AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಬಯಲು ಬರ್ಹಿದೆಸೆಗೆ ಹೋಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗಾಗಿ ಹುಡುಕಾಟ

ಚಿಕ್ಕಬಳ್ಳಾಫುರ ಜಿಲ್ಲೆಯ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಯಲು ಬರ್ಹಿದೆಸೆಗೆಂದು ಮಹಿಳೆಯೊಬ್ಬರು ಮನೆಯಿಂದ ಆಚೆ ಹೋಗಿದ್ದರು. ಅದನ್ನು ಗಮನಿಸಿದ ಗ್ರಾಮದ ವ್ಯಕ್ತಿಯೋರ್ವ ಮಾನವೀಯತೆಯಿಲ್ಲದೆ ಮೃಗದಂತೆ ವರ್ತಿಸಿ ಗೃಹಿಣಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ: ಬಯಲು ಬರ್ಹಿದೆಸೆಗೆ ಹೋಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗಾಗಿ ಹುಡುಕಾಟ
ಪ್ರಾತಿನಿಧಿಕ ಚಿತ್ರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 03, 2023 | 8:02 PM

Share

ಚಿಕ್ಕಬಳ್ಳಾಪುರ, ಸೆ.03: ಬಯಲು ಬರ್ಹಿದೆಸೆಗೆಂದು ಮಹಿಳೆಯೊಬ್ಬರು ಮನೆಯಿಂದ ಆಚೆ ಹೋಗಿದ್ದರು. ಅದನ್ನು ಗಮನಿಸಿದ ಗ್ರಾಮದ ವ್ಯಕ್ತಿಯೋರ್ವ ಮಾನವೀಯತೆಯಿಲ್ಲದೆ ಮೃಗದಂತೆ ವರ್ತಿಸಿ ಗೃಹಿಣಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಚಿಕ್ಕಬಳ್ಳಾಫುರ (Chikkaballapur) ಜಿಲ್ಲೆಯ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 32 ವರ್ಷದ ಗೃಹಿಣಿ ಸಂಜೆ 5ಗಂಟೆ ಸಮಯದಲ್ಲಿ ಊರಾಚೆ ಇರುವ ರಸ್ತೆ ಬದಿ ಬಯಲು ಬರ್ಹಿದೆಶೆಗೆ ಹೋಗಿದ್ದಳು. ಆಗ ಪರಿಚಿತ ವ್ಯಕ್ತಿ ಮಹಿಳೆಯನ್ನು ನೋಡಿದ್ದೇ ತಡ ಕಿಚಕನಂತೆ ಮಹಿಳೆಯ ಸೀರೆಯನ್ನು ಎಳೆದಾಡಿ ಆಕೆಯ ಖಾಸಗಿ ಅಂಗಾಂಗಗಳನ್ನು ಮುಟ್ಟಿ ವಿಕೃತವಾಗಿ ವರ್ತಿಸಿದ್ದಾನೆ.

ಪೊಲೀಸರಿಗೆ ದೂರು ನೀಡಿದ ನೊಂದ ಮಹಿಳೆ

ಇನ್ನು ಈ ವೇಳೆ ಮಹಿಳೆ ವಿರೋಧ ವ್ಯಕ್ತಪಡಿಸಿದ್ರೂ ಆಕೆಯನ್ನು ಗಟ್ಟಿಯಾಗಿ ಹಿಡಿದು ಎಳೆದಾಡಿ ವಿಕೃತಿ ಮೆರೆದು ಮಾನಭಂಗ ಮಾಡಿದ್ದಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ. ನಂತರ ದಾರಿಹೋಕರು ಬರುತ್ತಿರುವುದನ್ನು ಗಮನಿಸಿದ ಪರಿಚಿತ ವ್ಯಕ್ತಿ, ಮಹಿಳೆಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಐಪಿಸಿ ಸೆಕ್ಷನ್ 341, 354(ಬಿ) 504, 506 ಸೆಕ್ಷನ್‍ಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ:Tumakuru News: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದವನಿಗೆ 10 ವರ್ಷ ಜೈಲು, 25 ಸಾವಿರ ದಂಡ ವಿಧಿಸಿದ ನ್ಯಾಯಾಲಯ

ಮೇಕೆ ಮೇಲೆ ಅತ್ಯಾಚಾರ ನಡೆಸಿದ ಆರೋಪ; ಠಾಣೆಗೆ ದೂರು

ರಾಮನಗರ: ಮನುಷ್ಯನ ವಿಕೃತಿ ಮೀತಿಮಿರಿದೆ. ಹೌದು, ಮೇಕೆ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಜಮೀರ್ ಖಾನ್ ಎಂಬುವವರು ರಾಮನಗರ ಜಿಲ್ಲೆಯ ಚನ್ನಪಟ್ಟಣ ಟೌನ್ ಪೊಲೀಸರಿಗೆ ದೂರು ನೀಡಿದ್ದಾರೆ. ಇನ್ನು ಈ ಘಟನೆ ಚನ್ನಪಟ್ಟಣದ ಇಂದಿರಾ ಕಾಟೇಜ್‌ನಲ್ಲಿ ನಡೆದಿದ್ದು, ರೋಹಿದ್ (25) ಎಂಬಾತ ಮೇಕೆ‌ ಮೇಲೆ ಅತ್ಯಾಚಾರ ಮಾಡಿದ ಆರೋಪ ಕೇಳಿಬಂದಿದೆ. ಇತ ಪ್ರತಿದಿನ ಬಂದು ಮೇಕೆ ಕೊಂಡೊಯ್ಯುತ್ತಿದ್ದನಂತೆ. ಹೀಗೆ ರೋಹಿದ್ ಹಿಂಬಾಲಿಸಿ ಹೋದಾಗ ಕೃತ್ಯ ಬೆಳಕಿಗೆ ಬಂದಿದೆ. ಜೊತೆಗೆ ಮೇಕೆ ಮೇಲೆ ಅತ್ಯಾಚಾರ ಮಾಡುವ ವಿಡಿಯೋ ಕೂಡ ಜಮೀರ್ ಸೆರೆ ಹಿಡಿದಿದ್ದು, ಚನ್ನಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ