Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಎಸ್​ಬಿಐ ಎಟಿಎಂಗೆ ಬೆಂಕಿ ಹಾಕಿ 20 ಲಕ್ಷ ರೂ. ಕಳ್ಳತನ; ಸ್ಥಳಕ್ಕೆ ಎಸ್ಪಿ ಭೇಟಿ

ಚಿಕ್ಕಬಳ್ಳಾಪುರದ ಜನನಿಬೀಡ ಪ್ರದೇಶದಲ್ಲಿದ್ದ ಎಸ್​ಬಿಐ ಎಟಿಎಂ ಗೆ ನುಗ್ಗಿ ಸುಮಾರು 20 ಲಕ್ಷ ರೂಪಾಯಿ ಹಣವನ್ನು ಕದ್ದು ನಂತರ ಎಟಿಎಂ ಮಷೀನ್​ಗೆ ಬೆಂಕಿ ಹಾಕಿ ಸುಟ್ಟು ಹಾಕಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ: ಎಸ್​ಬಿಐ ಎಟಿಎಂಗೆ ಬೆಂಕಿ ಹಾಕಿ 20 ಲಕ್ಷ ರೂ. ಕಳ್ಳತನ; ಸ್ಥಳಕ್ಕೆ ಎಸ್ಪಿ ಭೇಟಿ
ಚಿಕ್ಕಬಳ್ಳಾಪುರ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 24, 2023 | 6:11 PM

ಚಿಕ್ಕಬಳ್ಳಾಪುರ, ಡಿ.24: ಎಸ್​ಬಿಐ(SBI) ಬ್ಯಾಂಕ್​​ಗೆ ಸೇರಿದ ಎಟಿಎಂ(ATM)ಗೆ ನುಗ್ಗಿದ ಖದೀಮರು, ಬರೊಬ್ಬರಿ 20 ಲಕ್ಷ ರೂ. ಹಣವನ್ನು ಕದ್ದು, ಬಳಿಕ ಎಟಿಎಂಗೆ ಬೆಂಕಿ ಹಾಕಿದ ಘಟನೆ ಚಿಕ್ಕಬಳ್ಳಾಪುರ(Chikkaballapur) ನಗರದ ಎಂ.ಜಿ ರಸ್ತೆಯ ದರ್ಗಾ ಬಳಿ ನಡೆದಿದೆ. ಸದರಿ ಎ.ಟಿ.ಎಂ ನ್ನು ಹಿಟಾಚಿ ಸಂಸ್ಥೆ ನಿರ್ವಹಣೆ ಮಾಡುತ್ತಿದ್ದು, ಸಿ.ಎಂ.ಎಸ್ ಸಂಸ್ಥೆ ಹಣ ತುಂಬುವ ಕೆಲಸ ಮಾಡುತ್ತಿತ್ತು. ಆದ್ರೆ, ತಡರಾತ್ರಿ ಎ.ಟಿ.ಎಂ ಗೆ ನುಗ್ಗಿರುವ ದುಷ್ಕರ್ಮಿಗಳ ತಂಡ, ಎಟಿಎಂ ಸಿಸಿ ಕ್ಯಾಮೆರಾಗಳಿಗೆ ಸ್ಪ್ರೇ ಬಳಸಿ ನಂತರ ಗ್ಯಾಸ್ ಕಟರ್​ನಿಂದ ಎಟಿಎಂ ಬಾಗಿಲುಗಳನ್ನು ಕಟ್ ಮಾಡಿದ್ದಾರೆ.

ಗ್ಯಾಸ್ ಕಟರ್​ನಿಂದಲೇ ಎಟಿಎಂಗೆ ಬೆಂಕಿ

ನಂತರ ಎಟಿಎಂನಲ್ಲಿದ್ದ ಸುಮಾರು ಇಪ್ಪತ್ತು ಲಕ್ಷ ರೂಪಾಯಿಗಳನ್ನು ಕದ್ದು ಎಟಿಎಂ ಯಂತ್ರಕ್ಕೆ ಗ್ಯಾಸ್ ಕಟರ್​ನಿಂದಲೇ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಎಟಿಎಂ ಕಟ್ಟಡದ ಮಾಲಿಕ ಶ್ರೀನಿವಾಸ್ ತಿಳಿಸಿದ್ದಾರೆ. ಇನ್ನು ಈ ಖತರ್ನಾಕ್​ ಖದೀಮರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇತ್ತಿಚೀಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ, ಗೌರಿಬಿದನೂರು ಹಾಗೂ ಪೊಶೆಟ್ಟಿಯಲ್ಲಿ ಇದೆ ರೀತಿಯ ಕೆಲವು ಘಟನೆಗಳು ನಡೆದಿವೆ. ಆದ್ರೆ, ಆರೋಪಿಗಳು ಪೊಲೀಸರ ಕಣ್ಣಿಗೆ ಬಿದ್ದಿಲ್ಲ. ಸದ್ಯಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ನೆಲಮಂಗಲ: ಎಟಿಎಂ ಹಣ ದೋಚಲು ವಿಫಲ ಯತ್ನ, ಸಾವಿರಾರು ರೂಪಾಯಿ ಬೆಂಕಿಗೆ ಆಹುತಿ

ಕಳ್ಳತನ ಬಯಲಾಗಿದ್ದೇಗೆ?

ನಿನ್ನೆ(ಡಿ.23) ಮದ್ಯರಾತ್ರಿಯೇ ಘಟನೆ ಆಗಿದ್ದರೂ, ಇಂದು ಮಧ್ಯಾನ್ನದವರೆಗೂ ಯಾರ ಗಮನಕ್ಕೂ ಬಂದಿಲ್ಲ. ಕಟ್ಟಡದ ಮಾಲೀಕ ಶ್ರೀನಿವಾಸ್ ಎಂಬುವವರು ಎಟಿಎಂ ಗೆ ಬಂದು ನೋಡಿದಾಗ ಪ್ರಕರಣ ಬಯಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್. ನಾಗೇಶ್​ ಹಾಗೂ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ