AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಪತ್ತೆಯಾಗಿದ್ದ ಐವರು ಬಾಲಕಿಯರು ಪತ್ತೆ: ವಾರ್ಡನ್ ಅಸಲಿ ಮುಖ ಬಿಚ್ಚಿಟ್ಟ ಮಕ್ಕಳು

ಚಿಕ್ಕಬಳ್ಳಾಪುರ ತಾಲ್ಲೂಕಿನ ತಿಪ್ಪೇನಹಳ್ಳಿಯ ಮಕ್ಕಳ ಆಸರೆ ಬಾಲಮಂದಿರದಿಂದ ನಾಪತ್ತೆಯಾಗಿದ್ದ ಐದು ಬಾಲಕಿಯರು ಪತ್ತೆಯಾಗಿದ್ದಾರೆ. ಹಾಸ್ಟೆಲ್ ವಾರ್ಡನ್‌ನ ಕಿರುಕುಳದಿಂದಾಗಿ ತಪ್ಪಿಸಿಕೊಂಡಿದ್ದಾಗಿ ಹೇಳಿದ್ದಾರೆ. ವಾರ್ಡನ್ ಅವರ ಕಿರುಕುಳದಿಂದ ಬೇಸತ್ತು ನಮ್ಮ ಸಂಬಂಧಿಕರ ಮನೆಗೆ ಹೋಗಲು ಹಾಸ್ಟೆಲ್‌ನಿಂದ ತಪ್ಪಿಸಿಕೊಂಡಿದ್ದೇವು ಎಂದು ಬಾಲಕಿಯರು ಪೊಲೀಸರ ಮುಂದೆ ಹೇಳಿದ್ದಾರೆ. ಮದರ್ ತೆರೇಸಾ ಚಾರಿಟೇಬಲ್ ಟ್ರಸ್ಟ್ ನಡೆಸುವ ಈ ಬಾಲಮಂದಿರ ಅನಾಥ ಹಾಗೂ ಸಿಂಗಲ್ ಪೇರೆಂಟ್ ಮಕ್ಕಳಿಗೆ ಆಶ್ರಯ ಪಡೆದಿದ್ದಾರೆ.

ನಾಪತ್ತೆಯಾಗಿದ್ದ ಐವರು ಬಾಲಕಿಯರು ಪತ್ತೆ: ವಾರ್ಡನ್ ಅಸಲಿ ಮುಖ ಬಿಚ್ಚಿಟ್ಟ ಮಕ್ಕಳು
ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್​ ಠಾಣೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:May 30, 2025 | 3:49 PM

Share

ಚಿಕ್ಕಬಳ್ಳಾಪುರ, ಮೇ 30: ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ತಿಪ್ಪೇನಹಳ್ಳಿ ಬಳಿಯಿರುವ ಮಕ್ಕಳ ಆಸರೆ ಬಾಲಮಂದಿರ (ವಸತಿ ನಿಲಯ) ದಿಂದ ನಾಪತ್ತೆಯಾಗಿದ್ದ ಐವರು ಬಾಲಕಿಯರು ಪತ್ತೆಯಾಗಿದ್ದಾರೆ. ಹಾಸ್ಟೆಲ್ ವಾರ್ಡನ್ ಕಿರುಕುಳದಿಂದ ಬೇಸತ್ತು ತಪ್ಪಿಸಿಕೊಂಡಿದ್ದಾಗಿ ಬಾಲಕಿಯರು ಹೇಳಿದ್ದಾರೆ. ಸುಖ ಸುಮ್ಮನೆ ವಾರ್ಡನ್ ಶ್ವೇತಾ ಅವರು ನಮ್ಮನ್ನು ಹೊಡೆಯುವುದು, ರೂಮಿನಲ್ಲಿ ಕೂಡಿ ಹಾಕುವುದು, ಬೆದರಿಸುತ್ತಾರೆ. ಹಾಸ್ಟೆಲ್​ನಲ್ಲಿ ಇರಲು ಇಷ್ಟವಿಲ್ಲದೆ ಸಂಬಂಧಿಕರ ಮನೆಗೆ ಹೋಗಲು, ವಸತಿ ನಿಲಯದಿಂದ ತಪ್ಪಿಸಿಕೊಂಡಿದ್ದೇವು ಎಂದು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರ ಮುಂದೆ ಬಾಲಕಿಯರು ಹೇಳಿದ್ದಾರೆ. ಅಲ್ಲದೆ, ನಮ್ಮನ್ನು ನಮ್ಮ ತಂದೆ-ತಾಯಿ, ಸಂಬಂಧಿಕರ ಮನೆಗೆ ಕಳುಹಿಸುವಂತೆ ಪೊಲೀಸರ ಬಳಿ ಮನವಿ ಮಾಡಿದ್ದಾರೆ.

ಮಕ್ಕಳ ಆಸರೆ ಬಾಲಮಂದಿರವನ್ನು ಮದರ್ ತೆರೇಸಾ ಚಾರಿಟೇಬಲ್ ಟ್ರಸ್ಟ್ ನಡೆಸುತ್ತಿದೆ. ಈ ವಸತಿ ನಿಲಯದಲ್ಲಿ ಅನಾಥ ಹೆಣ್ಣುಮಕ್ಕಳು, ಸಿಂಗಲ್ ಪೇರೆಂಟ್ ಮಕ್ಕಳಿಗೆ ಆಶ್ರಯ ನೀಡಲಾಗಿದೆ. ಈ ವಸತಿ ನಿಲಯದಿಂದ ಐವರು ಬಾಲಕಿಯರು ನಾಪತ್ತೆಯಾಗಿದ್ದರು. ಬಾಲಕಿಯರು ನಾಪತ್ತೆಯಾಗುತ್ತಿದ್ದಂತೆ, ಟ್ರಸ್ಟ್​ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ದೂರು ಆಧರಿಸಿ ಪೊಲೀಸರು ಹುಡುಕಾಟ ನಡೆಸಿದಾಗ ಬಾಲಕಿಯರು ಪತ್ತೆಯಾಗಿದ್ದಾರೆ.

ಇದನ್ನೂ ಓದಿ
Image
ನಾಪತ್ತೆಯಾದ ಗಂಡ: ಪೊಲೀಸಪ್ಪನನ್ನು ಮದುವೆಯಾಗಿ ಫಜೀತಿಗೆ ಸಿಲುಕಿದ ಪತ್ನಿ
Image
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
Image
ಚಿಕ್ಕಬಳ್ಳಾಪುರ: ಕಟಾವಿಗೆ ಬಂದ ದ್ರಾಕ್ಷಿ ತೋಟಕ್ಕೆ ಕಿಡಿಗೇಡಿಗಳಿಂದ ವಾಮಾಚಾರ
Image
ನಂದಿಹಿಲ್ಸ್ ಅಭಿವೃದ್ದಿಗೆ ಪಣ: ಪ್ರವಾಸಿಗರ ಕುಂದು ಕೊರತೆ ಆಲಿಸಿದ ಸಚಿವ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:30 pm, Fri, 30 May 25

Follow Us
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಮಿಲ್ಲರ್ ಮಾಡಿದ ಒಂದು ತಪ್ಪಿನಿಂದಾಗಿ ಸೋತ ಡೆಲ್ಲಿ ಕ್ಯಾಪಿಟಲ್ಸ್
ಮಿಲ್ಲರ್ ಮಾಡಿದ ಒಂದು ತಪ್ಪಿನಿಂದಾಗಿ ಸೋತ ಡೆಲ್ಲಿ ಕ್ಯಾಪಿಟಲ್ಸ್