AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ ಅಂಚೆ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಪರದಾಟ, ತಿಂಗಳುಗಳೇ ಕಳೆದರೂ ವಿತರಣೆಯಾಗದ ದಾಖಲೆಗಳು

ಚಿಕ್ಕಬಳ್ಳಾಪುರ ಆರ್.ಟಿ.ಓ. ಯಿಂದ ದಾಖಲೆಗಳನ್ನು ಪಡೆದಿರುವ ಚಿಕ್ಕಬಳ್ಳಾಪುರ ಅಂಚೆ ಇಲಾಖೆ 1 ತಿಂಗಳಿನಿಂದ ದಾಖಲೆಗಳನ್ನು ಅಂಚೆ ಬಟವಾಡೆ ಮಾಡದೇ ಕಛೇರಿಯಲ್ಲಿಯೇ ಸಂಗ್ರಹಿಸಿಕೊಂಡಿದೆ. ಇದರಿಂದ ಸಾರ್ವಜನಿಕರು ಆರ್.ಟಿ.ಓ ಹಾಗೂ ಅಂಚೆ ಕಛೇರಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ಅಂಚೆ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಪರದಾಟ, ತಿಂಗಳುಗಳೇ ಕಳೆದರೂ ವಿತರಣೆಯಾಗದ ದಾಖಲೆಗಳು
ಚಿಕ್ಕಬಳ್ಳಾಪುರ ಅಂಚೆ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಪರದಾಟ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Dec 16, 2023 | 11:59 AM

Share

ರಾಜ್ಯ ಸಾರಿಗೆ ಇಲಾಖೆಯು ತನ್ನ ಸುಪರ್ದಿಯಲ್ಲಿರುವ ಸಾರ್ವಜನಿಕರ ಎಲ್.ಎಲ್.ಆರ್, ಡಿ.ಎಲ್, ಆರ್.ಸಿ, ವಾಹನ ಟ್ರಾನ್ಸ್ ಫರ್ ದಾಖಲೆಗಳು ಸೇರಿದಂತೆ ವಿವಿಧ ದಾಖಲೆಗಳನ್ನು ಸಾರ್ವಜನಿಕರಿಗೆ ವಿತರಿಸಲು ಅಂಚೆ ಇಲಾಖೆಯ (Chikkaballapur postal department) ಜೊತೆ ಒಪ್ಪಂದ ಮಾಡಿಕೊಂಡಿರುತ್ತದೆ. ಆದರೆ ಆರ್.ಟಿ.ಓ ( rto) ನೀಡುವ ದಾಖಲೆಗಳನ್ನು (documents) ಅಂಚೆ ಇಲಾಖೆ ಒಂದು ತಿಂಗಳಾದರೂ ಸಹಾ ಸಾರ್ವಜನಿಕರಿಗೆ ವಿತರಿಸದೇ ನಿರ್ಲಕ್ಷ್ಯ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಒಂದು ವರದಿ..

ಎಲ್.ಎಲ್.ಆರ್., ಡಿ.ಎಲ್., ಆರ್.ಸಿ., ವಾಹನ ಟ್ರಾನ್ಸ್ ಫರ್ ದಾಖಲೆಗಳು ಸೇರಿದಂತೆ ವಿವಿಧ ದಾಖಲೆಗಳನ್ನು ಸಾರ್ವಜನಿಕರಿಗೆ ವಿತರಿಸಲು ಆರ್.ಟಿ.ಓ ಸಾರಿಗೆ ಇಲಾಖೆ, ಭಾರತೀಯ ಅಂಚೆ ಇಲಾಖೆಯ ಜೊತೆ ಒಪ್ಪಂದ ಮಾಡಿಕೊಂಡಿದೆ. ಆರ್.ಟಿ.ಓ. ಸಾರ್ವಜನಿಕರಿಗೆ ವಿತರಣೆ ಮಾಡುವ ದಾಖಲೆಗಳನ್ನು ಅಂಚೆ ಇಲಾಖೆಗೆ ನೀಡುತ್ತಾರೆ. ಅಂಚೆ ಇಲಾಖೆ ಸಕಾಲಕ್ಕೆ ಅವುಗಳನ್ನು ಸಂಬಂಧಿಸಿದ ಸಾರ್ವಜನಿಕರಿಗೆ ನೋಂದಾಯಿತ ಅಂಚೆ ಮೂಲಕ ಕಳುಹಿಸಿಕೊಡಬೇಕು.

ತಲಾ ಪತ್ರಕ್ಕೆ ಅಂಚೆ ಇಲಾಖೆ ರೂ. 50 ಹಣ ಪಡೆಯುತ್ತದೆ. ಆದರೆ ಚಿಕ್ಕಬಳ್ಳಾಪುರ ಆರ್.ಟಿ.ಓ. ಯಿಂದ ದಾಖಲೆಗಳನ್ನು ಪಡೆದುಕೊಂಡಿರುವ ಚಿಕ್ಕಬಳ್ಳಾಪುರದ ಅಂಚೆ ಇಲಾಖೆ ಕಳೆದ ಒಂದು ತಿಂಗಳಿನಿಂದ ದಾಖಲೆಗಳನ್ನು ಅಂಚೆ ಬಟವಾಡೆ ಮಾಡದೇ ಕಛೇರಿಯಲ್ಲಿಯೇ ಸಂಗ್ರಹಿಸಿಕೊಟ್ಟುಕೊಂಡಿದೆ. ಇದರಿಂದ ಸಾರ್ವಜನಿಕರು ಆರ್.ಟಿ.ಓ ಹಾಗೂ ಅಂಚೆ ಕಛೇರಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಆರ್.ಟಿ.ಓ ಹಾಗೂ ಅಂಚೆ ಇಲಾಖೆಗಳು ಒಪ್ಪಂದ ಮಾಡಿಕೊಂಡಿದ್ದು, ತಲಾ ಪತ್ರಕ್ಕೆ ರೂ. 50 ಶುಲ್ಕವನ್ನು ಸಾರ್ವಜನಿಕರಿಂದಲೇ ಪಡೆಯುತ್ತಾರೆ. ಸ್ವತಃ ಪೋಸ್ಟ್​​ ಮ್ಯಾನ್‍ಗಳು ಆರ್.ಟಿ.ಓ ಕಛೇರಿಗೆ ಹೋಗಿ ದಾಖಲೆಗಳನ್ನು ಪಡೆದು, ಅದಕ್ಕೆ ಕವರಿಂಗ್ ಲಕೋಟೆಗಳನ್ನು ರೆಡಿ ಮಾಡಿ, ಸಂಬಂಧಿಸಿದ ವ್ಯಕ್ತಿಗೆ ನೋಂದಾಯಿತ ಅಂಚೆ ಮೂಲಕ ತಲುಪಿಸಬೇಕು. ಆದರೆ ಚಿಕ್ಕಬಳ್ಳಾಪುರದ ಅಂಚೆ ಇಲಾಖೆ ಅಧಿಕಾರಿಗಳು ಕರ್ತವ್ಯಲೋಪ, ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಇನ್ನು ಪೋಸ್ಟ್ ಮಾಸ್ಟರ್ ಮಂಜುರವರನ್ನು ಪ್ರಶ್ನಿಸಿದರೆ ಸಿಬ್ಬಂದಿ ಕೊರತೆ ನೆಪ ಹೇಳಿದ್ದಾರೆ.

ಇನ್ನು ಒಪ್ಪಂದದಂತೆ ಆರ್.ಟಿ.ಓ. ಸಾರ್ವಜನಿಕ ದಾಖಲೆಗಳನ್ನು ಬೈ ಹ್ಯಾಂಡ್ ನೀಡುವಂತಿಲ್ಲ. ನೋಂದಾಯಿತ ಅಂಚೆ ಮೂಲಕವೇ ಸಾರ್ವಜನಿಕರು ಪಡೆಯಬೇಕು. ಆದರೆ ಚಿಕ್ಕಬಳ್ಳಾಪುರದ ಅಂಚೆ ಇಲಾಖೆಯ ನಿರ್ಲಕ್ಷ್ಯದಿಂದ ಸಾರ್ವಜನಿಕರಿಗೆ ತಲುಪಬೇಕಾಗಿರುವ ಸಾವಿರಾರು ಮಹತ್ವದ ದಾಖಲೆಗಳು ಅಂಚೆ ಇಲಾಖೆಯಲ್ಲಿಯೇ ಕೊಳೆಯುತ್ತಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ