AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋದರಸಂಬಂಧಿಯನ್ನೇ ವರಿಸಿದ ಯುವತಿ! ಚಿಕ್ಕಬಳ್ಳಾಪುರದಲ್ಲೊಂದು ವಿಚಿತ್ರ ವಿವಾಹ

ದೇವನಹಳ್ಳಿಯ ಯುವತಿಯೊಬ್ಬಳು ತಾಯಿಯ ತಂಗಿಯ ಮಗನನ್ನೇ (ವರಸೆಯಲ್ಲಿ ತಮ್ಮ) ಪ್ರೀತಿಸಿ ಮದುವೆಯಾಗಿರುವ ವಿಚಿತ್ರ ವಿದ್ಯಮಾನ ಬೆಳಕಿಗೆ ಬಂದಿದೆ. ಮೇ 29ಕ್ಕೆ ಬೇರೊಬ್ಬನೊಂದಿಗೆ ನಡೆಯಬೇಕಿದ್ದ ಮದುವೆಯನ್ನು ನಿರಾಕರಿಸಿ, ಸೋದರಸಂಬಂಧಿಯನ್ನೇ ವರಿಸಿದ್ದಾಳೆ. ಸದ್ಯ ಈ ನವ ಜೋಡಿ ರಕ್ಷಣೆ ಕೋರಿ ಚಿಕ್ಕಬಳ್ಳಾಪುರ ಪೊಲೀಸರ ಮೊರೆ ಹೋಗಿದೆ.

ಸೋದರಸಂಬಂಧಿಯನ್ನೇ ವರಿಸಿದ ಯುವತಿ! ಚಿಕ್ಕಬಳ್ಳಾಪುರದಲ್ಲೊಂದು ವಿಚಿತ್ರ ವಿವಾಹ
ಸಾಂದರ್ಭಿಕ ಚಿತ್ರImage Credit source: istockphoto.com
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:May 07, 2026 | 1:13 PM

Share

ಚಿಕ್ಕಬಳ್ಳಾಪುರ, ಮೇ 7: ಪ್ರೀತಿ ಕುರುಡು ಎಂಬ ಮಾತಿಗೆ ಸಾಕ್ಷಿಯೆಂಬಂತೆ, ವರಸೆಯಲ್ಲಿ ಅಕ್ಕ-ತಮ್ಮನಾಗಬೇಕಾದವರೇ ಪ್ರೀತಿಸಿ ಮದುವೆಯಾಗಿ ಪೋಷಕರಿಗೆ ಶಾಕ್ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೇವನಹಳ್ಳಿ (Devanahalli) ತಾಲ್ಲೂಕಿನ ಸಾವಕನಹಳ್ಳಿಯ ಶಶಿಕಲಾ (29), ಹೊಸಕೋಟೆ ತಾಲ್ಲೂಕಿನ ಹಳೆಊರಿನ ಪ್ರವೀಣ್ (24) ಎಂಬಾತನನ್ನು ಮದುವೆಯಾಗುವ ಮೂಲಕ ಸಮಾಜ ಮತ್ತು ಕುಟುಂಬದ ವಿರೋಧದ ನಡುವೆಯೂ ಒಂದಾಗಿದ್ದಾರೆ. ಅಷ್ಟೇ ಅಲ್ಲದೆ, ತಮಗೆ ರಕ್ಷಣೆ ನೀಡುವಂತೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕಚೇರಿ ಮತ್ತು ಮಹಿಳಾ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ.

ಮುಖ್ಯಾಂಶಗಳು

  • ಶಶಿಕಲಾ ಮತ್ತು ಪ್ರವೀಣ್ ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದರು.
  • ಮೇ 29 ರಂದು ಶಶಿಕಲಾಗೆ ಬೇರೊಬ್ಬ ಯುವಕನೊಂದಿಗೆ ಮದುವೆ ನಿಗದಿಯಾಗಿತ್ತು.
  • ಶಶಿಕಲಾ ತಾಯಿಯ ತಂಗಿಯ ಮಗ ಪ್ರವೀಣ್​ನನ್ನೇ ಮದುವೆಯಾಗಿದ್ದಾಳೆ.

ಪೋಷಕರ ವಿರೋಧದ ನಡುವೆ ಮದುವೆ

ಶಶಿಕಲಾ ಮತ್ತು ಪ್ರವೀಣ್ ಸಂಬಂಧಿಕರಾಗಿದ್ದು, ಶಶಿಕಲಾಳ ತಾಯಿಯ ತಂಗಿಯ ಮಗನೇ ಪ್ರವೀಣ್. ಅಂದರೆ, ವರಸೆಯಲ್ಲಿ ಇವರಿಬ್ಬರು ಅಕ್ಕ-ತಮ್ಮನಾಗಬೇಕು. ಇವರ ಪ್ರೀತಿಯ ವಿಷಯ ತಿಳಿದ ಪೋಷಕರು, ಈ ಸಂಬಂಧ ಸಮಾಜದಲ್ಲಿ ಒಪ್ಪಿತವಲ್ಲ ಎಂದು ವಿರೋಧಿಸಿದ್ದರು. ಅಲ್ಲದೆ, ಶಶಿಕಲಾಗೆ ಬೇರೊಬ್ಬ ಹುಡುಗನೊಂದಿಗೆ ನಿಶ್ಚಿತಾರ್ಥ ನಡೆಸಿ ಇದೇ ಮೇ 29ಕ್ಕೆ ಮದುವೆ ದಿನಾಂಕವನ್ನೂ ನಿಗದಿಪಡಿಸಿದ್ದರು. ಆದರೆ ಮದುವೆಗೆ ಕೆಲವೇ ದಿನ ಬಾಕಿ ಇರುವಾಗ ಶಶಿಕಲಾ ಮನೆಯಿಂದ ಹೊರಬಂದು ಪ್ರವೀಣ್‌ನನ್ನು ಮದುವೆಯಾಗಿದ್ದಾಳೆ.

ಪೊಲೀಸ್ ರಕ್ಷಣೆ ಕೋರಿದ ನವಜೋಡಿ

ಮದುವೆಯಾದ ಬಳಿಕ ಈ ಜೋಡಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕಚೇರಿ ಮತ್ತು ಮಹಿಳಾ ಪೊಲೀಸ್ ಠಾಣೆಗೆ ಧಾವಿಸಿ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ. ‘ನಾವು ಪರಸ್ಪರ ಇಷ್ಟಪಟ್ಟು ಮದುವೆಯಾಗಿದ್ದೇವೆ, ನಮ್ಮನ್ನು ನಮ್ಮ ಪಾಡಿಗೆ ಬದುಕಲು ಬಿಡಿ’ ಎಂದು ಶಶಿಕಲಾ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾಳೆ. ಇತ್ತ ಪೋಷಕರು ‘ವರಸೆಯಲ್ಲಿ ತಮ್ಮನಾಗುವವನನ್ನೇ ಮದುವೆಯಾಗಿ ಇಡೀ ಕುಟುಂಬಕ್ಕೆ ಅವಮಾನ ತಂದಿದ್ದೀಯಾ’ ಎಂದು ಹತಾಶೆ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಚಿತ್ರ ಮದುವೆ ಪ್ರಕರಣ ಸ್ಥಳೀಯವಾಗಿ ಭಾರೀ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ಹೊಸಕೋಟೆ ಪೊಲೀಸರ ಭರ್ಜರಿ ಬೇಟೆ: 50 ಬೈಕ್ ಸಮೇತ ಇಬ್ಬರು ಅಂತರರಾಜ್ಯ ಕಳ್ಳರ ಬಂಧನ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:12 pm, Thu, 7 May 26

Follow Us
ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
NEET ಹೋರಾಟ: ಪ್ರತಿಭಟನಾಕಾರರ ಬಗ್ಗೆ ಸಿ.ಟಿ. ರವಿ ವಿವಾದಾತ್ಮಕ ಹೇಳಿಕೆ
NEET ಹೋರಾಟ: ಪ್ರತಿಭಟನಾಕಾರರ ಬಗ್ಗೆ ಸಿ.ಟಿ. ರವಿ ವಿವಾದಾತ್ಮಕ ಹೇಳಿಕೆ
ಪಶ್ಚಿಮ ಘಟ್ಟದಲ್ಲಿ ಮತ್ತೆ ಮಳೆ, ಕೃಷ್ಣಾ ನದಿ ಹರಿವಿನ ಮಟ್ಟ ಏರಿಕೆ
ಪಶ್ಚಿಮ ಘಟ್ಟದಲ್ಲಿ ಮತ್ತೆ ಮಳೆ, ಕೃಷ್ಣಾ ನದಿ ಹರಿವಿನ ಮಟ್ಟ ಏರಿಕೆ
ಗುಂಡ್ಲುಪೇಟೆ ಮುಖ್ಯ ರಸ್ತೆಗಳನ್ನು ಸ್ವಂತ ವೆಚ್ಚದಲ್ಲಿ ಮುಚ್ಚಿದ ಕೂಲಿ ಕಾರ್ಮ
ಗುಂಡ್ಲುಪೇಟೆ ಮುಖ್ಯ ರಸ್ತೆಗಳನ್ನು ಸ್ವಂತ ವೆಚ್ಚದಲ್ಲಿ ಮುಚ್ಚಿದ ಕೂಲಿ ಕಾರ್ಮ
ಎರಡನೇ ಆಷಾಢ ಶುಕ್ರವಾರದ ಹಿನ್ನೆಲೆ ಚಾಮುಂಡಿದೇವಿಗೆ ವಿಜೃಂಭಣೆಯ ಪೂಜೆ
ಎರಡನೇ ಆಷಾಢ ಶುಕ್ರವಾರದ ಹಿನ್ನೆಲೆ ಚಾಮುಂಡಿದೇವಿಗೆ ವಿಜೃಂಭಣೆಯ ಪೂಜೆ
ಗುಂಡ್ಲುಪೇಟೆಯಲ್ಲಿ ವ್ಯಾಘ್ರನ ಬಿಂದಾಸ್ ಓಡಾಟ
ಗುಂಡ್ಲುಪೇಟೆಯಲ್ಲಿ ವ್ಯಾಘ್ರನ ಬಿಂದಾಸ್ ಓಡಾಟ
ಗೋಕರ್ಣ ಮಹಾಗಣಪತಿ ದೇವರ ಸ್ಪರ್ಶ ದರ್ಶನ, ಪೂಜೆಗೆ ನಿರ್ಬಂಧ
ಗೋಕರ್ಣ ಮಹಾಗಣಪತಿ ದೇವರ ಸ್ಪರ್ಶ ದರ್ಶನ, ಪೂಜೆಗೆ ನಿರ್ಬಂಧ
ಎರಡನೇ ಆಷಾಢ ಶುಕ್ರವಾರ ಚಾಮುಂಡೇಶ್ವರಿ ತಾಯಿಯ ಅಲಂಕಾರ ಹೇಗಿದೆ ನೋಡಿ
ಎರಡನೇ ಆಷಾಢ ಶುಕ್ರವಾರ ಚಾಮುಂಡೇಶ್ವರಿ ತಾಯಿಯ ಅಲಂಕಾರ ಹೇಗಿದೆ ನೋಡಿ
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ