AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ; ನಗರಸಭೆ ಸದಸ್ಯ, ಹೆಡ್ ಕಾನ್ಸ್​​ಟೇಬಲ್ ಬಂಧನ

ಜೂಜು ಅಡ್ಡೆ ಮೇಲೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಳೆ ಗೌರಿಬಿದನೂರು ನಗರಸಭೆ ಸದಸ್ಯ ಆರ್​.ಪಿ.ಗೋಪಿನಾಥ್, ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಹೆಡ್ ಕಾನ್ಸ್​​ಟೇಬಲ್ ಮೊಹಮ್ಮದ್ ಸೇರಿ 11 ಜನರನ್ನು ಬಂಧಿಸಲಾಗಿದೆ.

ಚಿಕ್ಕಬಳ್ಳಾಪುರ: ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ; ನಗರಸಭೆ ಸದಸ್ಯ, ಹೆಡ್ ಕಾನ್ಸ್​​ಟೇಬಲ್ ಬಂಧನ
ಜೂಜು ಅಡ್ಡೆ ಮೇಲೆ ದಾಳಿ, ನಗರ ಸಭೆ ಸದಸ್ಯ ಸೇರಿ 11 ಜನರ ಬಂಧನ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Mar 22, 2023 | 9:39 AM

Share

ಮುಖ್ಯಾಂಶಗಳು

  • ಜೂಜು ಅಡ್ಡೆ ಮೇಲೆ ಗೌರಿಬಿದನೂರು ಗ್ರಾಮಾಂತರ ಪೊಲೀಸರಿಂದ ದಾಳಿ
  • ಬೆಂಗಳೂರಿನಲ್ಲಿ ಮೊಬೈಲ್ ದೋಚುತ್ತಿದ್ದ ಆರೋಪಿಗಳ ಬಂಧನ
  • ಫೋನ್ ಕದ್ದು ಹೈದರಾಬಾದ್​ಗೆ ರವಾನೆ ಮಾಡುತ್ತಿದ್ದ ಗ್ಯಾಂಗ್​ ಬಂಧನ

ಚಿಕ್ಕಬಳ್ಳಾಪುರ: ಜೂಜು ಅಡ್ಡೆ ಮೇಲೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಳೆ ಗೌರಿಬಿದನೂರು ನಗರಸಭೆ ಸದಸ್ಯ ಆರ್​.ಪಿ.ಗೋಪಿನಾಥ್, ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಹೆಡ್ ಕಾನ್ಸ್​​ಟೇಬಲ್ ಮೊಹಮ್ಮದ್ ಸೇರಿ 11 ಜನರನ್ನು ಬಂಧಿಸಲಾಗಿದೆ. ಜಿಲ್ಲೆಯ ಗೌರಿಬಿದನೂರು ತಾಲೂಕಿನ ಸಾಗಾನಹಳ್ಳಿ ಬಳಿಯ ತೋಟದ ಮನೆಯಲ್ಲಿ ಜೂಜಾಟ ಆಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸರ್ಕಲ್​​ ಇನ್ಸ್​​ಪೆಕ್ಟರ್​ ಸತ್ಯನಾರಾಯಣ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಬಂಧಿತರಿಂದ ಒಂದೂವರೆ ಲಕ್ಷ ಹಣ ನಗದು ಜಪ್ತಿ ಮಾಡಲಾಗಿದೆ.

ಮೊಬೈಲ್ ದೋಚುತ್ತಿದ್ದ ಆರೋಪಿಗಳ ಬಂಧನ

ಬೆಂಗಳೂರು: ಒಂಟಿಯಾಗಿ ಹೋಗುತ್ತಿದ್ದವರ ಬಳಿ ಮೊಬೈಲ್ ದೋಚುತ್ತಿದ್ದ ಮೂವರು ಆರೋಪಿಗಳನ್ನ ಇದೀಗ ವಿವೇಕನಗರ ಪೊಲೀಸರು ಬಂಧಿಸಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಐಫೋನ್‌ ಕದಿಯುವ ಗ್ಯಾಂಗ್ ಬೀಡು ಬಿಟ್ಟಿದ್ದು, ಫೋನ್ ಕಳ್ಳತನ ಪ್ರಕರಣಗಳು ನಗರದಲ್ಲಿ ಸರ್ವೇಸಾಮಾನ್ಯವಾಗಿದೆ. ಇನ್ನು ಪೊಲೀಸರ ತನಿಖೆ ವೇಳೆ ಈ ನಟೋರಿಯಸ್ ಗ್ಯಾಂಗ್ ಕೇವಲ ಐಫೋನ್​ಗಳನ್ನ ಮಾತ್ರ ಕದಿಯುತ್ತಿದ್ದರಂತೆ ಎಂಬುದು ಗೊತ್ತಾಗಿದೆ. ಇನ್ನು ಸಾಮಾನ್ಯವಾಗಿ ಐಫೋನ್‌ ಕಳ್ಳತನ ಮಾಡಿದ್ರು ಸುಲಭವಾಗಿ ಆ್ಯಫಲ್ ಐಡಿ ಇದ್ರೆ ಫೋನ್ ಪತ್ತೆ ಮಾಡಬಹುದು ಅನ್ಕೋಂಡಿದ್ದೀರಾ. ಸಾಧ್ಯವೇ ಇಲ್ಲ, ಹೌದು ಇವರ ಕೈಗೆ ಐಫೋನ್‌ ಸಿಕ್ಕಿದ್ರೆ ಮತ್ತೆ ಸಿಗೋದಿಲ್ಲ.

ಇದನ್ನೂ ಓದಿ:Madal Virupakshappa: ಲೋಕಾಯುಕ್ತ ಎಫ್ಐಆರ್ ರದ್ದು ಕೋರಿ ಹೈಕೋರ್ಟ್​​​ಗೆ ಅರ್ಜಿ ಸಲ್ಲಿಸಿದ ಮಾಡಾಳ್ ವಿರೂಪಾಕ್ಷಪ್ಪ

ಹಾಗಾದ್ರೆ ಇವರು ಫೋನ್​ನ್ನ ಇವರು ಏನ್​ ಮಾಡುತ್ತಾರೆ ಗೊತ್ತಾ?

ಬೆಂಗಳೂರಿನಲ್ಲಿ ಫೋನ್ ಕದ್ದು ಹೈದರಾಬಾದ್​ಗೆ ರವಾನೆ ಮಾಡುತ್ತಾರೆ. ಹೈದರಾಬಾದ್ನಲ್ಲಿ ಐಫೋನ್‌ ಬಿಡಿಭಾಗಗಳನ್ನ ತೆಗೆದು ಮದರ್ ಬೋರ್ಡ್ ಸೆಫರೇಟ್ ಮಾಡುತ್ತಾರೆ. ಫೋನ್​ನಲ್ಲಿ ಮದರ್ ಬೋರ್ಡ್ ತೆಗೆದ ನಂತರ ಲೋಕೇಷನ್ ಆಗಲಿ ಐಡಿ ಆಗಲಿ ಏನು ಪತ್ತೆಯಾಗಲ್ಲ. ನಂತರ ಬಿಡಿಭಾಗಗಳನ್ನ ಬೇರೆಡೆ ಮಾರಾಟ ಅಥವಾ ಬೇರೆ ಫೋನ್​ಗಳಿಗೆ ಅಳವಡಿಕೆ ಮಾಡುತ್ತಾರೆ ಈ ಖದೀಮರು. ನಗರದಲ್ಲಿ ಒಂಟಿಯಾಗಿ ಓಡಾಡುವವರನ್ನೇ ಟಾರ್ಗೆಟ್​ ಮಾಡುತ್ತಿದ್ದ ಗ್ಯಾಂಗ್​

ಹೀಗೆ ನಗರದಲ್ಲಿ ಐಫೋನ್‌ ಬಳಸುವ ಜನರನ್ನೆ ಟಾರ್ಗೆಟ್ ಮಾಡುತ್ತಿದ್ದ ಈ ಗ್ಯಾಂಗ್. ರಾತ್ರಿ ವೇಳೆ ಊಟ ಮುಗಿಸಿ ವಾಕ್ ಹೋಗುವವರನ್ನ ಪಾಲೋ ಮಾಡಿ ಐಫೋನ್‌ ಬಳಸುತ್ತಾರೆ ಅಂದರೆ ಮಾತ್ರ ಪ್ಲಾನ್ ಮಾಡಿ ಲಕ್ಷ ಲಕ್ಷ ಬೆಲೆಬಾಳುವ ಐಫೋನ್‌ ಕಸಿದು ಪರಾರಿಯಾಗುತ್ತಿದ್ದರು. ಕೇವಲ ಐಫೋನ್​ಗಳನ್ನ ಕದ್ದು ಕೊರಿಯರ್​ ಮೂಲಕ ಹೈದರಾಬಾದ್​ಗೆ ಕಳಿಸುತ್ತಿದ್ದ ಆರೋಪಿಗಳು. ಆರೋಪಿಗಳ ಖತರ್ನಾಕ್ ಪ್ಲಾನ್ ಪೊಲೀಸರ ತನಿಖೆಯಿಂದ ಬಯಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:36 am, Wed, 22 March 23

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ