AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆರೇಸಂದ್ರ ಬಳಿ ಕಂಟೈನರ್ ಪತ್ತೆ: 3 ಕೋಟಿ ರೂ ಮೌಲ್ಯದ ಮೊಬೈಲ್ ಜತೆಗೆ ಚಾಲಕ ನಾಪತ್ತೆ

ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲರಹಳ್ಳಿ ಬಳಿ 3 ಕೋಟಿ ರೂಪಾಯಿ ಮೌಲ್ಯದ ಶಿಯೋಮಿ ಮೊಬೈಲ್‌ಗಳನ್ನು ಒಳಗೊಂಡ ಕಂಟೈನರ್ ಕಳವುಗೊಂಡಿದೆ. ದೆಹಲಿಯಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ಮೊಬೈಲ್‌ಗಳು ಕಳವಾಗಿದ್ದು, ಖಾಲಿ ಕಂಟೈನರ್ ಪತ್ತೆಯಾಗಿದೆ. ಚಾಲಕ ನಾಪತ್ತೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪೆರೇಸಂದ್ರ ಬಳಿ ಕಂಟೈನರ್ ಪತ್ತೆ: 3 ಕೋಟಿ ರೂ ಮೌಲ್ಯದ ಮೊಬೈಲ್ ಜತೆಗೆ ಚಾಲಕ ನಾಪತ್ತೆ
ಪೆರೇಸಂದ್ರ ಬಳಿ ಕಂಟೈನರ್ ಪತ್ತೆ: 3 ಕೋಟಿ ರೂ. ಮೌಲ್ಯದ ಮೊಬೈಲ್ ಜತೆಗೆ ಚಾಲಕ ನಾಪತ್ತೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Nov 29, 2024 | 8:27 PM

Share

ಚಿಕ್ಕಬಳ್ಳಾಪುರ, ನವೆಂಬರ್​ 29: ಕಂಟೈನರ್​ ಸಮೇತ ಶಿಯೋಮಿ (Xiaomi Mobile) ಕಂಪನಿಗೆ ಸೇರಿದ 3 ಕೋಟಿ ಮೌಲ್ಯದ ಮೊಬೈಲ್​ ಕಳತನವಾಗಿರುವಂತಹ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲರಹಳ್ಳಿ ಬಳಿ ನಡೆದಿದೆ. ಎನ್​ಎಲ್ 01, ಎಎಫ್ 2743 ಕಂಟೇನರ್​ನಲ್ಲಿ ದೆಹಲಿಯಿಂದ ಬೆಂಗಳೂರಿಗೆ ಮೊಬೈಲ್ ಸಾಗಣೆ ಮಾಡುವಾಗ ಕಳ್ಳತನವಾಗಿದೆ. ಸದ್ಯ ಪೆರೇಸಂದ್ರೆ ಠಾಣೆ ಪೊಲೀಸರು ಖಾಲಿ ಕಂಟೇನರ್ ವಶಕ್ಕೆ ಪಡೆದುಕೊಂಡಿದ್ದಾರೆ.

ನ. 22ರಂದು ಕಂಟೈನರ್​ ಒಂದರಲ್ಲಿ 3 ಕೋಟಿ ರೂ. ಮೌಲ್ಯದ ಶಿಯೋಮಿ ಕಂಪನಿಗೆ ಸೇರಿದ ಮೊಬೈಲ್ ಗಳನ್ನು ತುಂಬಿಕೊಂಡು ದೆಹಲಿಯಿಂದ ಬೆಂಗಳೂರಿನತ್ತ ಹೊರಟಿದ್ದ ಕಂಟೈನರ್ ಸಕಾಲಕ್ಕೆ ಬೆಂಗಳೂರಿಗೆ ತಲುಪಲಿಲ್ಲ.

ಇದನ್ನೂ ಓದಿ: ಎಸಿ ಕಚೇರಿ ಪಿಠೋಪಕರಣಗಳನ್ನ ಹೊತ್ತೊಯ್ದ ದೂರುದಾರರು: ಬೆಪ್ಪರಾಗಿ ನಿಂತ ಎಸಿ!

ಹಾಗಾಗಿ ಅನುಮಾನಗೊಂಡ ಕಂಪನಿಯ ಅಧಿಕಾರಿಗಳು ಕಂಟೈನರ್ ಜಿ.ಪಿ.ಎಸ್ ಪರಿಶೀಲನೆ ನಡೆಸಿದಾಗ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲರಹಳ್ಳಿ ಬಳಿ ಕಂಟೈನರ್​ ನಿಂತಿದ್ದು ಗೊತ್ತಾಗಿದೆ. ಕಂಟೈನರ್ ಪರಿಶೀಲನೆ ನಡೆಸಿದಾಗ ಅದರಲ್ಲಿದ್ದ 3 ಕೋಟಿ ರೂ. ಮೌಲ್ಯದ ಮೊಬೈಲ್​ಗಳು ಕಾಣೆಯಾಗಿದ್ದು, ಕಂಟೈನರ್ ಚಾಲಕನೂ ನಾಪತ್ತೆಯಾಗಿದ್ದಾನೆ.

ಚಾಲಕ ನಾಪತ್ತೆ

ಸೇಪ್ ಸ್ಪೀಡ್ ಕ್ಯಾರಿಯರ್ಸ್ ಪ್ರೈ. ಲಿಮಿಟೆಡ್ ಕಂಪನಿ ಶಿಯೋಮಿ ಕಂಪನಿಗೆ ಸೇರಿದ ಮೊಬೈಲ್​ಗಳನ್ನು ಸಾಗಾಟ ಹೊಣೆ ಹೊತ್ತಿತ್ತು. ಇದೇ ಕಂಪನಿಯಲ್ಲಿ ರಾಹುಲ್​ ಎಂಬಾತ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಲಾರಿ ಪತ್ತೆಯಾದರು ಚಾಲಕ ನಾಪತ್ತೆಯಾಗಿದ್ದು, ಸದ್ಯ ಪೊಲೀಸರು ಚಾಲಕನ ಜಾಡು ಹಿಡಿದು ತನಿಖೆ ಆರಂಭಿಸಿದ್ದಾರೆ.

ಬೈಕ್​ಗೆ ಟ್ರ್ಯಾಕ್ಟರ್ ಡಿಕ್ಕಿ:  ನರ್ಸಿಂಗ್​ ವಿದ್ಯಾರ್ಥಿ ಸ್ಥಿತಿ ಗಂಭೀರ

ಆರೂರು ಬಳಿ ಇರುವ ಸರ್ಕಾರಿ ನಂದಿ ಮೆಡಿಕಲ್ ಕಾಲೇಜು ಕ್ಯಾಂಪಸ್ ಬಳಿ ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ನರ್ಸಿಂಗ್​ ವಿದ್ಯಾರ್ಥಿಗೆ ಗಂಭೀರ ಗಾಯವಾಗಿರುವಂತಹ ಘಟನೆ ನಡೆದಿದೆ. ಗುಡಿಬಂಡೆ ಮೂಲದ ವಿದ್ಯಾರ್ಥಿ ಮಧುಸೂದನ್(22) ಸ್ಥಿತಿ ಗಂಭೀರವಾಗಿದೆ.

ಇದನ್ನೂ ಓದಿ: ಅರ್ಕಾವತಿ ನದಿ ನೀರಿನಲ್ಲಿ ಕ್ಯಾನ್ಸರ್ ಕಾರಕ ಮಾರಕ ರಾಸಾಯನಿಕ, ಡಿಡಿಟಿ ಪತ್ತೆ: ಸಂಶೋಧನಾ ವರದಿ

ಗಾಯಾಳು ವಿದ್ಯಾರ್ಥಿ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪೇರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:23 pm, Fri, 29 November 24

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ