AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸಪ್ಪನನ್ನು ಮದುವೆಯಾಗಿ ಫಜೀತಿಗೆ ಸಿಲುಕಿದ ಮಹಿಳೆ: ನಾಪತ್ತೆಯಾದ ಗಂಡನನ್ನು ಹುಡುಕಿಕೊಡುವಂತೆ ಅಧಿಕಾರಿಗಳ ಮೊರೆ ಹೋದ ಪತ್ನಿ

ಪ್ರೀತಿಸಿ ಮದುವೆಯಾದವರು ಒಂದು ವರ್ಷದಲ್ಲೇ ವಿರಹ, ಭಿನ್ನಾಭಿಪ್ರಾಯಗಳು ಉಂಟಾಗಿ ಕಟ್ಟಿಕೊಂಡ ಪತ್ನಿಯನ್ನು ಪೊಲೀಸ್ ಕಾನ್‌ಸ್ಟೇಬಲ್ ಗಂಡ ಬಿಟ್ಟು ನಾಪತ್ತೆಯಾಗಿರುವಂತಹ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಸದ್ಯ ನಾಪತ್ತೆಯಾದ ಗಂಡನನ್ನು ಹುಡುಕಿಕೊಡುವಂತೆ ಪತ್ನಿ ಮಹಿಳಾ ಆಯೋಗದ ಮೊರೆಹೋಗಿದ್ದಾರೆ. ಇತ್ತ ಪೊಲೀಸ್ ಕಾನ್‌ಸ್ಟೇಬಲ್​​ನನ್ನು ಅಮಾನತ್ತು ಮಾಡಲಾಗಿದೆ.

ಪೊಲೀಸಪ್ಪನನ್ನು ಮದುವೆಯಾಗಿ ಫಜೀತಿಗೆ ಸಿಲುಕಿದ ಮಹಿಳೆ: ನಾಪತ್ತೆಯಾದ ಗಂಡನನ್ನು ಹುಡುಕಿಕೊಡುವಂತೆ ಅಧಿಕಾರಿಗಳ ಮೊರೆ ಹೋದ ಪತ್ನಿ
ಸಿರೀಶ, ಪೊಲೀಸ್ ಕಾನ್‌ಸ್ಟೆಬಲ್‌ ತಿಮ್ಮಣ್ಣ ಬೂಸರೆಡ್ಡಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: May 22, 2025 | 10:14 AM

Share

ಚಿಕ್ಕಬಳ್ಳಾಪುರ, ಮೇ 22: ಆಕೆ ಪದವೀಧರೆ. ಆತ ಪೊಲೀಸ್ ಕಾನ್‌ಸ್ಟೆಬಲ್‌ (police Constable). ಕಾಲೇಜೊಂದರಲ್ಲಿ ಪರಿಚಯವಾಗಿದ್ದ ಅವರಿಬ್ಬರೂ ಪ್ರೀತಿ, ಪ್ರೇಮವೆಂದು ಸುತ್ತಾಡಿ ಬಳಿಕ ಮದುವೆ ಮಾಡಿಕೊಂಡಿದ್ದರು. ಅವರಿಬ್ಬರ ಮದುವೆಗೆ ಇನ್ನೂ ಒಂದು ವರ್ಷ ಕೂಡ ತುಂಬಿಲ್ಲ. ಆಗಲೇ ನೀನು ಬೇಡ, ನಿನ್ನ ಜೊತೆ ಸಂಸಾರವೂ ಬೇಡ ಎಂದು ಪೊಲೀಸ್ ಗಂಡ ಕಾಣೆಯಾಗಿದ್ದಾರೆ. ಇದರಿಂದ ವಿಚಲಿತಳಾಗಿರುವ ಪತ್ನಿ (wife), ಪೊಲೀಸ್ ಗಂಡನನ್ನು ಹುಡುಕಿಕೊಡುವಂತೆ ಅವಲತ್ತುಕೊಂಡಿದ್ದಾರೆ.

2024 ಆಗಸ್ಟ್ 27ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪೊಲೀಸ್‍ಠಾಣೆಯ ಕಾನ್ಸ್‍ಟೇಬಲ್ ತಿಮ್ಮಣ್ಣ ಬೂಸರೆಡ್ಡಿ ಹಾಗೂ ಅದೇ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಸೋಮೇನಹಳ್ಳಿ ನಿವಾಸಿ ಸಿರೀಶ ಎಂಬುವವರ ಮದುವೆ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದಿತ್ತು.

ಇದನ್ನೂ ಓದಿ: ಅಂತರ್​ಧರ್ಮೀಯ ವಿವಾಹದಲ್ಲಿ ಬೆಸೆದಿರುವ ಚಿಕ್ಕಬಳ್ಳಾಪುರ ಯುವಕ-ಯುವತಿಗೆ ತಮ್ಮ ಕುಟುಂಬಗಳ ಭೀತಿ

ಇದನ್ನೂ ಓದಿ
Image
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
Image
ಹಿಂದೂ ಯುವಕನನ್ನು ಪ್ರೀತಿಸಿ ಮದ್ವೆಯಾದ ಮುಸ್ಲಿಂ ಯುವತಿ
Image
ಚಿಕ್ಕಬಳ್ಳಾಪುರ: ಕಟಾವಿಗೆ ಬಂದ ದ್ರಾಕ್ಷಿ ತೋಟಕ್ಕೆ ಕಿಡಿಗೇಡಿಗಳಿಂದ ವಾಮಾಚಾರ
Image
ನಂದಿಹಿಲ್ಸ್ ಅಭಿವೃದ್ದಿಗೆ ಪಣ: ಪ್ರವಾಸಿಗರ ಕುಂದು ಕೊರತೆ ಆಲಿಸಿದ ಸಚಿವ

ಮದುವೆ ದಿನ ಕೂಡ ದೊಡ್ಡ ರಂಪಾಟವೇ ನಡೆದಿತ್ತು. ಆದರೆ ಮದುವೆಯಾಗಿ ಇನ್ನು ಒಂದು ವರ್ಷ ತುಂಬಿಲ್ಲ ಆಗಲೇ ಜೋಡಿಯ ಮಧ್ಯೆ ವಿರಹ, ಭಿನ್ನಾಭಿಪ್ರಾಯ, ಕಲಹ ಉಂಟಾಗಿದ್ದು, ತಿಮ್ಮಣ್ಣ, ಸಿರೀಶಳನ್ನು ಬೀದಿಯಲ್ಲೇ ಬಿಟ್ಟು ನಾಪತ್ತೆಯಾಗಿದ್ದಾರೆ. ಇದರಿಂದ ನಮ್ಮ ಸಂಸಾರ ಒಂದು ಮಾಡಿ ಎಂದು ಸಿರೀಶ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿಯನ್ನು ಭೇಟಿಯಾಗಿ ಅವಲತ್ತುಕೊಂಡಿದ್ದಾಳೆ.

ಕಾನ್‌ಸ್ಟೆಬಲ್‌ ತಿಮ್ಮಣ್ಣ ಅಮಾನತ್ತು 

ಇನ್ನು ಗಂಡ-ಹೆಂಡತಿಯ ಜಗಳ ವಿಕೋಪಕ್ಕೆ ತಿರುಗಿದ್ದು, ಪೊಲೀಸ್ ಕಾನ್‌ಸ್ಟೆಬಲ್‌ ಆಗಿದ್ದ ತಿಮ್ಮಣ್ಣ ಹೆಂಡತಿಯಿಂದ ದೂರ ಉಳಿದಿದ್ದಾರೆ. ಇದರಿಂದ ಸಿರೀಶ ಶಿಡ್ಲಘಟ್ಟ ಪೊಲೀಸ್ ವೃತ್ತ ನಿರೀಕ್ಷಕ ಶ್ರೀನಿವಾಸ್‍ರಿಂದ ಹಿಡಿದು ಎಡಿಜಿಪಿ ಹಿರಿಯ ಅಧಿಕಾರಿಗಳವರೆಗೂ ಗಂಡನ ಮೇಲೆ ದೂರು ನೀಡಿದ್ದಾರೆ. ಇದರಿಂದ ಅಧಿಕಾರಿಗಳು ಕಾನ್‌ಸ್ಟೆಬಲ್‌ ತಿಮ್ಮಣ್ಣನನ್ನು ಅಮಾನತ್ತು ಮಾಡಿದ್ದಾರೆ.

ಇದನ್ನೂ ಓದಿ: ಹಿಂದೂ ಯುವಕನನ್ನ ಪ್ರೀತಿಸಿ ಮದ್ವೆಯಾದ ಮುಸ್ಲಿಂ ಯುವತಿ: ಧರ್ಮ ಮೀರಿದ ಪ್ರೇಮವಿವಾಹ

ಇತ್ತ ತಿಮ್ಮಣ್ಣ ಪತ್ನಿ ಕಣ್ಣಿಗೆ ಕಾಣಿಸದೆ ನಾಪತ್ತೆಯಾಗಿದ್ದಾರೆ. ಇನ್ನು ಮನೆಯವರ ವಿರೋಧ ಕಟ್ಟಿಕೊಂಡು ಪೊಲೀಸ್ ತಿಮ್ಮಣ್ಣನನ್ನು ಪ್ರೀತಿಸಿ ವಿವಾಹವಾಗಿದ್ದ ಸಿರೀಶ ಈಗ ಅತ್ತ ದರಿ ಇತ್ತ ಪುಲಿ ಎಂತಾಗಿದ್ದು, ಅತ್ತ ತವರುಮನೆ, ಇತ್ತ ಗಂಡನ ಮನೆ ಇಲ್ಲದೇ ಬೀದಿಯಲ್ಲಿ ಬದುಕುವಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
VIDEO: ಗ್ಲೆನ್ ಫಿಲಿಪ್ಸ್ ಇದ್ದಾರೆ ಎಚ್ಚರಿಕೆ..!
VIDEO: ಗ್ಲೆನ್ ಫಿಲಿಪ್ಸ್ ಇದ್ದಾರೆ ಎಚ್ಚರಿಕೆ..!
ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ 7ನೇ ವೇತನ ಆಯೋಗ ಜಾರಿ: ಮೋದಿ
ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ 7ನೇ ವೇತನ ಆಯೋಗ ಜಾರಿ: ಮೋದಿ
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ