AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ತಿಮ್ಮಪ್ಪನ ದರ್ಶನ ಮಾಡಿ ಬರುತ್ತಿದ್ದವರ ಕಾರಿನ ಮೇಲೆ ಬಿದ್ದ ಲಾರಿ: ಚಿಕ್ಕಬಳ್ಳಾಪುರದ ಮೂವರು ಸಾವು

ಆಂಧ್ರದ ಚಿತ್ತೂರು ತಾಲೂಕಿನ ಚಂದ್ರಗಿರಿ ಬಳಿ ಲಾರಿ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಿಕ್ಕಬಳ್ಳಾಪುರ ಮೂಲದ ಮೂವರು ಮೃತಪಟ್ಟಿದ್ದಾರೆ. ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. ತಿರುಪತಿ-ಅನಂತಪುರ ರಾಷ್ಟ್ರೀಯ ಹೆದ್ದಾರಿಯ ಭಾಕರಪೇಟ ಘಾಟ್‌ನಲ್ಲಿ ಘಟನೆ ನಡೆದಿದೆ. 

ತಿರುಪತಿ ತಿಮ್ಮಪ್ಪನ ದರ್ಶನ ಮಾಡಿ ಬರುತ್ತಿದ್ದವರ ಕಾರಿನ ಮೇಲೆ ಬಿದ್ದ ಲಾರಿ: ಚಿಕ್ಕಬಳ್ಳಾಪುರದ ಮೂವರು ಸಾವು
ರಾಮನಗರ: ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರು ದುರ್ಮರಣ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Sep 14, 2024 | 2:46 PM

Share

ಚಿಕ್ಕಬಳ್ಳಾಪುರ, ಸೆಪ್ಟೆಂಬರ್​ 13: ಆಂಧ್ರ ಪ್ರದೇಶದ ಚಿತ್ತೂರು ತಾಲೂಕಿನ ಚಂದ್ರಗಿರಿ ಬಳಿ ಲಾರಿ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಿಕ್ಕಬಳ್ಳಾಪುರ (Chikkaballapur) ಮೂಲದ ಮೂವರು ಮೃತಪಟ್ಟಿದ್ದಾರೆ. ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. ತಿರುಪತಿ-ಅನಂತಪುರ ರಾಷ್ಟ್ರೀಯ ಹೆದ್ದಾರಿಯ ಭಾಕರಪೇಟ ಘಾಟ್‌ನಲ್ಲಿ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಹರಿಸ್ಥಳ ನಿವಾಸಿಗಳಾದ ಮುನಿವೆಂಕಟ ರೆಡ್ಡಿ (55) , ಚಾಲಕ ರಮೇಶ (34), ಮಂಜುನಾಥ್ (38) ಮೃತ ದುರ್ದೈವಿಗಳು. ತೇಜಸ್​ ಎಂಬುವರಿಗೆ ಗಂಭೀರ ಗಾಯವಾಗಿದೆ. ತಿರುಪತಿಗೆ ಹೋಗಿ, ಗುರುವಾರ ಸಂಜೆ ಚಿಕ್ಕಬಳ್ಳಾಪುರಕ್ಕೆ ವಾಪಸ್ ಆಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಒಂದೇ ಕುಟುಂಬವದರು ಎರಡು ಕಾರಿನಲ್ಲಿ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗಿದ್ದರು. ತಿಮ್ಮಪ್ಪನ ದರ್ಶನ ಪಡೆದು ಗುರವಾರ ಸಂಜೆ ಕುಟುಂಬಸ್ಥರು ಚಿಕ್ಕಬಳ್ಳಾಪುರಕ್ಕೆ ವಾಪಸ್​ ಆಗುತ್ತಿದ್ದರು. ಈ ವೇಳೆ ಒಂದು ಕಾರಿನ ಮೇಲೆ ಟೊಮ್ಯಾಟೊ ಸಾಗಿಸುತ್ತಿದ್ದ ಲಾರಿ ಉರುಳಿ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಚಾಲಕ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಕಾರು ಜಖಂಗೊಂಡಿದೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಎಲ್.ಸುಬ್ಬರಾಯುಡು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು

ಡಿವೈಡರ್​ಗೆ ಕಾರು ಡಿಕ್ಕಿ, ಇಬ್ಬರು ಸಾವು

ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಮೊಗ್ಲಿಯಲ್ಲಿ ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಒಂದು ಮಗು ಸೇರಿದಂತೆ ಐವರಿಗೆ ಗಂಭೀರ ಗಾಯವಾಗಿದೆ. ಮೃತರನ್ನು ಬೆಂಗಳೂರು ಮೂಲದವರೆಂದು ಗುರುತಿಸಲಾಗಿದೆ. ಕೆಎ50ಪಿ 1154 ನಂಬರ್​ನ ಇನ್ನೋವಾ ಕಾರು ತಿರುಮಲದಿಂದ ಬೆಂಗಳೂರಿಗೆ ಹಿಂತಿರುಗುತ್ತಿದ್ದಾಗ ಟೈರ್ ಒಡೆದು ಡಿವೈಡರ್​ಗೆ ಡಿಕ್ಕಿ ಹೊಡೆದಿದೆ.

ವಾಹನದಲ್ಲಿ 7 ಮಂದಿ ಪ್ರಯಾಣಿಸುತ್ತಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಬಂಗಾರ್ ಪಾಳಯಂ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಾಳುಗಳನ್ನು ಚಿತ್ತೂರು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬಂಗಾರ್ ಪಾಳಯಂ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:09 am, Fri, 13 September 24

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ