AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಎಸ್​ಬಿಐ ಎಟಿಎಂಗೆ ಬೆಂಕಿ ಹಾಕಿ 20 ಲಕ್ಷ ರೂ. ಕಳ್ಳತನ; ಸ್ಥಳಕ್ಕೆ ಎಸ್ಪಿ ಭೇಟಿ

ಚಿಕ್ಕಬಳ್ಳಾಪುರದ ಜನನಿಬೀಡ ಪ್ರದೇಶದಲ್ಲಿದ್ದ ಎಸ್​ಬಿಐ ಎಟಿಎಂ ಗೆ ನುಗ್ಗಿ ಸುಮಾರು 20 ಲಕ್ಷ ರೂಪಾಯಿ ಹಣವನ್ನು ಕದ್ದು ನಂತರ ಎಟಿಎಂ ಮಷೀನ್​ಗೆ ಬೆಂಕಿ ಹಾಕಿ ಸುಟ್ಟು ಹಾಕಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ: ಎಸ್​ಬಿಐ ಎಟಿಎಂಗೆ ಬೆಂಕಿ ಹಾಕಿ 20 ಲಕ್ಷ ರೂ. ಕಳ್ಳತನ; ಸ್ಥಳಕ್ಕೆ ಎಸ್ಪಿ ಭೇಟಿ
ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Dec 24, 2023 | 6:11 PM

Share

ಚಿಕ್ಕಬಳ್ಳಾಪುರ, ಡಿ.24: ಎಸ್​ಬಿಐ(SBI) ಬ್ಯಾಂಕ್​​ಗೆ ಸೇರಿದ ಎಟಿಎಂ(ATM)ಗೆ ನುಗ್ಗಿದ ಖದೀಮರು, ಬರೊಬ್ಬರಿ 20 ಲಕ್ಷ ರೂ. ಹಣವನ್ನು ಕದ್ದು, ಬಳಿಕ ಎಟಿಎಂಗೆ ಬೆಂಕಿ ಹಾಕಿದ ಘಟನೆ ಚಿಕ್ಕಬಳ್ಳಾಪುರ(Chikkaballapur) ನಗರದ ಎಂ.ಜಿ ರಸ್ತೆಯ ದರ್ಗಾ ಬಳಿ ನಡೆದಿದೆ. ಸದರಿ ಎ.ಟಿ.ಎಂ ನ್ನು ಹಿಟಾಚಿ ಸಂಸ್ಥೆ ನಿರ್ವಹಣೆ ಮಾಡುತ್ತಿದ್ದು, ಸಿ.ಎಂ.ಎಸ್ ಸಂಸ್ಥೆ ಹಣ ತುಂಬುವ ಕೆಲಸ ಮಾಡುತ್ತಿತ್ತು. ಆದ್ರೆ, ತಡರಾತ್ರಿ ಎ.ಟಿ.ಎಂ ಗೆ ನುಗ್ಗಿರುವ ದುಷ್ಕರ್ಮಿಗಳ ತಂಡ, ಎಟಿಎಂ ಸಿಸಿ ಕ್ಯಾಮೆರಾಗಳಿಗೆ ಸ್ಪ್ರೇ ಬಳಸಿ ನಂತರ ಗ್ಯಾಸ್ ಕಟರ್​ನಿಂದ ಎಟಿಎಂ ಬಾಗಿಲುಗಳನ್ನು ಕಟ್ ಮಾಡಿದ್ದಾರೆ.

ಗ್ಯಾಸ್ ಕಟರ್​ನಿಂದಲೇ ಎಟಿಎಂಗೆ ಬೆಂಕಿ

ನಂತರ ಎಟಿಎಂನಲ್ಲಿದ್ದ ಸುಮಾರು ಇಪ್ಪತ್ತು ಲಕ್ಷ ರೂಪಾಯಿಗಳನ್ನು ಕದ್ದು ಎಟಿಎಂ ಯಂತ್ರಕ್ಕೆ ಗ್ಯಾಸ್ ಕಟರ್​ನಿಂದಲೇ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಎಟಿಎಂ ಕಟ್ಟಡದ ಮಾಲಿಕ ಶ್ರೀನಿವಾಸ್ ತಿಳಿಸಿದ್ದಾರೆ. ಇನ್ನು ಈ ಖತರ್ನಾಕ್​ ಖದೀಮರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇತ್ತಿಚೀಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ, ಗೌರಿಬಿದನೂರು ಹಾಗೂ ಪೊಶೆಟ್ಟಿಯಲ್ಲಿ ಇದೆ ರೀತಿಯ ಕೆಲವು ಘಟನೆಗಳು ನಡೆದಿವೆ. ಆದ್ರೆ, ಆರೋಪಿಗಳು ಪೊಲೀಸರ ಕಣ್ಣಿಗೆ ಬಿದ್ದಿಲ್ಲ. ಸದ್ಯಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ನೆಲಮಂಗಲ: ಎಟಿಎಂ ಹಣ ದೋಚಲು ವಿಫಲ ಯತ್ನ, ಸಾವಿರಾರು ರೂಪಾಯಿ ಬೆಂಕಿಗೆ ಆಹುತಿ

ಕಳ್ಳತನ ಬಯಲಾಗಿದ್ದೇಗೆ?

ನಿನ್ನೆ(ಡಿ.23) ಮದ್ಯರಾತ್ರಿಯೇ ಘಟನೆ ಆಗಿದ್ದರೂ, ಇಂದು ಮಧ್ಯಾನ್ನದವರೆಗೂ ಯಾರ ಗಮನಕ್ಕೂ ಬಂದಿಲ್ಲ. ಕಟ್ಟಡದ ಮಾಲೀಕ ಶ್ರೀನಿವಾಸ್ ಎಂಬುವವರು ಎಟಿಎಂ ಗೆ ಬಂದು ನೋಡಿದಾಗ ಪ್ರಕರಣ ಬಯಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್. ನಾಗೇಶ್​ ಹಾಗೂ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ
‘ಧುರಂಧರ್​ಗಿಂತ ಸೀಕ್ವೆಲ್ ಇನ್ನೂ ಪವರ್​​ಫುಲ್; ಯಾಮಿ ಗೌತಮ್
‘ಧುರಂಧರ್​ಗಿಂತ ಸೀಕ್ವೆಲ್ ಇನ್ನೂ ಪವರ್​​ಫುಲ್; ಯಾಮಿ ಗೌತಮ್
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್