ಚಿಕ್ಕಬಳ್ಳಾಪುರ: ಎಸ್​ಬಿಐ ಎಟಿಎಂಗೆ ಬೆಂಕಿ ಹಾಕಿ 20 ಲಕ್ಷ ರೂ. ಕಳ್ಳತನ; ಸ್ಥಳಕ್ಕೆ ಎಸ್ಪಿ ಭೇಟಿ

ಚಿಕ್ಕಬಳ್ಳಾಪುರದ ಜನನಿಬೀಡ ಪ್ರದೇಶದಲ್ಲಿದ್ದ ಎಸ್​ಬಿಐ ಎಟಿಎಂ ಗೆ ನುಗ್ಗಿ ಸುಮಾರು 20 ಲಕ್ಷ ರೂಪಾಯಿ ಹಣವನ್ನು ಕದ್ದು ನಂತರ ಎಟಿಎಂ ಮಷೀನ್​ಗೆ ಬೆಂಕಿ ಹಾಕಿ ಸುಟ್ಟು ಹಾಕಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ: ಎಸ್​ಬಿಐ ಎಟಿಎಂಗೆ ಬೆಂಕಿ ಹಾಕಿ 20 ಲಕ್ಷ ರೂ. ಕಳ್ಳತನ; ಸ್ಥಳಕ್ಕೆ ಎಸ್ಪಿ ಭೇಟಿ
ಚಿಕ್ಕಬಳ್ಳಾಪುರ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 24, 2023 | 6:11 PM

ಚಿಕ್ಕಬಳ್ಳಾಪುರ, ಡಿ.24: ಎಸ್​ಬಿಐ(SBI) ಬ್ಯಾಂಕ್​​ಗೆ ಸೇರಿದ ಎಟಿಎಂ(ATM)ಗೆ ನುಗ್ಗಿದ ಖದೀಮರು, ಬರೊಬ್ಬರಿ 20 ಲಕ್ಷ ರೂ. ಹಣವನ್ನು ಕದ್ದು, ಬಳಿಕ ಎಟಿಎಂಗೆ ಬೆಂಕಿ ಹಾಕಿದ ಘಟನೆ ಚಿಕ್ಕಬಳ್ಳಾಪುರ(Chikkaballapur) ನಗರದ ಎಂ.ಜಿ ರಸ್ತೆಯ ದರ್ಗಾ ಬಳಿ ನಡೆದಿದೆ. ಸದರಿ ಎ.ಟಿ.ಎಂ ನ್ನು ಹಿಟಾಚಿ ಸಂಸ್ಥೆ ನಿರ್ವಹಣೆ ಮಾಡುತ್ತಿದ್ದು, ಸಿ.ಎಂ.ಎಸ್ ಸಂಸ್ಥೆ ಹಣ ತುಂಬುವ ಕೆಲಸ ಮಾಡುತ್ತಿತ್ತು. ಆದ್ರೆ, ತಡರಾತ್ರಿ ಎ.ಟಿ.ಎಂ ಗೆ ನುಗ್ಗಿರುವ ದುಷ್ಕರ್ಮಿಗಳ ತಂಡ, ಎಟಿಎಂ ಸಿಸಿ ಕ್ಯಾಮೆರಾಗಳಿಗೆ ಸ್ಪ್ರೇ ಬಳಸಿ ನಂತರ ಗ್ಯಾಸ್ ಕಟರ್​ನಿಂದ ಎಟಿಎಂ ಬಾಗಿಲುಗಳನ್ನು ಕಟ್ ಮಾಡಿದ್ದಾರೆ.

ಗ್ಯಾಸ್ ಕಟರ್​ನಿಂದಲೇ ಎಟಿಎಂಗೆ ಬೆಂಕಿ

ನಂತರ ಎಟಿಎಂನಲ್ಲಿದ್ದ ಸುಮಾರು ಇಪ್ಪತ್ತು ಲಕ್ಷ ರೂಪಾಯಿಗಳನ್ನು ಕದ್ದು ಎಟಿಎಂ ಯಂತ್ರಕ್ಕೆ ಗ್ಯಾಸ್ ಕಟರ್​ನಿಂದಲೇ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಎಟಿಎಂ ಕಟ್ಟಡದ ಮಾಲಿಕ ಶ್ರೀನಿವಾಸ್ ತಿಳಿಸಿದ್ದಾರೆ. ಇನ್ನು ಈ ಖತರ್ನಾಕ್​ ಖದೀಮರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇತ್ತಿಚೀಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ, ಗೌರಿಬಿದನೂರು ಹಾಗೂ ಪೊಶೆಟ್ಟಿಯಲ್ಲಿ ಇದೆ ರೀತಿಯ ಕೆಲವು ಘಟನೆಗಳು ನಡೆದಿವೆ. ಆದ್ರೆ, ಆರೋಪಿಗಳು ಪೊಲೀಸರ ಕಣ್ಣಿಗೆ ಬಿದ್ದಿಲ್ಲ. ಸದ್ಯಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ನೆಲಮಂಗಲ: ಎಟಿಎಂ ಹಣ ದೋಚಲು ವಿಫಲ ಯತ್ನ, ಸಾವಿರಾರು ರೂಪಾಯಿ ಬೆಂಕಿಗೆ ಆಹುತಿ

ಕಳ್ಳತನ ಬಯಲಾಗಿದ್ದೇಗೆ?

ನಿನ್ನೆ(ಡಿ.23) ಮದ್ಯರಾತ್ರಿಯೇ ಘಟನೆ ಆಗಿದ್ದರೂ, ಇಂದು ಮಧ್ಯಾನ್ನದವರೆಗೂ ಯಾರ ಗಮನಕ್ಕೂ ಬಂದಿಲ್ಲ. ಕಟ್ಟಡದ ಮಾಲೀಕ ಶ್ರೀನಿವಾಸ್ ಎಂಬುವವರು ಎಟಿಎಂ ಗೆ ಬಂದು ನೋಡಿದಾಗ ಪ್ರಕರಣ ಬಯಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್. ನಾಗೇಶ್​ ಹಾಗೂ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು