AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಸಿನಿಮೀಯ ಶೈಲಿಯಲ್ಲಿ ಕೊಲೆಗೆ ಯತ್ನ: ಅದೃಷ್ಟವಶಾತ್​ ಪಾರಾದ ಇಬ್ಬರು ಯುವಕರು, ಬಂಧನ

Chikkaballapur News: ಇಬ್ಬರು ಯುವಕರ ಮಧ್ಯೆ ಇದ್ದ ವೈಯಕ್ತಿಕ ವೈಶಮ್ಯ, ಲಾಂಗು-ಮಚ್ಚುಗಳಿಂದ ಅಟ್ಟಾಡಿಸಿ ಕೊಲೆ ಯತ್ನ ಮಾಡುವವರೆಗೂ ಹೋಗಿದ್ದು, ಅದೃಷ್ಟವಶಾತ್ ಇಬ್ಬರು ಯುವಕರು ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ಸದ್ಯ ಆರೋಪಿಗಳನ್ನು ಚಿಕ್ಕಬಳ್ಳಾಪುರ ನಗರಠಾಣೆ ಪೊಲೀಸರು ಬಂಧಿಸಿ ವಿಚಾರಣೆ ಮಾಡಿದ್ದಾರೆ.

ಚಿಕ್ಕಬಳ್ಳಾಪುರ: ಸಿನಿಮೀಯ ಶೈಲಿಯಲ್ಲಿ ಕೊಲೆಗೆ ಯತ್ನ: ಅದೃಷ್ಟವಶಾತ್​ ಪಾರಾದ ಇಬ್ಬರು ಯುವಕರು, ಬಂಧನ
ಬಂಧಿತರು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ|

Updated on:Sep 21, 2023 | 7:59 PM

Share

ಚಿಕ್ಕಬಳ್ಳಾಪುರ, ಸೆಪ್ಟೆಂಬರ್​ 21: ಇಬ್ಬರು ಯುವಕರ ಮಧ್ಯೆ ಇದ್ದ ವೈಯಕ್ತಿಕ ವೈಶಮ್ಯ, ಲಾಂಗು-ಮಚ್ಚುಗಳಿಂದ ಅಟ್ಟಾಡಿಸಿ ಕೊಲೆ ಯತ್ನ ಮಾಡುವವರೆಗೂ ಹೋಗಿದ್ದು, ಅದೃಷ್ಟವಶಾತ್ ಇಬ್ಬರು ಯುವಕರು ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಚಿಕ್ಕಬಳ್ಳಾಪುರ (Chikkaballapur) ನಗರದಲ್ಲಿ ನಡೆದಿದೆ. ಲಾಂಗು, ಮಚ್ಚು ಹಿಡಿದು ಅಟ್ಟಾಡಿಸುತ್ತಿರುವ ದೃಶ್ಯ ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಕೆಲಕಾಲ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಘಟನೆ ಹಿನ್ನಲೆ ಏನು?

ಅಸಲಿಗೆ ಚಿಕ್ಕಬಳ್ಳಾಪುರ ನಗರದ ಡಿವೈನ್ ಸಿಟಿ ನಿವಾಸಿ ಬಿ.ಎನ್.ನರಸಿಂಹಮೂರ್ತಿ ಅಲಿಯಾಸ್ ವಿಕ್ಕಿ, ಜಿಮ್ ಕೋಚರ್ ಹಾಗೂ ಎಲ್.ಎಲ್.ಬಿ. ವಿದ್ಯಾರ್ಥಿ ಚಿಕ್ಕಬಳ್ಳಾಪುರ ತಾಲ್ಲೂಕಿನ ಬೊಮ್ಮಗಾನಹಳ್ಳಿ ಗ್ರಾಮದ ನಿವಾಸಿ ಹೆಚ್.ಪಿ.ಚಂದ್ರಶೇಖರ್ ನಡುವೆ ವೈಯಕ್ತಿಕ ವೈಶಮ್ಯವಿತ್ತಂತೆ. ಕ್ಷುಲ್ಲಕ ಕಾರಣ ಚಂದ್ರಶೇಖರ್ ಹಾಗೂ ಆತನ ತಂಡ ವಿಕ್ಕಿ ತಂಡದ ಇಬ್ಬರು ವಿದ್ಯಾರ್ಥಿಗಳಾದ ನಂದೀಶ್ ಹಾಗೂ ಕಾರ್ತಿಕ ಮೇಲೆ ಹಲ್ಲೆ ಯತ್ನ ಮಾಡಿದ್ದರಂತೆ. ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಚಂದ್ರಶೇಖರ್, ನರಸಿಂಹಮೂರ್ತಿ ಮಧ್ಯೆ ವೈಯಕ್ತಿಕ ದ್ವೇಷ, ಪ್ರತಿಷ್ಠೆ ಬೆಳೆದಿದೆ. ಚಂದ್ರಶೇಖರ್, ನರಸಿಂಹಮೂರ್ತಿಗೆ ಕೊಲೆ ಬೆದರಿಕೆ ಹಾಕಿದ್ದನಂತೆ.

ಲಾಂಗು-ಮಚ್ಚುಗಳಿಂದ ಕೊಲೆಗೆ ಯತ್ನ:

ಎಲ್‌ಎಲ್‌ಬಿ ವಿದ್ಯಾರ್ಥಿ ಚಂದ್ರಶೇಖರ್ ಅಂದುಕೊಂಡಂತೆ ತಮ್ಮ ಸಂಗಡಿಗರಾದ ಚೆಂಡೂರು ಗ್ರಾಮದ ಅರವಿಂದ, ಹರೀಶ, ಪೈಯೂರು ಗ್ರಾಮದ ಪ್ರಸಾದ್ ಮತ್ತು ಬೀಚಗಾನಹಳ್ಳಿ ಕ್ರಾಸ್‌ನ ಹರೀಶ 4 ಜನರಿಗೆ ಸುಫಾರಿ ಕೊಟ್ಟು, ಜಿಮ್‌ಕೋಚರ್ ಬಿ.ಎನ್.ನರಸಿಂಹಮೂರ್ತಿ ಕೊಲೆಗೆ ಕಳುಹಿಸಿಕೊಟ್ಟಿದ್ದನಂತೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಮೋಜು-ಮಸ್ತಿಗಾಗಿ ರೈತರ ನಿದ್ದೆ ಕೆಡೆಸಿದ್ದ ದಾಳಿಂಬೆ ಕಳ್ಳರು, ಟಿವಿ9 ಡಿಜಿಟಲ್ ವರದಿಯಿಂದ ಎಚ್ಚೆತ್ತ ಪೊಲೀಸರು!

ನಿನ್ನೆ ರಾತ್ರಿ 8-45ರ ಸಮಯದಲ್ಲಿ ವಾಪಸಂದ್ರದಲ್ಲಿರುವ ಗಣೇಶೋತ್ಸವದ ಬಳಿ ಬಂದ 4 ಜನರು, ನರಸಿಂಹಮೂರ್ತಿ ಹಾಗೂ ಆತನ ಜೊತೆಗಿದ್ದ ಮಂಜುನಾಥ್ ಮೇಲೆ ಲಾಂಗು-ಮಚ್ಚು ಬೀಸಿದ್ದಾರೆ. ಇದನ್ನರಿತ ನರಸಿಂಹಮೂರ್ತಿ ಹಾಗೂ ಮಂಜುನಾಥ್ ಪ್ರಾಣಾಪಾಯದಿಂದ ದಿಕ್ಕುಪಾಲಾಗಿ ಓಡಿ ಪ್ರಾಣ ಉಳಿಸಿಕೊಂಡಿದ್ದಾರೆ.

ಅಡ್ಡಬಂದ ಸಾರ್ವಜನಿಕರಿಗೆ ಲಾಂಗು-ಮಚ್ಚನಿಂದ ಬೆದರಿಕೆ

ಆರೋಪಿಗಳಾದ ಅರವಿಂದ, ಹರೀಶ, ಪ್ರಸಾದ್ ಮತ್ತು ಬೀಚಗಾನಹಳ್ಳಿ ಕ್ರಾಸ್‌ನ ಹರೀಶ 4 ಜನ ಕೈಯಲ್ಲಿ ಲಾಂಗು-ಮಚ್ಚು ಹಿಡಿದು ನರಸಿಂಹಮೂರ್ತಿ ಹಾಗೂ ಮಂಜುನಾಥನನ್ನು ಅಟ್ಟಾಡಿಸಿಕೊಂಡು ಓಡಿದ್ದಾರೆ. ಆಗ ರಸ್ತೆಯಲ್ಲಿ ಅಡ್ಡಬಂದ ಸಾರ್ವಜನಿಕರತ್ತ ಲಾಂಗು-ಮಚ್ಚು ತೋರಿಸಿ ಬೆದರಿಕೆ ಹಾಕಿದ್ದಾರೆ.

ಆರೋಪಿಗಳ ಅಟ್ಟಹಾಸ ಸಿಸಿ ಕ್ಯಾಮೆರಾಗಳಲ್ಲಿ ಸೆರೆ

ನರಸಿಂಹಮೂರ್ತಿ ಕೊಲೆಗೆ ಬಂದಿದ್ದ 4 ಜನ ಆರೋಪಿಗಳ ಕೃತ್ಯ ಸಿ.ಸಿ. ಟಿವಿಯಲ್ಲಿ ಸೆರೆಯಾಗಿದೆ. ಇಬ್ಬರು ಯುವಕರು ಮುಂದೆ ಓಡಿಹೋಗುವುದು, ಅವರನ್ನು ಬೆನ್ನಟ್ಟಿ ಲಾಂಗು-ಮಚ್ಚು ಹಿಡಿದು ಓಡುತ್ತಿರುವ ದೃಶ್ಯ ಸ್ಥಳೀಯರ ಮನೆಯ ಸಿ.ಸಿ.ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಚಂದ್ರಶೇಖರ್ ಸೇರಿ ಆರೋಪಿಗಳ ಬಂಧನ 

ಜಿಮ್ ಕೋಚರ್ ಬಿ.ಎನ್.ನರಸಿಂಹಮೂರ್ತಿ ಅಲಿಯಾಸ್ ವಿಕ್ಕಿ ಕೊಲೆಗೆ ಬಂದಿದ್ದ ಪ್ರಸಾದ್, ಅರವಿಂದ ಸೇರಿ ಕೊಲೆ ಸುಫಾರಿ ನೀಡಿದ್ದ ಎಲ್‌ಎಲ್‌ಬಿ ವಿದ್ಯಾರ್ಥಿ ಚಂದ್ರಶೇಖರ್‌ನನ್ನು ಚಿಕ್ಕಬಳ್ಳಾಪುರ ನಗರಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದು, ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 307, 120ಬಿ, 504, 34 ಹಾಗೂ ಆರ್‌ಎಂಸಿ ಆಕ್ಟ್​ 21(1)ರಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:54 pm, Thu, 21 September 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!