AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಹಾಸ್ಟೆಲ್​ನಲ್ಲಿ ಉಪಹಾರ ಸೇವಿಸಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ವಾರ್ಡನ್​ ಅಮಾನತು

Chikkaballapur News: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆ.ರಾಗುಟ್ಟಹಳ್ಳಿ ಮೆಟ್ರಿಕ್ ಪೂರ್ವ ಬಾಲಕರ ಹಾಸ್ಟೆಲ್​ನಲ್ಲಿ ಇಂದು ಬೆಳಿಗ್ಗೆ ಉಪಹಾರ ಸೇವಿಸಿದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೈಕಿ, 30 ವಿದ್ಯಾರ್ಥಿಗಳು ವಾಂತಿ, ಭೇದಿಯಿಂದ ನರಳಾಡಿದ್ದು, ಅಸ್ವಸ್ಥರಾಗಿರುವಂತಹ ಘಟನೆ ನಡೆದಿದೆ. ಸದ್ಯ ಹಾಸ್ಟೆಲ್​ನಲ್ಲೇ ಚಿಕಿತ್ಸೆ ನೀಡಲಾಗಿದೆ.

ಚಿಕ್ಕಬಳ್ಳಾಪುರ: ಹಾಸ್ಟೆಲ್​ನಲ್ಲಿ ಉಪಹಾರ ಸೇವಿಸಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ವಾರ್ಡನ್​ ಅಮಾನತು
ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Aug 16, 2023 | 4:18 PM

Share

ಚಿಕ್ಕಬಳ್ಳಾಪುರ, ಆಗಸ್ಟ್​ 16: ಹಾಸ್ಟೆಲ್​ನಲ್ಲಿ ತಿಂಡಿ ಮಾಡಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು (students) ಅಸ್ವಸ್ಥರಾಗಿರುವಂತಹ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆ.ರಾಗುಟ್ಟಹಳ್ಳಿ ಮೆಟ್ರಿಕ್ ಪೂರ್ವ ಬಾಲಕರ ಹಾಸ್ಟೆಲ್​ನಲ್ಲಿ ನಡೆದಿದೆ. 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬೆಳಗ್ಗೆ ಉಪಹಾರಕ್ಕೆ ಇಡ್ಲಿ, ಸಾಂಬರ್​ ಸೇವಿಸಿದ್ದರು. ಬಳಿಕ ವಾಂತಿ, ಭೇದಿ ಶುರುವಾಗಿದೆ. ಸದ್ಯ ಹಾಸ್ಟೆಲ್​ಗೆ ವೈದ್ಯರು ಭೇಟಿ ನೀಡಿದ್ದು, ಅಸ್ವಸ್ಥಗೊಂಡ ಕೆಲವು ವಿದ್ಯಾರ್ಥಿಗಳಿಗೆ ಹಾಸ್ಟೆಲ್​ನಲ್ಲೇ ಚಿಕಿತ್ಸೆ ನೀಡಿದ್ದಾರೆ. ಮತ್ತೆ ಕೆಲವು ವಿದ್ಯಾರ್ಥಿಗಳನ್ನು ಚಿಂತಾಮಣಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್​ ವಾರ್ಡನ್ ಕೆ.ಎನ್. ನಾಗಮಣಿ ವಿರುದ್ದ ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರು. ಸದ್ಯ ನಿರ್ಲಕ್ಷ್ಯ ಆರೋಪ ಕೂಡ ಕೇಳಿಬಂದಿದ್ದು, ಕರ್ತವ್ಯದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ.

ನೆಚ್ಚಿನ ಶಿಕ್ಷಕನ ವರ್ಗಾವಣೆ: ಅತ್ತು ಅತ್ತು ಅಸ್ವಸ್ಥರಾದ ವಿದ್ಯಾರ್ಥಿಗಳು

ಕಲಬುರಗಿ: ನೆಚ್ಚಿನ ಶಿಕ್ಷಕ ವರ್ಗಾವಣೆಯಾಗಿದ್ದಕ್ಕೆ ವಿದ್ಯಾರ್ಥಿಗಳು ಕಣ್ಣೀರು ಹಾಕಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ನಾಗಯ್ಯ ಮಠ್​ ಎನ್ನುವವರು ವರ್ಗಾವಣೆಯಾಗಿದೆ.

ಇದನ್ನೂ ಓದಿ: ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ ಹೊಟ್ಟೆನೋವು, ವಾಂತಿಭೇದಿ: 27ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಹೀಗಾಗಿ ವಿದ್ಯಾರ್ಥಿನಿಯರು ಕಣ್ಣೀರು ಹಾಕಿದ್ದಾರೆ. ಬಹಳ ಹೊತ್ತು ಅತ್ತಿದ್ದರಿಂದ, ಕೆಲ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಬಳಿಕ ಸೇಡಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

ವಿದ್ಯಾರ್ಥಿಗಳಿಗೆ ಬಸ್​ ನಿಲ್ಲಿಸದ ಕೆಎಸ್​ಆರ್​ಟಿಸಿ ಸಿಬ್ಬಂದಿ: ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಕಾರವಾರ: ರಾಜ್ಯ ಹೆದ್ದಾರಿಯ ಅಸಮರ್ಪಕ ರಸ್ತೆಯಿಂದಾಗಿ ವಿದ್ಯಾರ್ಥಿಗಳಿಗೆ ಬಸ್ ನಿಲುಗಡೆ ಮಾಡದೇ ಕೆ.ಎಸ್.ಆರ್.ಟಿ.ಸಿ ಬಸ್ ತೆರಳುತ್ತಿರುವ ಹಿನ್ನಲೆಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ- ಹಾವೇರಿ ಹೆದ್ದಾರಿ ತಡೆದು ಇತ್ತೀಚೆಗೆ ಪ್ರತಿಭಟನೆ ಮಾಡಲಾಗಿತ್ತು. ಶಿರಸಿಯ ಬಿಸಲಕೊಪ್ಪ ಗ್ರಾಮಪಂಚಾಯ್ತಿ ವ್ಯಾಪ್ತಿಯ ಮಳಲಗಾಂವ್​ನಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಮತ್ತು ರೈತ ಸಂಘದ ಸದಸ್ಯರು ಶೀಘ್ರದಲ್ಲಿ ರಸ್ತೆ ಸರಿಪಡಿಸುವ ಜೊತೆ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಮಳಲಗಾಂವ್​ನಲ್ಲಿ ಬಸ್​ ಅನ್ನು ನಿಲ್ಲಿಸಬೇಕು.

ಇದನ್ನೂ ಓದಿ: ಕಾರವಾರ: ಚಾಕೊಲೇಟ್​​ ಎಂದು ಪ್ಯಾಂಟ್ ಬಟನ್​ ನುಂಗಿದ ಹಸುಳೆ: ಜೀವ ಉಳಿಸಿದ ಸರಕಾರಿ ಆಸ್ಪತ್ರೆ ವೈದ್ಯರು

ಹೆದ್ದಾರಿಯಲ್ಲಿ ಅರ್ಧಕ್ಕೆ ನಿಲ್ಲಿಸಿರುವ ಕಾಮಗಾರಿಯನ್ನು ಶೀಘ್ರದಲ್ಲಿ ಮುಗಿಸಬೇಕು ಎಂದು ಆಗ್ರಹಿಸಿದ್ದಾರೆ. ಪ್ರತಿಭಟನೆ ಹಿನ್ನಲೆಯಲ್ಲಿ ಶಿರಸಿ-ಹಾವೇರಿ ಹೆದ್ದಾರಿ ಮಾರ್ಗದಲ್ಲಿ ಕೆಲವು ಸಮಯ ಸಂಚಾರವ್ಯವಸ್ಥೆ ಅಸ್ತವ್ಯಸ್ತವಾಗಿತ್ತು.

ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಕೆಎಸ್ ಆರ್​ಟಿಸಿ ಅಧಿಕಾರಿಗಳು ಪ್ರತಿಭಟನಾಕಾರರಿಗೆ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:01 pm, Wed, 16 August 23

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ