AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಹೆಣ್ಣು ಹೆತ್ತಿದ್ದಕ್ಕೆ ಪತ್ನಿಗೆ ಕಿರುಕುಳ ಆರೋಪ; ಮಗುವನ್ನು ಆಸ್ಪತ್ರೆಯಲ್ಲೇ ಇಟ್ಟುಕೊಳ್ಳಿ ಎಂದು ಅಂಗಲಾಚಿದ ಬಾಣಂತಿ

ಬಾಗೇಪಲ್ಲಿ ತಾಲೂಕಿನಲ್ಲಿ ಕೈ ಹಿಡಿದ ಪತ್ನಿ, ಒಬ್ಬರಲ್ಲವೆಂದು ಇಬ್ಬರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ಕಾರಣ, ಅಸಮಾಧಾನ, ಅಕ್ರೋಶಗೊಂಡ ಗಂಡ ಹಾಗೂ ಅತ್ತೆ-ಮಾವ, ಬಾಣಂತಿ ಹಾಗೂ ಮಗುವನ್ನು ಸರಿಯಾಗಿ ನೋಡಿಕೊಳ್ಳದೇ ಕಿರುಕುಳ ನೀಡುತ್ತಿದ್ದಾರೆಂದು ಕುಗ್ಗಿದ ಬಾಣಂತಿಯೋರ್ವಳು ಮಗುವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸುಪರ್ಧಿಗೆ ಒಪ್ಪಿಸಲು ಮುಂದಾದ ಘಟನೆ ಬೆಳಕಿಗೆ ಬಂದಿದೆ. 

ಚಿಕ್ಕಬಳ್ಳಾಪುರ: ಹೆಣ್ಣು ಹೆತ್ತಿದ್ದಕ್ಕೆ ಪತ್ನಿಗೆ ಕಿರುಕುಳ ಆರೋಪ; ಮಗುವನ್ನು ಆಸ್ಪತ್ರೆಯಲ್ಲೇ ಇಟ್ಟುಕೊಳ್ಳಿ ಎಂದು ಅಂಗಲಾಚಿದ ಬಾಣಂತಿ
ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Mar 06, 2024 | 6:59 PM

Share

ಚಿಕ್ಕಬಳ್ಳಾಪುರ, ಮಾ.06: ಹೆರಿಗೆ ಆಗಿ ಹಸಿ ಮೈ ಹೊತ್ತ ಬಾಣಂತಿಯೋರ್ವಳು ಯಾವ ಮಕ್ಕಳೂ ಬೇಡ, ಜೀವನವೇ ಬೇಡವೆಂದು ಬೇಸತ್ತು, ತನ್ನ 4 ತಿಂಗಳ ಹೆಣ್ಣು ಮಗುವನ್ನು ವೈದ್ಯರಿಗೆ ಒಪ್ಪಿಸಲು ಮುಂದಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಮರಸನಪಲ್ಲಿ ಗ್ರಾಮದಲ್ಲಿ ನಡೆದಿದೆ. ಬಾಣಂತಿ ರಾಜಮ್ಮ, ಗಂಡ ಲಕ್ಷ್ಮೀನಾರಾಯಣನನ್ನು ಮದುವೆಯಾಗಿ 5 ವರ್ಷಗಳಾಗಿದೆ. ಹುಟ್ಟಿದ 2 ಮಕ್ಕಳು ಹೆಣ್ಣು ಮಕ್ಕಳೆಂಬ ಕಾರಣದಿಂದ ಗಂಡ, ಅತ್ತೆ, ಮಾವ ತಾತ್ಸಾರ ತಾಳಿದ್ದು, ಕಿರುಕುಳ ನೀಡುತ್ತಿದ್ದಾರೆ. ಹೆತ್ತ ಮಗುವನ್ನು ಆಸ್ಪತ್ರೆಯಲ್ಲೇ ಇಟ್ಟುಕೊಳ್ಳಿ ಎಂದು ಅಂಗಲಾಚಿದ್ದಾಳೆ.

ಇನ್ನು ರಾಜಮ್ಮಗೆ ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆಯಲ್ಲಿ ಸಿಜೆರಿಯನ್ ಹೆರಿಗೆ ಆಗಿ ನಂತರ ಗರ್ಭಕೋಶ ಶಸ್ತ್ರಚಿಕಿತ್ಸೆಯಾಗಿದೆ. ಒಂದೆಡೆ ವಿಶ್ರಾಂತಿ, ವೈದ್ಯಕೀಯ ಚಿಕಿತ್ಸೆ ಬೇಕಿದೆ. ಮತ್ತೊಂದೆಡೆ ಮಗುವಿನ ಆರೈಕೆ ಆಗಬೇಕಿದೆ. ಆದರೆ, ಗಂಡನ ಮನೆಯಲ್ಲಿ ಆರೈಕೆ, ಸಾಂತ್ವಾನ ಸಿಗದ ಹಿನ್ನಲೆ ಮಹಿಳೆ ನೊಂದು ಆಸ್ಪತ್ರೆಗೆ ಬಂದಿದ್ದಾಳೆ. ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಆಕೆಯ ಗಂಡ ಲಕ್ಷ್ಮೀನಾರಾಯಣನನ್ನು ಕರೆಯಿಸಿ ಬುದ್ಧಿವಾದ ಹೇಳಿದರು.

ಇದನ್ನೂ ಓದಿ:ತುಮಕೂರು ಜಿಲ್ಲೆಯಲ್ಲಿ ಮುಂದುವರಿದ ಮೌಢ್ಯಾಚರಣೆ: 1 ತಿಂಗಳ ಹಸುಗೂಸು, ಬಾಣಂತಿಯನ್ನ ಊರಾಚೆ ಇರಿಸಿದ ಗ್ರಾಮಸ್ಥರು

ಇದಾದ ಬಳಿಕ ಲಕ್ಷ್ಮೀನಾರಾಯಣ ತನ್ನ ಹೆಂಡತಿ ಮತ್ತು ಮಗುವನ್ನು ಸಾಕುವುದಾಗಿ ತಿಳಿಸಿದ್ದಾನೆ. ಮತ್ತೊಂದೆಡೆ ರಾಜಮ್ಮನ ಅತ್ತೆ-ಮಾವನ ವಾದವೇ ಬೇರೆಯಾಗಿದ್ದು, ‘ರಾಜಮ್ಮ ಗಂಡನ ಮನೆ ಬದಲು ತವರು ಮನೆಗೆ ಹೋಗಲು ಯತ್ನಿಸಿದ್ದಾಳೆ. ಆದರೆ, ಯಾರೂ ರಾಜಮ್ಮನ ಆಶ್ರಯಕ್ಕೆ ಬಂದಿಲ್ಲ. ರಾಜಮ್ಮ ಮಾನಸಿಕ ಸ್ಥೈರ್ಯ ಕಳೆದುಕೊಂಡು, ಇಲ್ಲಸಲ್ಲದ್ದನ್ನು ಆರೋಪ ಮಾಡುತ್ತಿದ್ದಾಳೆಂದು ಆರೋಪ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ