AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ; ನಗರಸಭೆ ಸದಸ್ಯ, ಹೆಡ್ ಕಾನ್ಸ್​​ಟೇಬಲ್ ಬಂಧನ

ಜೂಜು ಅಡ್ಡೆ ಮೇಲೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಳೆ ಗೌರಿಬಿದನೂರು ನಗರಸಭೆ ಸದಸ್ಯ ಆರ್​.ಪಿ.ಗೋಪಿನಾಥ್, ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಹೆಡ್ ಕಾನ್ಸ್​​ಟೇಬಲ್ ಮೊಹಮ್ಮದ್ ಸೇರಿ 11 ಜನರನ್ನು ಬಂಧಿಸಲಾಗಿದೆ.

ಚಿಕ್ಕಬಳ್ಳಾಪುರ: ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ; ನಗರಸಭೆ ಸದಸ್ಯ, ಹೆಡ್ ಕಾನ್ಸ್​​ಟೇಬಲ್ ಬಂಧನ
ಜೂಜು ಅಡ್ಡೆ ಮೇಲೆ ದಾಳಿ, ನಗರ ಸಭೆ ಸದಸ್ಯ ಸೇರಿ 11 ಜನರ ಬಂಧನ
ಕಿರಣ್ ಹನುಮಂತ್​ ಮಾದಾರ್
|

Updated on:Mar 22, 2023 | 9:39 AM

Share

ಚಿಕ್ಕಬಳ್ಳಾಪುರ: ಜೂಜು ಅಡ್ಡೆ ಮೇಲೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಳೆ ಗೌರಿಬಿದನೂರು ನಗರಸಭೆ ಸದಸ್ಯ ಆರ್​.ಪಿ.ಗೋಪಿನಾಥ್, ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಹೆಡ್ ಕಾನ್ಸ್​​ಟೇಬಲ್ ಮೊಹಮ್ಮದ್ ಸೇರಿ 11 ಜನರನ್ನು ಬಂಧಿಸಲಾಗಿದೆ. ಜಿಲ್ಲೆಯ ಗೌರಿಬಿದನೂರು ತಾಲೂಕಿನ ಸಾಗಾನಹಳ್ಳಿ ಬಳಿಯ ತೋಟದ ಮನೆಯಲ್ಲಿ ಜೂಜಾಟ ಆಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸರ್ಕಲ್​​ ಇನ್ಸ್​​ಪೆಕ್ಟರ್​ ಸತ್ಯನಾರಾಯಣ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಬಂಧಿತರಿಂದ ಒಂದೂವರೆ ಲಕ್ಷ ಹಣ ನಗದು ಜಪ್ತಿ ಮಾಡಲಾಗಿದೆ.

ಮೊಬೈಲ್ ದೋಚುತ್ತಿದ್ದ ಆರೋಪಿಗಳ ಬಂಧನ

ಬೆಂಗಳೂರು: ಒಂಟಿಯಾಗಿ ಹೋಗುತ್ತಿದ್ದವರ ಬಳಿ ಮೊಬೈಲ್ ದೋಚುತ್ತಿದ್ದ ಮೂವರು ಆರೋಪಿಗಳನ್ನ ಇದೀಗ ವಿವೇಕನಗರ ಪೊಲೀಸರು ಬಂಧಿಸಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಐಫೋನ್‌ ಕದಿಯುವ ಗ್ಯಾಂಗ್ ಬೀಡು ಬಿಟ್ಟಿದ್ದು, ಫೋನ್ ಕಳ್ಳತನ ಪ್ರಕರಣಗಳು ನಗರದಲ್ಲಿ ಸರ್ವೇಸಾಮಾನ್ಯವಾಗಿದೆ. ಇನ್ನು ಪೊಲೀಸರ ತನಿಖೆ ವೇಳೆ ಈ ನಟೋರಿಯಸ್ ಗ್ಯಾಂಗ್ ಕೇವಲ ಐಫೋನ್​ಗಳನ್ನ ಮಾತ್ರ ಕದಿಯುತ್ತಿದ್ದರಂತೆ ಎಂಬುದು ಗೊತ್ತಾಗಿದೆ. ಇನ್ನು ಸಾಮಾನ್ಯವಾಗಿ ಐಫೋನ್‌ ಕಳ್ಳತನ ಮಾಡಿದ್ರು ಸುಲಭವಾಗಿ ಆ್ಯಫಲ್ ಐಡಿ ಇದ್ರೆ ಫೋನ್ ಪತ್ತೆ ಮಾಡಬಹುದು ಅನ್ಕೋಂಡಿದ್ದೀರಾ. ಸಾಧ್ಯವೇ ಇಲ್ಲ, ಹೌದು ಇವರ ಕೈಗೆ ಐಫೋನ್‌ ಸಿಕ್ಕಿದ್ರೆ ಮತ್ತೆ ಸಿಗೋದಿಲ್ಲ.

ಇದನ್ನೂ ಓದಿ:Madal Virupakshappa: ಲೋಕಾಯುಕ್ತ ಎಫ್ಐಆರ್ ರದ್ದು ಕೋರಿ ಹೈಕೋರ್ಟ್​​​ಗೆ ಅರ್ಜಿ ಸಲ್ಲಿಸಿದ ಮಾಡಾಳ್ ವಿರೂಪಾಕ್ಷಪ್ಪ

ಹಾಗಾದ್ರೆ ಇವರು ಫೋನ್​ನ್ನ ಇವರು ಏನ್​ ಮಾಡುತ್ತಾರೆ ಗೊತ್ತಾ?

ಬೆಂಗಳೂರಿನಲ್ಲಿ ಫೋನ್ ಕದ್ದು ಹೈದರಾಬಾದ್​ಗೆ ರವಾನೆ ಮಾಡುತ್ತಾರೆ. ಹೈದರಾಬಾದ್ನಲ್ಲಿ ಐಫೋನ್‌ ಬಿಡಿಭಾಗಗಳನ್ನ ತೆಗೆದು ಮದರ್ ಬೋರ್ಡ್ ಸೆಫರೇಟ್ ಮಾಡುತ್ತಾರೆ. ಫೋನ್​ನಲ್ಲಿ ಮದರ್ ಬೋರ್ಡ್ ತೆಗೆದ ನಂತರ ಲೋಕೇಷನ್ ಆಗಲಿ ಐಡಿ ಆಗಲಿ ಏನು ಪತ್ತೆಯಾಗಲ್ಲ. ನಂತರ ಬಿಡಿಭಾಗಗಳನ್ನ ಬೇರೆಡೆ ಮಾರಾಟ ಅಥವಾ ಬೇರೆ ಫೋನ್​ಗಳಿಗೆ ಅಳವಡಿಕೆ ಮಾಡುತ್ತಾರೆ ಈ ಖದೀಮರು. ನಗರದಲ್ಲಿ ಒಂಟಿಯಾಗಿ ಓಡಾಡುವವರನ್ನೇ ಟಾರ್ಗೆಟ್​ ಮಾಡುತ್ತಿದ್ದ ಗ್ಯಾಂಗ್​

ಹೀಗೆ ನಗರದಲ್ಲಿ ಐಫೋನ್‌ ಬಳಸುವ ಜನರನ್ನೆ ಟಾರ್ಗೆಟ್ ಮಾಡುತ್ತಿದ್ದ ಈ ಗ್ಯಾಂಗ್. ರಾತ್ರಿ ವೇಳೆ ಊಟ ಮುಗಿಸಿ ವಾಕ್ ಹೋಗುವವರನ್ನ ಪಾಲೋ ಮಾಡಿ ಐಫೋನ್‌ ಬಳಸುತ್ತಾರೆ ಅಂದರೆ ಮಾತ್ರ ಪ್ಲಾನ್ ಮಾಡಿ ಲಕ್ಷ ಲಕ್ಷ ಬೆಲೆಬಾಳುವ ಐಫೋನ್‌ ಕಸಿದು ಪರಾರಿಯಾಗುತ್ತಿದ್ದರು. ಕೇವಲ ಐಫೋನ್​ಗಳನ್ನ ಕದ್ದು ಕೊರಿಯರ್​ ಮೂಲಕ ಹೈದರಾಬಾದ್​ಗೆ ಕಳಿಸುತ್ತಿದ್ದ ಆರೋಪಿಗಳು. ಆರೋಪಿಗಳ ಖತರ್ನಾಕ್ ಪ್ಲಾನ್ ಪೊಲೀಸರ ತನಿಖೆಯಿಂದ ಬಯಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:36 am, Wed, 22 March 23

Follow Us
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?