AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಹಾಸ್ಟೆಲ್​ನಲ್ಲಿ ಉಪಹಾರ ಸೇವಿಸಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ವಾರ್ಡನ್​ ಅಮಾನತು

Chikkaballapur News: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆ.ರಾಗುಟ್ಟಹಳ್ಳಿ ಮೆಟ್ರಿಕ್ ಪೂರ್ವ ಬಾಲಕರ ಹಾಸ್ಟೆಲ್​ನಲ್ಲಿ ಇಂದು ಬೆಳಿಗ್ಗೆ ಉಪಹಾರ ಸೇವಿಸಿದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೈಕಿ, 30 ವಿದ್ಯಾರ್ಥಿಗಳು ವಾಂತಿ, ಭೇದಿಯಿಂದ ನರಳಾಡಿದ್ದು, ಅಸ್ವಸ್ಥರಾಗಿರುವಂತಹ ಘಟನೆ ನಡೆದಿದೆ. ಸದ್ಯ ಹಾಸ್ಟೆಲ್​ನಲ್ಲೇ ಚಿಕಿತ್ಸೆ ನೀಡಲಾಗಿದೆ.

ಚಿಕ್ಕಬಳ್ಳಾಪುರ: ಹಾಸ್ಟೆಲ್​ನಲ್ಲಿ ಉಪಹಾರ ಸೇವಿಸಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ವಾರ್ಡನ್​ ಅಮಾನತು
ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Aug 16, 2023 | 4:18 PM

Share

ಚಿಕ್ಕಬಳ್ಳಾಪುರ, ಆಗಸ್ಟ್​ 16: ಹಾಸ್ಟೆಲ್​ನಲ್ಲಿ ತಿಂಡಿ ಮಾಡಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು (students) ಅಸ್ವಸ್ಥರಾಗಿರುವಂತಹ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆ.ರಾಗುಟ್ಟಹಳ್ಳಿ ಮೆಟ್ರಿಕ್ ಪೂರ್ವ ಬಾಲಕರ ಹಾಸ್ಟೆಲ್​ನಲ್ಲಿ ನಡೆದಿದೆ. 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬೆಳಗ್ಗೆ ಉಪಹಾರಕ್ಕೆ ಇಡ್ಲಿ, ಸಾಂಬರ್​ ಸೇವಿಸಿದ್ದರು. ಬಳಿಕ ವಾಂತಿ, ಭೇದಿ ಶುರುವಾಗಿದೆ. ಸದ್ಯ ಹಾಸ್ಟೆಲ್​ಗೆ ವೈದ್ಯರು ಭೇಟಿ ನೀಡಿದ್ದು, ಅಸ್ವಸ್ಥಗೊಂಡ ಕೆಲವು ವಿದ್ಯಾರ್ಥಿಗಳಿಗೆ ಹಾಸ್ಟೆಲ್​ನಲ್ಲೇ ಚಿಕಿತ್ಸೆ ನೀಡಿದ್ದಾರೆ. ಮತ್ತೆ ಕೆಲವು ವಿದ್ಯಾರ್ಥಿಗಳನ್ನು ಚಿಂತಾಮಣಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್​ ವಾರ್ಡನ್ ಕೆ.ಎನ್. ನಾಗಮಣಿ ವಿರುದ್ದ ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರು. ಸದ್ಯ ನಿರ್ಲಕ್ಷ್ಯ ಆರೋಪ ಕೂಡ ಕೇಳಿಬಂದಿದ್ದು, ಕರ್ತವ್ಯದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ.

ನೆಚ್ಚಿನ ಶಿಕ್ಷಕನ ವರ್ಗಾವಣೆ: ಅತ್ತು ಅತ್ತು ಅಸ್ವಸ್ಥರಾದ ವಿದ್ಯಾರ್ಥಿಗಳು

ಕಲಬುರಗಿ: ನೆಚ್ಚಿನ ಶಿಕ್ಷಕ ವರ್ಗಾವಣೆಯಾಗಿದ್ದಕ್ಕೆ ವಿದ್ಯಾರ್ಥಿಗಳು ಕಣ್ಣೀರು ಹಾಕಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ನಾಗಯ್ಯ ಮಠ್​ ಎನ್ನುವವರು ವರ್ಗಾವಣೆಯಾಗಿದೆ.

ಇದನ್ನೂ ಓದಿ: ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ ಹೊಟ್ಟೆನೋವು, ವಾಂತಿಭೇದಿ: 27ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಹೀಗಾಗಿ ವಿದ್ಯಾರ್ಥಿನಿಯರು ಕಣ್ಣೀರು ಹಾಕಿದ್ದಾರೆ. ಬಹಳ ಹೊತ್ತು ಅತ್ತಿದ್ದರಿಂದ, ಕೆಲ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಬಳಿಕ ಸೇಡಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

ವಿದ್ಯಾರ್ಥಿಗಳಿಗೆ ಬಸ್​ ನಿಲ್ಲಿಸದ ಕೆಎಸ್​ಆರ್​ಟಿಸಿ ಸಿಬ್ಬಂದಿ: ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಕಾರವಾರ: ರಾಜ್ಯ ಹೆದ್ದಾರಿಯ ಅಸಮರ್ಪಕ ರಸ್ತೆಯಿಂದಾಗಿ ವಿದ್ಯಾರ್ಥಿಗಳಿಗೆ ಬಸ್ ನಿಲುಗಡೆ ಮಾಡದೇ ಕೆ.ಎಸ್.ಆರ್.ಟಿ.ಸಿ ಬಸ್ ತೆರಳುತ್ತಿರುವ ಹಿನ್ನಲೆಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ- ಹಾವೇರಿ ಹೆದ್ದಾರಿ ತಡೆದು ಇತ್ತೀಚೆಗೆ ಪ್ರತಿಭಟನೆ ಮಾಡಲಾಗಿತ್ತು. ಶಿರಸಿಯ ಬಿಸಲಕೊಪ್ಪ ಗ್ರಾಮಪಂಚಾಯ್ತಿ ವ್ಯಾಪ್ತಿಯ ಮಳಲಗಾಂವ್​ನಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಮತ್ತು ರೈತ ಸಂಘದ ಸದಸ್ಯರು ಶೀಘ್ರದಲ್ಲಿ ರಸ್ತೆ ಸರಿಪಡಿಸುವ ಜೊತೆ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಮಳಲಗಾಂವ್​ನಲ್ಲಿ ಬಸ್​ ಅನ್ನು ನಿಲ್ಲಿಸಬೇಕು.

ಇದನ್ನೂ ಓದಿ: ಕಾರವಾರ: ಚಾಕೊಲೇಟ್​​ ಎಂದು ಪ್ಯಾಂಟ್ ಬಟನ್​ ನುಂಗಿದ ಹಸುಳೆ: ಜೀವ ಉಳಿಸಿದ ಸರಕಾರಿ ಆಸ್ಪತ್ರೆ ವೈದ್ಯರು

ಹೆದ್ದಾರಿಯಲ್ಲಿ ಅರ್ಧಕ್ಕೆ ನಿಲ್ಲಿಸಿರುವ ಕಾಮಗಾರಿಯನ್ನು ಶೀಘ್ರದಲ್ಲಿ ಮುಗಿಸಬೇಕು ಎಂದು ಆಗ್ರಹಿಸಿದ್ದಾರೆ. ಪ್ರತಿಭಟನೆ ಹಿನ್ನಲೆಯಲ್ಲಿ ಶಿರಸಿ-ಹಾವೇರಿ ಹೆದ್ದಾರಿ ಮಾರ್ಗದಲ್ಲಿ ಕೆಲವು ಸಮಯ ಸಂಚಾರವ್ಯವಸ್ಥೆ ಅಸ್ತವ್ಯಸ್ತವಾಗಿತ್ತು.

ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಕೆಎಸ್ ಆರ್​ಟಿಸಿ ಅಧಿಕಾರಿಗಳು ಪ್ರತಿಭಟನಾಕಾರರಿಗೆ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:01 pm, Wed, 16 August 23

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು