AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​​ ಬುಕ್​​ನಲ್ಲಿ ಗಾಳ, ವಾಟ್ಸಪ್​​ನಲ್ಲಿ ಆಟ: ವಿವಾಹಿತ ಒಂಟಿ ಮಹಿಳೆಯರೇ ಈತನ ಟಾರ್ಗೆಟ್

ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ಯುವಕನೊಬ್ಬ ವಿವಾಹಿತ ಮಹಿಳೆಯರನ್ನು ಮರು ಮದುವೆಯಾಗುವ ನೆಪದಲ್ಲಿ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್ ಮೂಲಕ ಪರಿಚಯಿಸಿಕೊಂಡು ಲಕ್ಷಾಂತರ ರೂ. ವಂಚಿಸಿರುವಂತಹ ಘಟನೆ ಬೆಳಕಿಗೆ ಬಂದಿದೆ. ಪ್ರೀತಿ, ಪ್ರೇಮದ ನಾಟಕವಾಡಿ ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡಿದ್ದಾನೆ. ಸದ್ಯ ಮೂವರು ಸಂತ್ರಸ್ತೆ ಮಹಿಳೆಯರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಫೇಸ್​​ ಬುಕ್​​ನಲ್ಲಿ ಗಾಳ, ವಾಟ್ಸಪ್​​ನಲ್ಲಿ ಆಟ: ವಿವಾಹಿತ ಒಂಟಿ ಮಹಿಳೆಯರೇ ಈತನ ಟಾರ್ಗೆಟ್
ವಂಚಿಸಿದ ಯುವಕ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Nov 20, 2025 | 9:03 PM

Share

ಚಿಕ್ಕಬಳ್ಳಾಪುರ, ನವೆಂಬರ್ 20​: ವಿವಾಹಿತ ಒಂಟಿ ಮಹಿಳೆಯರನ್ನೇ (Women) ಮರು ಮದುವೆ ಮಾಡಿಕೊಳ್ಳುವ ನೆಪದಲ್ಲಿ ಜಿಲ್ಲೆಯ ಚಿಂತಾಮಣಿ ನಗರದ ಯುವಕನೊರ್ವ, ಪ್ರೀತಿ ಪ್ರೇಮ ಕಾಮ ಅಂತೇಲ್ಲಾ ನಂಬಿಸಿ, ಬಳಿಕ ಅವರಿಂದ ಲಕ್ಷ ಲಕ್ಷ ಹಣ ಪಡೆದು ಮಹಾಮೋಸ (Fraud) ಮಾಡಿರುವಂತಹ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಯುವಕನಿಂದ ನೊಂದ ಮೂರು ಜನ ಮಹಿಳೆಯರು ಈಗ ಆಚೆ ಬಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಸಂತ್ರಸ್ಥೆ ಮಹಿಳೆಯರು ಒಂದಲ್ಲಾ ಒಂದು ರೀತಿಯಲ್ಲಿ ಮನೆಯಲ್ಲಿ, ಕುಟುಂಬದಲ್ಲಿ, ಸಂಸಾರದಲ್ಲಿ ನೊಂದು-ಬೆಂದವರು. ತಮ್ಮ ಪಾಡಿಗೆ ತಾವು ಇದ್ದಿದ್ದರೆ ಇಂದು ಈ ಪರಿಸ್ಥಿತಿ ಬರುತ್ತಿರಲಿಲ್ಲವೇನೋ? ಆದರೆ  ಫೇಸ್‌ಬುಕ್, ಇನ್ಸ್ಟಾಗ್ರಾಂ, ವಾಟ್ಸಾಪ್ ಎನ್ನುವ ಮಾಯಾಜಾಲದಲ್ಲಿ ವಿಹರಿಸಲು ಹೋಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆ: ದೇಣಿಗೆ ಕೊಡಿಸುವ ನೆಪದಲ್ಲಿ ವಂಚನೆ: ಎರಡು ದಿನದಲ್ಲೇ 2 ಕೋಟಿ ರೂ ಪಂಗನಾಮ

ಫೇಸ್‌ಬುಕ್​​ನಲ್ಲಿ ಬಂದ ರಿಕ್ವೆಸ್ಟ್ ಎಕ್ಸ್ಪೆಟ್ ಮಾಡಿ ಇವರೆಲ್ಲಾ ಮೋಸದ ಬಲೆಗೆ ಬಿದ್ದಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಸಿ.ಎಂ.ಗಿರಿ ಅಲಿಯಾಸ್ ಸಾಯಿಸುದೀಪ್ ಎನ್ನುವ ನಯವಂಚಕ ಇವರೆಲ್ಲರಿಗೂ ಒಂದಲ್ಲಾ ಒಂದು ರೀತಿಯಲ್ಲಿ ವಂಚಿಸಿ ಹಣ ಪಡೆದು, ಕಿರುಕುಳ ನೀಡಿದ್ದನಂತೆ. ಇದರಿಂದ ಬೇಸತ್ತು ಈಗ ನ್ಯಾಯಕ್ಕಾಗಿ ಸಂತ್ರಸ್ಥರಲ್ಲಿ 3 ಜನ ಮಹಿಳೆಯರು ಚಿಂತಾಮಣಿ ನಗರಠಾಣೆ ಪೊಲೀಸರ ಮೊರೆ ಹೋಗಿದ್ದಾರೆ.

ವಿವಾಹಿತ ಮಹಿಳೆಯರೇ ಟಾರ್ಗೆಟ್

ಅಸಲಿಗೆ ಚಿಂತಾಮಣಿಯ ಸಿ.ಎಂ.ಗಿರೀಶ್ ಅಲಿಯಾಸ್ ಸಾಯಿಸುದೀಪ್ ಎನ್ನುವ ನಯವಂಚಕ ಒಬ್ಬೊಂಟಿ ವಿವಾಹಿತ ಮಹಿಳೆಯರನ್ನೇ ಟಾರ್ಗೆಟ್ ಮಾಡಿ, ಫೇಸ್‌ಬುಕ್​​ ಮೂಲಕ ಪರಿಚಯ ಮಾಡಿಕೊಂಡು ಚಿನ್ನ, ರನ್ನ, ಬಂಗಾರ, ನೀನೇ ನನ್ನ ಜೀವನದ ಸಿಂಗಾರಿ ಎಂದು ನಂಬಿಸಿ ಮರುಮದುವೆ ಮಾಡಿಕೊಳ್ಳುವ ನೆಪದಲ್ಲಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದು, ಜೊತೆಗೆ ವಿಡಿಯೋ, ಆಡಿಯೋಗಳನ್ನು ಇಟ್ಟುಕೊಂಡಿದ್ದಾನೆ.

ನಂದಗುಡಿ, ಬೆಂಗಳೂರು, ಚಿಕ್ಕಬಳ್ಳಾಪುರ, ಬಂಗಾರಪೇಟೆ ಸೇರಿದಂತೆ 5ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿ ಅವರಿಂದ ಲಕ್ಷಾಂತರ ರೂ. ಹಣ ಪಡೆದುಕೊಂಡಿರುವ ಆರೋಪ ಕೇಳಿಬಂದಿದೆ. ಇದರಿಂದ ನೊಂದಿರುವ ಸಂತ್ರಸ್ಥೆಯರು ಸಾಮಾಜಿಕ ಕಾರ್ಯಕರ್ತ ಕೃಷ್ಣಮೂರ್ತಿ ಅವರ ಮೂಲಕ ಚಿಂತಾಮಣಿ ನಗರಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 7.11 ಕೋಟಿ ರೂ.ದರೋಡೆ: ತಿರುಪತಿಯಲ್ಲಿ ಕಾರು ಪತ್ತೆ, ಇಬ್ಬರು ಶಂಕಿತರು ವಶಕ್ಕೆ

ಮೊದಲೇ ನೊಂದು-ಬೆಂದು ದುಃಖದಲ್ಲಿದ್ದ ವಿವಾಹಿತ ಮಹಿಳೆಯರ ಜೊತೆ ಚೆಲ್ಲಾಟವಾಡಿರುವ ನಯವಂಚಕ ಯುವಕನಿಗೆ ಪೋಲಿಸರು ಬುದ್ಧಿ ಕಲಿಸಬೇಕಿದೆ. ಮತ್ತೊಂದಡೆ ಸಾಮಾಜಿಕ ಜಾಲತಾಣದಲ್ಲಿ  ಮುಳುಗಿ ಹೋಗಿರುವ ಮಹಿಳೆಯರು ಈಗಲಾದರೂ ಜಾಣರಾಗಿ, ಜಾಗೃತರಾಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ