AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವಂತವಾಗಿ ಹೂತುಹಾಕಿದ ದುರುಳರು: ಗುಂಡಿಯಿಂದ ಎದ್ದು ಬಂದ ಯೋಗ ಶಿಕ್ಷಕಿ, ಮುಂದೇನಾಯ್ತು?

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯೋಗ ಶಿಕ್ಷಕಿಯ ಅಪಹರಣ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ದಿಬ್ಬೂರಹಳ್ಳಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಅಕ್ಟೋಬರ್ 23 ರಂದು ಶಿಕ್ಷಕಿಯನ್ನು ಅಪಹರಿಸಿ, ಅತ್ಯಾಚಾರ ಮತ್ತು ಕೊಲೆಗೆ ಯತ್ನಿಸಿ ಗುಂಡಿಯಲ್ಲಿ ಹೂತುಹಾಕಲಾಗಿತ್ತು. ಆದರೆ ಸತ್ತಂತೆ ನಟಿಸಿ ಪ್ರಾಣಾಪಾಯದಿಂದ ಪಾರಾಗಿದ್ದರು.

ಜೀವಂತವಾಗಿ ಹೂತುಹಾಕಿದ ದುರುಳರು: ಗುಂಡಿಯಿಂದ ಎದ್ದು ಬಂದ ಯೋಗ ಶಿಕ್ಷಕಿ, ಮುಂದೇನಾಯ್ತು?
ಜೀವಂತವಾಗಿ ಹೂತುಹಾಕಿದ ದುರುಳರು: ಗುಂಡಿಯಿಂದ ಎದ್ದು ಬಂದ ಯೋಗ ಶಿಕ್ಷಕಿ, ಮುಂದೇನಾಯ್ತು?
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Nov 07, 2024 | 6:13 PM

Share

ಚಿಕ್ಕಬಳ್ಳಾಪುರ, ನವೆಂಬರ್​ 07: ಯೋಗ ಶಿಕ್ಷಕಿಯನ್ನು (Yoga teacher) ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್‌ರೆಡ್ಡಿ, ರಮಣ, ಸಲ್ಮಾನ್, ರವಿ ಎಂಬುವವರನ್ನು ದಿಬ್ಬೂರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಅಪಹರಣಕ್ಕೊಳಗಾಗಿದ್ದ ಯೋಗ ಶಿಕ್ಷಕಿ ಮೂಲತಃ ದೇವನಹಳ್ಳಿ ತಾಲೂಕಿನವರು. ಮದುವೆಯಾಗಿ ಪತಿಯಿಂದ ಪ್ರತ್ಯೇಕವಾಗಿ ವಾಸವಿದ್ದರು. ಶಿಕ್ಷಕಿ ಬಳಿ ಸತೀಶ್‌ರೆಡ್ಡಿ​ ಯೋಗ ಕಲಿಯುವುದಕ್ಕೆ ಹೋಗುತ್ತಿದ್ದ. ನಂತರ ಗನ್ ತರಬೇತಿ ನೀಡುವುದಾಗಿ ಮನೆಗೆ ಬಂದಿದ್ದ. ಸತೀಶ್‌ರೆಡ್ಡಿ ಮಾಜಿ ಸೈನಿಕ ಎನ್ನಲಾಗಿದೆ. ಕೊಪ್ಪಳದಲ್ಲಿ ಕಾರು ಕದ್ದು ಕಿಡ್ನ್ಯಾಪ್​ಗೆ ಬಳಸಲಾಗಿತ್ತು.

ಇದನ್ನೂ ಓದಿ: ಇನ್ಶೂರೆನ್ಸ್ ದುಡ್ಡಿಗಾಗಿ ಅಳಿಯನ ಹತ್ಯೆ: ಆರೋಪಿಗಳಿಗೆ ತೆಲುಗು ಸಿನೆಮಾ ಪ್ರೇರಣೆ

ಯೋಗ ಶಿಕ್ಷಕಿಯ ಕೊಲೆಗೆ ಆಕೆಯ ಪ್ರಿಯಕರ ಸಂತೋಷ್​ಕುಮಾರ್ ಪತ್ನಿ ಸುಪಾರಿ ನೀಡಿದ್ದ ಆರೋಪ ಕೇಳಿಬಂದಿದೆ. ಸುಪಾರಿ ಪಡೆದಿದ್ದ ಸತೀಶ್​ರೆಡ್ಡಿ & ಗ್ಯಾಂಗ್​ನಿಂದ ಅ.23ರಂದು ಡಿಎಸ್​​ ಮ್ಯಾಕ್ಸ್ ಸನ್ವರ್ತ್​ ಅಪಾರ್ಟ್​ಮೆಂಟ್​ನಿಂದ ಯೋಗ ಶಿಕ್ಷಕಿಯನ್ನು ಕಿಡ್ನ್ಯಾಪ್ ಮಾಡಲಾಗಿದೆ.

ಸತ್ತಂತೆ ನಟಿಸಿ ಗುಂಡಿಯಿಂದ ಎದ್ದು ಬಂದ ಯೋಗ ಶಿಕ್ಷಕಿ

ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಲಾಗಿದೆ. ಆದರೆ ಶಿಕ್ಷಕಿ ಒಪ್ಪದಿದ್ದಾಗ ಸ್ನೇಹಿತರ ಕರೆಸಿ ಕತ್ತು ಹಿಸುಕಿ ಕೊಲೆಗೆ ಯತ್ನಿಸಲಾಗಿದೆ. ಶಿಕ್ಷಕಿ ಸತ್ತು ಹೋಗಿದ್ದಾಳೆಂದು ಭಾವಿಸಿ ಗುಂಡಿ ತೋಡಿ ಆಕೆಯ ಮೇಲೆ ಮರದ ಕೊಂಬೆಗಳನ್ನು ಹಾಕಿ ಹೋಗಿದ್ದರು. ಅದುವರೆಗೂ ಸತ್ತಂತೆ ನಟಿಸಿ, ದುಷ್ಕರ್ಮಿಗಳು ಹೋದ ಬಳಿಕ ಗುಂಡಿಯಿಂದ ಎದ್ದು ಹೊರಬಂದಿದ್ದರು.

ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದು ಇಬ್ಬರು ಪ್ರಿಯಕರ ಜತೆ ಸೇರಿ ಗಂಡನನ್ನೇ ಕೊಂದ ಪತ್ನಿ

ಬಳಿಕ ಸ್ಥಳೀಯರಿಂದ ಬಟ್ಟೆ ಪಡೆದು ದಿಬ್ಬೂರಹಳ್ಳಿ ಠಾಣೆಗೆ ಆಗಮಿಸಿದ್ದಾರೆ. ಕೊಲೆಗೆ ಯತ್ನ, ಅಪಹರಣ, ಅತ್ಯಾಚಾರಕ್ಕೆ ಯತ್ನಿಸಿದ್ದಾರೆಂದು ದೂರು ನೀಡಿದ್ದಾರೆ. ಮಹಿಳೆ ದೂರು ಆಧರಿಸಿ ಆರೋಪಿಗಳ ಪತ್ತೆಗೆ ಚಿಕ್ಕಬಳ್ಳಾಪುರ ಎಸ್​ಪಿ ಕುಶಾಲ್ ಚೌಕ್ಸೆ ಬಳಿಕ ವಿಶೇಷ ತನಿಖಾ ತಂಡ ರಚಿಸಿ ಸದ್ಯ ಆರೋಪಿಗಳನ್ನು ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:11 pm, Thu, 7 November 24

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ