನಿಂದ ಬಳ್ಳಿಯಲ್ಲೇ ಬಾಡ್ತಿದೆ ದ್ರಾಕ್ಷಿ; ವಾಟರ್ ಸ್ಪ್ರೇ ಮಾಡುವ ಮೂಲಕ ರಕ್ಷಣೆಗೆ ಮುಂದಾದ ರೈತ

ದ್ರಾಕ್ಷಿ ಬೆಳೆಯುವಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಫೇಮಸ್. ಪ್ರತಿ ವರ್ಷ ಸೀಸನ್​ನಲ್ಲಿ ದ್ರಾಕ್ಷಿ ಬೆಳೆದು ಲಕ್ಷಾಂತರ ರೂಪಾಯಿ ಸಂಪಾದನೆ ಮಾಡುವುದರ ಮೂಲಕ ನೆಮ್ಮದಿ ಬದುಕು ಕಟ್ಟಿಕೊಂಡಿದ್ದರು. ಆದ್ರೆ, ಈ ಭಾರಿಯ ರಣ ಬಿಸಿಲಿನ ತಾಪಮಾನ ಮತ್ತು ಉಷ್ಣಾಂಶದಿಂದ ದ್ರಾಕ್ಷಿ ಬೆಳೆ ರಕ್ಷಣೆ ಮಾಡಿಕೊಳ್ಳುವುದೇ ದೊಡ್ಡ ಸಾಹಸವಾಗಿದೆ. ಈ ಕುರಿತ ಒಂದು ಸ್ಟೋರಿ ಇಲ್ಲಿದೆ.

ರಣ ಬಿಸಿಲಿನಿಂದ ಬಳ್ಳಿಯಲ್ಲೇ ಬಾಡ್ತಿದೆ ದ್ರಾಕ್ಷಿ; ವಾಟರ್ ಸ್ಪ್ರೇ ಮಾಡುವ ಮೂಲಕ ರಕ್ಷಣೆಗೆ ಮುಂದಾದ ರೈತ
ಚಿಕ್ಕಬಳ್ಳಾಪುರದಲ್ಲಿ ರಣ ಬಿಸಿಲಿನಿಂದ ಬಳ್ಳಿಯಲ್ಲೇ ಬಾಡ್ತಿದೆ ದ್ರಾಕ್ಷಿ
Edited By: ಕಿರಣ್ ಹನುಮಂತ್​ ಮಾದಾರ್

Updated on: May 10, 2024 | 6:59 PM

ಚಿಕ್ಕಬಳ್ಳಾಪುರ, ಮೇ.10: ಚಿಕ್ಕಬಳ್ಳಾಪುರ ಜಿಲ್ಲೆಯೂ ದ್ರಾಕ್ಷಿ ಬೆಳೆ(Grape crop)ಗೆ ಹೆಸರುವಾಸಿಯಾಗಿದೆ. ಅದರಂತೆ ಪ್ರತಿ ವರ್ಷ ಸೀಸನ್​ನಲ್ಲಿಯೂ ದ್ರಾಕ್ಷಿ ಬೆಳೆದು ಲಕ್ಷಾಂತರ ರೂಪಾಯಿ ಸಂಪಾದನೆ ಮಾಡಿ ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದರು. ಆದರೆ, ಈ ಬಾರಿ ರಣ ಬಿಸಿಲಿನ ತಾಪ ಹಾಗೂ ಉಷ್ಣತೆ ಹೆಚ್ಚಾದ ಪರಿಣಾಮ ಬಳ್ಳಿಯಲ್ಲಿಯೇ ದ್ರಾಕ್ಷಿ ಬಾಡಿ ಹೋಗುತ್ತಿದೆ. ಮತ್ತೊಂದೆಡೆ ದ್ರಾಕ್ಷಿಗೆ ಕಾಯಿಲೆ ಆರಂಭವಾಗಿದೆ. ಇದರಿಂದ ಪ್ರತಿನಿತ್ಯ ಔಷಧಿ ಸಿಂಪಡಿಸುವ ಜೊತೆಗೆ ಬೂಮರ್ ಯಂತ್ರಗಳ ಮೂಲಕ ದಿನಕ್ಕೆ ನಾಲ್ಕು ಬಾರಿ ವಾಟರ್ ಸ್ಪ್ರೇ ಮಾಡುವುದರ ಮೂಲಕ ದ್ರಾಕ್ಷಿಯನ್ನು ರಕ್ಷಣೆ ಮಾಡಿಕೊಳ್ಳವಂತಾಗಿದೆ.

ಇನ್ನು ಚಿಕ್ಕಬಳ್ಳಾಪರ ತಾಲ್ಲೂಕಿನ ದೊಡ್ಡಮರಳಿ ಗ್ರಾಮದ ರೈತ ಸಹೋದರರಾದ ವೆಂಕಟೇಶ ಹಾಗೂ ಮಂಜುನಾಥ್, ತಮ್ಮ ಎರಡೂವರೆ ಎಕರೆ ತೋಟದಲ್ಲಿ ಸುಮಾರು ಹತ್ತು ಲಕ್ಷ ಖರ್ಚು ಮಾಡಿ ರೆಡ್ ಗ್ಲೋಬ್ ಎಂಬ ಆಸ್ಟ್ರೇಲಿಯನ್ ಬ್ರೀಡ್ ದ್ರಾಕ್ಷಿ ಬೆಳೆದಿದ್ದಾರೆ. ಒಂದು ಕೆಜಿ ರೆಡ್ ಗ್ಲೋಬ್ ದ್ರಾಕ್ಷಿಯ ಬೆಲೆ ಬರೊಬ್ಬರಿ ನೂರ ಇಪ್ಪತ್ತರಿಂದ ನೂರೈವತ್ತು ರೂಪಾಯಿವರೆಗೂ ಮಾರಾಟವಾಗುತ್ತಿದೆ. ಆದ್ರೆ, ಈಗ ಬಿಸಿಲಿನಿಂದ ಬೆಳೆ ರಕ್ಷಣೆ ಮಾಡಿಕೊಳ್ಳುವುದೆ ಒಂದು ಸಾಹಸವಾಗಿದೆ.

ಇದನ್ನೂ ಓದಿ:ವಿಜಯಪುರ: ಒಣದ್ರಾಕ್ಷಿ ಬೆಳೆದ ರೈತನಿಗೆ ಬೆಲೆ ಕುಸಿತದ ಬರೆ; ಬೆಂಬಲ ಬೆಲೆ ನಿಗದಿ ಮಾಡಲು ಸರ್ಕಾರಕ್ಕೆ ಮನವಿ

ಒಟ್ಟಿನಲ್ಲಿ ಕುಂಬಾರನಿಗೆ ವರ್ಷ ದೊಣ್ಣೆಗೆ ನಿಮಿಷ ಎಂಬ ಗಾದೆ ಮಾತಿನ ಹಾಗೆ ವರ್ಷಾನುಗಟ್ಟಲೇ ಬೆವರು ಸುರಿಸಿ ಬೆಳೆದ ದ್ರಾಕ್ಷಿ ಬೆಳೆಯನ್ನು ರಣ ಬಿಸಿಲು ಕೆಲವೇ ದಿನಗಳಲ್ಲಿ ನಾಶವಾಗುವಂತೆ ಮಾಡುತ್ತಿದೆ. ಇದರಿಂದ ಬಿಸಿಲಿಗೆ ಸವಾಲ್ ಹಾಕಿರುವ ರೈತರು, ಬೂಮರ್ ಯಂತ್ರದ ಮೂಲಕ ವಾಟರ್ ಸ್ಪ್ರೇ ಮಾಡಿ ರಕ್ಷಣೆಗೆ ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
Follow Us