AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ತಿಂಗಳಿನಿಂದ ಚಾರಣ ಮಾರ್ಗದರ್ಶಕರಿಗಿಲ್ಲ ಸಂಬಳ: ಅರಣ್ಯ ಇಲಾಖೆ ವಿರುದ್ಧ ಆಕ್ರೋಶ

ಚಿಕ್ಕಬಳ್ಳಾಪುರ ಜಿಲ್ಲೆಯ ಸ್ಕಂದಗಿರಿ ಬೆಟ್ಟದ ಚಾರಣ ಮಾರ್ಗದರ್ಶಕರು ಕಳೆದ ಆರು ತಿಂಗಳಿಂದ ವೇತನ ಪಡೆಯದೆ ತೊಂದರೆ ಅನುಭವಿಸುತ್ತಿದ್ದಾರೆ. ಅರಣ್ಯ ಇಲಾಖೆಯಿಂದ ಈ ಮಾರ್ಗದರ್ಶಕರ ನೇಮಕಾತಿ ಆಗಿದ್ದು, ಪ್ರತಿ ಟ್ರೆಕ್ಕಿಂಗ್‌ಗೆ 800 ರೂಪಾಯಿ ಸಂಭಾವನೆ ನೀಡುವುದಾಗಿ ಒಪ್ಪಂದವಾಗಿತ್ತು. ಆದರೆ, ಇಲಾಖೆಯು ಈ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಮಾರ್ಗದರ್ಶಕರು ಆರೋಪಿಸುತ್ತಿದ್ದಾರೆ. ಡಿಎಫ್ಒ ಒಂದು ವಾರದೊಳಗೆ ವೇತನ ಪಾವತಿಸುವ ಭರವಸೆ ನೀಡಿದ್ದಾರೆ.

6 ತಿಂಗಳಿನಿಂದ ಚಾರಣ ಮಾರ್ಗದರ್ಶಕರಿಗಿಲ್ಲ ಸಂಬಳ: ಅರಣ್ಯ ಇಲಾಖೆ ವಿರುದ್ಧ ಆಕ್ರೋಶ
ಸ್ಕಂದಗಿರಿ, ಅರಣ್ಯ ಇಲಾಖೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ವಿವೇಕ ಬಿರಾದಾರ|

Updated on: Mar 19, 2025 | 8:42 AM

Share

ಚಿಕ್ಕಬಳ್ಳಾಪುರ, ಮಾರ್ಚ್​ 19: ಜಿಲ್ಲೆಯಲ್ಲಿನ ಸ್ಕಂದಗಿರಿ (Skandagiri) ಚಾರಣಪ್ರಿಯರ ನೆಚ್ಚಿನ ತಾಣವಾಗಿದೆ. ರಾಜಧಾನಿ ಬೆಂಗಳೂರಿನಿಂದ (Bengaluru) 62 ಕಿಮೀ ಮತ್ತು ಚಿಕ್ಕಬಳ್ಳಾಪುರದಿಂದ (Chikkaballapur) 3 ಕಿಮೀ ದೂರದಲ್ಲಿದೆ. ಇಲ್ಲಿಗೆ ಬರುವ ಚಾರಣಿಗರಿಗೆ ಮಾರ್ಗದರ್ಶನ ನೀಡಲು ಅರಣ್ಯ ಇಲಾಖೆ ಚಾರಣ ಮಾರ್ಗದರ್ಶಕರ ನೇಮಕ ಮಾಡಿಕೊಂಡಿದೆ. ಆದರೆ, ಚಾರಣ ಮಾರ್ಗದರ್ಶಕರಿಗೆ ಕಳೆದ ಆರು ತಿಂಗಳುಗಳಿಂದ ವೇತನ ಜೊತೆಗೆ ಸೌಕರ್ಯಗಳನ್ನೂ ಸಹ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಒಂದು ಚಾರಣಕ್ಕೆ ಮಾರ್ಗದರ್ಶಕರಿಗೆ ಇಲಾಖೆಯಿಂದ ತಲಾ 800ರೂಪಾಯಿ ಸಂಬಾವನೆ ನೀಡಲಾಗುತ್ತಿತ್ತು. ಆದರೆ, ಅರಣ್ಯ ಇಲಾಖೆ ಕಳೆದ ಆರು ತಿಂಗಳುಗಳಿಂದ ಚಾರಣ ಮಾರ್ಗದರ್ಶಕರಿಗೆ ಸಂಭಾವನೆ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಇಲಾಖೆಯ ವಿರುದ್ಧ ಚಾರಣ ಮಾರ್ಗದರ್ಶಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೊದಲು ಕರ್ನಾಟಕ ಅರಣ್ಯ ಪ್ರವಾಸೋದ್ಯಮ ನಿಗಮ ಟ್ರೆಕ್ಕಿಂಗ್‌ ನಿರ್ವಹಣೆ ಮಾಡ್ತಿತ್ತು. ಆಗ ಚಾರಣ ಮಾರ್ಗದರ್ಶಕರಿಗೆ ಪ್ರತಿ ತಿಂಗಳು ಸಂಬಾವನೆ ನೀಡಲಾಗ್ತಿತ್ತು. ಆದರೆ, ಇದೀಗ ಅರಣ್ಯ ಇಲಾಖೆ ಚಾರಣ ನಿರ್ವಾಹಣೆ ಮಾಡುತ್ತಿದ್ದು, ಕಳೆದ ಆರು ತಿಂಗಳಿನಿಂದ ನಮಗೆ ಸಂಭಾವನೆ ನೀಡಿಲ್ಲ ಎಂದು ಚಾರಣ ಮಾರ್ಗದರ್ಶಕರು ಆರೋಪಿಸಿದ್ದಾರೆ. ಈ ಕುರಿತು ಚಿಕ್ಕಬಳ್ಳಾಪುರ ಡಿಎಫ್​ಒ ಮಾತನಾಡಿ, ಒಂದು ವಾರದಲ್ಲಿ ಸಂಭಾವನೆ ನೀಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ
Image
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
Image
ಬಿಸಿಲಿಗೆ ಹೈರಾಣಾದ ಜನ: ವಾಂತಿ, ಬೇದಿ, ಜ್ವರ, ಜಾಂಡೀಸ್​ ಉಲ್ಬಣ
Image
ಖಾಸಗಿ ಬಸ್ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು, ಇಬ್ಬರು ಸಜೀವ ದಹನ
Image
ಮಹಿಳಾ ದಿನಾಚರಣೆ: ಚಿಕ್ಕಬಳ್ಳಾಪುರದ ಸ್ವಚ್ಛ ವಾಹಿನಿಗೆ ಮಹಿಳಾ ಸಾರಥಿ

ಇದನ್ನೂ ಓದಿ: ಮಹಿಳೆಯ ಮಾಟಮಂತ್ರಕ್ಕೆ‌ ಬೆಚ್ಚಿಬಿದ್ದ ಚಿಕ್ಕಬಳ್ಳಾಪುರ ಜನ

ಸ್ಕಂದಗಿರಿ ಬೆಟ್ಟ

ಕಳವರದುರ್ಗ ಎಂಬ ಹೆಸರಿನಿಂದಲೂ ಕರೆಯಲ್ಪಡುವ ಸ್ಕಂದಗಿರಿಯು ಕೋಟೆಯಿಂದಾವೃತ್ತವಾದ ಬೆಟ್ಟವಾಗಿದ್ದು, ಬೆಂಗಳೂರಿನಿಂದ ಸು. 62 ಕಿ.ಮೀ. ದೂರದಲ್ಲಿರುವ ಕಳವರ ಹಳ್ಲಿಯಲ್ಲಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಳ್ಳಾರಿಗೆ ಹೋಗುವ ರಾಷ್ಟ್ರೀಯ ಹೆದ್ದಾರಿ 7 ರ ಬಳಿ ಇದೆ. ಬೆಟ್ಟದ ತುದಿಯು ಸಮುದ್ರ ಮಟ್ಟದಿಂದ 1450 ಮೀ. ನಷ್ಟು ಎತ್ತರದಲ್ಲಿದೆ. ಒಟ್ಟು ಅಂದಾಜು 5 ಗಂಟೆಗಳ ಚಾರಣವಾಗಿದ್ದು (ಆರೋಹಣ – 2 ತಾಸು, ವಿರಾಮ – 1 ತಾಸು, ಅವರೋಹಣ – 2 ತಾಸು) ಅತೀಸುಲಭವೂ ಅಲ್ಲದ ಅತೀ ಕಠಿಣವೂ ಅಲ್ಲದ ಚಾರಣ ಮಾರ್ಗ ಇದೆ. ವರ್ಷದ ಎಲ್ಲ ಸಮಯದಲ್ಲೂ ಚಾರಣ ಮಾಡಬಹುದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು