AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆರೇಸಂದ್ರ ಬಳಿ ಕಂಟೈನರ್ ಪತ್ತೆ: 3 ಕೋಟಿ ರೂ ಮೌಲ್ಯದ ಮೊಬೈಲ್ ಜತೆಗೆ ಚಾಲಕ ನಾಪತ್ತೆ

ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲರಹಳ್ಳಿ ಬಳಿ 3 ಕೋಟಿ ರೂಪಾಯಿ ಮೌಲ್ಯದ ಶಿಯೋಮಿ ಮೊಬೈಲ್‌ಗಳನ್ನು ಒಳಗೊಂಡ ಕಂಟೈನರ್ ಕಳವುಗೊಂಡಿದೆ. ದೆಹಲಿಯಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ಮೊಬೈಲ್‌ಗಳು ಕಳವಾಗಿದ್ದು, ಖಾಲಿ ಕಂಟೈನರ್ ಪತ್ತೆಯಾಗಿದೆ. ಚಾಲಕ ನಾಪತ್ತೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪೆರೇಸಂದ್ರ ಬಳಿ ಕಂಟೈನರ್ ಪತ್ತೆ: 3 ಕೋಟಿ ರೂ ಮೌಲ್ಯದ ಮೊಬೈಲ್ ಜತೆಗೆ ಚಾಲಕ ನಾಪತ್ತೆ
ಪೆರೇಸಂದ್ರ ಬಳಿ ಕಂಟೈನರ್ ಪತ್ತೆ: 3 ಕೋಟಿ ರೂ. ಮೌಲ್ಯದ ಮೊಬೈಲ್ ಜತೆಗೆ ಚಾಲಕ ನಾಪತ್ತೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Nov 29, 2024 | 8:27 PM

Share

ಚಿಕ್ಕಬಳ್ಳಾಪುರ, ನವೆಂಬರ್​ 29: ಕಂಟೈನರ್​ ಸಮೇತ ಶಿಯೋಮಿ (Xiaomi Mobile) ಕಂಪನಿಗೆ ಸೇರಿದ 3 ಕೋಟಿ ಮೌಲ್ಯದ ಮೊಬೈಲ್​ ಕಳತನವಾಗಿರುವಂತಹ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲರಹಳ್ಳಿ ಬಳಿ ನಡೆದಿದೆ. ಎನ್​ಎಲ್ 01, ಎಎಫ್ 2743 ಕಂಟೇನರ್​ನಲ್ಲಿ ದೆಹಲಿಯಿಂದ ಬೆಂಗಳೂರಿಗೆ ಮೊಬೈಲ್ ಸಾಗಣೆ ಮಾಡುವಾಗ ಕಳ್ಳತನವಾಗಿದೆ. ಸದ್ಯ ಪೆರೇಸಂದ್ರೆ ಠಾಣೆ ಪೊಲೀಸರು ಖಾಲಿ ಕಂಟೇನರ್ ವಶಕ್ಕೆ ಪಡೆದುಕೊಂಡಿದ್ದಾರೆ.

ನ. 22ರಂದು ಕಂಟೈನರ್​ ಒಂದರಲ್ಲಿ 3 ಕೋಟಿ ರೂ. ಮೌಲ್ಯದ ಶಿಯೋಮಿ ಕಂಪನಿಗೆ ಸೇರಿದ ಮೊಬೈಲ್ ಗಳನ್ನು ತುಂಬಿಕೊಂಡು ದೆಹಲಿಯಿಂದ ಬೆಂಗಳೂರಿನತ್ತ ಹೊರಟಿದ್ದ ಕಂಟೈನರ್ ಸಕಾಲಕ್ಕೆ ಬೆಂಗಳೂರಿಗೆ ತಲುಪಲಿಲ್ಲ.

ಇದನ್ನೂ ಓದಿ: ಎಸಿ ಕಚೇರಿ ಪಿಠೋಪಕರಣಗಳನ್ನ ಹೊತ್ತೊಯ್ದ ದೂರುದಾರರು: ಬೆಪ್ಪರಾಗಿ ನಿಂತ ಎಸಿ!

ಹಾಗಾಗಿ ಅನುಮಾನಗೊಂಡ ಕಂಪನಿಯ ಅಧಿಕಾರಿಗಳು ಕಂಟೈನರ್ ಜಿ.ಪಿ.ಎಸ್ ಪರಿಶೀಲನೆ ನಡೆಸಿದಾಗ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲರಹಳ್ಳಿ ಬಳಿ ಕಂಟೈನರ್​ ನಿಂತಿದ್ದು ಗೊತ್ತಾಗಿದೆ. ಕಂಟೈನರ್ ಪರಿಶೀಲನೆ ನಡೆಸಿದಾಗ ಅದರಲ್ಲಿದ್ದ 3 ಕೋಟಿ ರೂ. ಮೌಲ್ಯದ ಮೊಬೈಲ್​ಗಳು ಕಾಣೆಯಾಗಿದ್ದು, ಕಂಟೈನರ್ ಚಾಲಕನೂ ನಾಪತ್ತೆಯಾಗಿದ್ದಾನೆ.

ಚಾಲಕ ನಾಪತ್ತೆ

ಸೇಪ್ ಸ್ಪೀಡ್ ಕ್ಯಾರಿಯರ್ಸ್ ಪ್ರೈ. ಲಿಮಿಟೆಡ್ ಕಂಪನಿ ಶಿಯೋಮಿ ಕಂಪನಿಗೆ ಸೇರಿದ ಮೊಬೈಲ್​ಗಳನ್ನು ಸಾಗಾಟ ಹೊಣೆ ಹೊತ್ತಿತ್ತು. ಇದೇ ಕಂಪನಿಯಲ್ಲಿ ರಾಹುಲ್​ ಎಂಬಾತ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಲಾರಿ ಪತ್ತೆಯಾದರು ಚಾಲಕ ನಾಪತ್ತೆಯಾಗಿದ್ದು, ಸದ್ಯ ಪೊಲೀಸರು ಚಾಲಕನ ಜಾಡು ಹಿಡಿದು ತನಿಖೆ ಆರಂಭಿಸಿದ್ದಾರೆ.

ಬೈಕ್​ಗೆ ಟ್ರ್ಯಾಕ್ಟರ್ ಡಿಕ್ಕಿ:  ನರ್ಸಿಂಗ್​ ವಿದ್ಯಾರ್ಥಿ ಸ್ಥಿತಿ ಗಂಭೀರ

ಆರೂರು ಬಳಿ ಇರುವ ಸರ್ಕಾರಿ ನಂದಿ ಮೆಡಿಕಲ್ ಕಾಲೇಜು ಕ್ಯಾಂಪಸ್ ಬಳಿ ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ನರ್ಸಿಂಗ್​ ವಿದ್ಯಾರ್ಥಿಗೆ ಗಂಭೀರ ಗಾಯವಾಗಿರುವಂತಹ ಘಟನೆ ನಡೆದಿದೆ. ಗುಡಿಬಂಡೆ ಮೂಲದ ವಿದ್ಯಾರ್ಥಿ ಮಧುಸೂದನ್(22) ಸ್ಥಿತಿ ಗಂಭೀರವಾಗಿದೆ.

ಇದನ್ನೂ ಓದಿ: ಅರ್ಕಾವತಿ ನದಿ ನೀರಿನಲ್ಲಿ ಕ್ಯಾನ್ಸರ್ ಕಾರಕ ಮಾರಕ ರಾಸಾಯನಿಕ, ಡಿಡಿಟಿ ಪತ್ತೆ: ಸಂಶೋಧನಾ ವರದಿ

ಗಾಯಾಳು ವಿದ್ಯಾರ್ಥಿ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪೇರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:23 pm, Fri, 29 November 24

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ