ಎರಡೇ ವಾರಕ್ಕೆ ಮುರಿದು ಬಿತ್ತು ಹಿಂದೂ ಯುವಕ, ಮುಸ್ಲಿಂ ಯುವತಿಯ ಪ್ರೇಮ ವಿವಾಹ

| Updated By: ರಮೇಶ್ ಬಿ. ಜವಳಗೇರಾ

Updated on: Apr 07, 2025 | 6:02 PM

ಪ್ರೀತಿ ಕುರುಡು ಎನ್ನುವ ಹಾಗೆ ಜಾತಿ, ಧರ್ಮ, ಸಾಮಾಜಿಕ ಹಾಗೂ ಧಾರ್ಮಿಕ ಕಟ್ಟಲೆಗಳನ್ನು ಮೀರಿದ ಜೋಡಿಯೊಂದು ಪ್ರೇಮ ವಿವಾಹವಾಗಿತ್ತು. ಎದುರು ಬದುರು ಮನೆಯ ಮಸ್ಲಿಂ ಯುವತಿ ಹಾಗೂ ಹಿಂದೂ ಯುವಕ ತಮ್ಮ-ತಮ್ಮ ಧರ್ಮ, ಜಾತಿಗೆ ತಿಲಾಂಜಲಿ ಇಟ್ಟು ಪೋಷಕರ ವಿರೋಧದ ನಡುವೆಯೇ ಸಪ್ತಪದಿ ತುಳಿದಿತ್ತು. ಆದ್ರೆ, ಈ ಪ್ರೇಮ ವಿವಾಹ ಎರಡೇ ವಾರಕ್ಕೆ ಮುರಿದು ಬಿದ್ದಿದೆ. ಯವಕನನ್ನು ನಡು ನೀರಿನಲ್ಲೇ ಬಿಟ್ಟು ಯುವತಿ ಹೋಗಿದ್ದಾಳೆ.

ಎರಡೇ ವಾರಕ್ಕೆ ಮುರಿದು ಬಿತ್ತು ಹಿಂದೂ ಯುವಕ, ಮುಸ್ಲಿಂ ಯುವತಿಯ ಪ್ರೇಮ ವಿವಾಹ
ಫಸಿಯಾ ಹಾಗೂ ನಾಗಾರ್ಜುನ
Follow us on

ಚಿಕ್ಕಬಳ್ಳಾಪುರ, (ಏಪ್ರಿಲ್ 07): ಮುಸ್ಲಿಂ ಯುವತಿ ಹಾಗೂ ಹಿಂದೂ ಯುವಕ ಪ್ರೇಮ ವಿವಾಹ (Love Marriage) ಎರಡೇ ವಾರಕ್ಕೆ ಮುರಿದುಬಿದ್ದಿದೆ. ಎದುರು ಬದುರು ಮನೆಯವರಾಗಿದ್ದ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಮೈಲಪನಹಳ್ಳಿ ಗ್ರಾಮದ ಫಸಿಯಾ ಹಾಗೂ ನಾಗಾರ್ಜುನ ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ, ಇಬ್ಬರ ಮದ್ವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಈ ಜೋಡಿ ಮನೆಬಿಟ್ಟು ಹೋಗಿ ಪ್ರೇಮ ವಿವಾಹವಾಗಿತ್ತು. ಆದ್ರೆ, ಇದೀಗ 15 ದಿನದಲ್ಲೇ ಈ ಪ್ರೇಮ ವಿವಾಹ ಅಂತ್ಯಕಂಡಿದೆ. ತಾಯಿಗೆ ಅನಾರೋಗ್ಯದ ಕಾರಣ ನೀಡಿ ಫಸಿಯಾ, ನಾಗಾರ್ಜುನನನ್ನು ಸಂಸಾರ ಎನ್ನುವ ಸಾಗರದ ನಡು ನೀರಿನಲ್ಲೇ ಬಿಟ್ಟು ತವರಿಗೆ ವಾಪಸ್​​ ಹೋಗಿದ್ದಾಳೆ. ಇದರಿಂದ ಫಸಿಯಾಳನ್ನು ನಂಬಿ ಹೋಗಿದ್ದ ನಾಗಾರ್ಜುನ ಈಗ ಕಂಗಾಲಾಗಿದ್ದಾನೆ.

ಮಾರ್ಚ್ 24ರಂದು ಪ್ರೇಮ ವಿವಾಹವಾಗಿ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದಿದ್ರು. ಆದ್ರೆ, ಇದೀಗ ಮದುವೆಯಾಗಿ 15 ದಿನ ಕಳೆಯೋದರೊಳಗೆ ಯುವತಿ ಫಸಿಹಾ ತಾಯಿ ಮನೆ ಸೇರಿಕೊಂಡಿದ್ದಾಳೆ. ತಾಯಿಗೆ ಅನಾರೋಗ್ಯ ಇದೆ. ನನ್ನ ನೋವಲ್ಲೇ ಕೊರಗಿ ನೋವಿನಲ್ಲಿದ್ದಾರೆ ಎನ್ನುವ ಕಾರಣ ನೀಡಿ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರಿಗೆ ಮುಚ್ಚಳಿಕೆ ಬರೆದುಕೊಟ್ಟು ತಾಯಿ ಮನೆ ವಾಪಸ್ ಹೋಗಿದ್ದಾಳೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಸಪ್ತಪದಿ ತುಳಿದ ಎದುರು ಬದುರು ಮನೆಯ ಹಿಂದೂ-ಮುಸ್ಲಿಂ ಜೋಡಿ!

ಚಿಕ್ಕಬಳ್ಳಾಪುರ ತಾಲೂಕಿನ ಮೈಲಪನಹಳ್ಳಿ ಗ್ರಾಮದ 23 ವರ್ಷದ ಫಸಿಹಾ ಹಾಗೂ ಇದೇ ಗ್ರಾಮದ 25 ವರ್ಷದ ನಾಗಾರ್ಜುನ ಇಬ್ಬರು ಪರಸ್ಪರ 2 ವರ್ಷಗಳಿಂದ ಪ್ರೀತಿ ಮಾಡಿ ಕಳೆದ ತಿಂಗಳು ಮಾರ್ಚ್ 23 ರಂದು ಪ್ರೇಮವಿವಾಹವಾಗಿದ್ದರು. ಪ್ರೇಮ ವಿವಾಹಕ್ಕೆ ಯುವಕನ ಮನೆಯಲ್ಲಿ ಒಪ್ಪಿಗೆ ಇದ್ರೂ ಯುವತಿ ಮನೆಯಲ್ಲಿ ಒಪ್ಪಿಗೆ ಇರಲಿಲ್ಲ. ಹೀಗಾಗಿ ಮನೆ ಬಿಟ್ಟುಬಂದು ಮದುವೆಯಾಗಿ ಬಳಿಕ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್​ ಠಾಣೆಗೆ ತೆರಳಿ ರಕ್ಷಣೆ ನೀಡುವಂತೆ ಮನವಿ ಮಾಡಿದ್ದರು.

ಇದನ್ನೂ ಓದಿ
ಚಿಕ್ಕಬಳ್ಳಾಪುರ: ಸಪ್ತಪದಿ ತುಳಿದ ಎದುರು ಬದುರು ಮನೆಯ ಹಿಂದೂ-ಮುಸ್ಲಿಂ ಜೋಡಿ
19ರ ಯುವತಿ ಹಿಂದೆ ಬಿದ್ದ 47ರ ವ್ಯಕ್ತಿ: ಕಿರುಕುಳಕ್ಕೆ ವಿದ್ಯಾರ್ಥಿನಿ ಬಲಿ!
ಇನ್ಸ್ಟಾಗ್ರಾಮ್ ಸುಂದ್ರಿ ಜತೆ ಹೋಗಿದ್ದವ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
50 ವರ್ಷದ ಅಂಕಲ್​ನ ಮದ್ವೆಯಾದ 18 ವರ್ಷದ ಯುವತಿ!

ಆಗ ಪೊಲೀಸರು ಎರಡೂ ಕಡೆಯ ಪೋಷಕರನ್ನ ಕರೆಸಿ ವಿಚಾರಣೆ ಮಾಡಿದ್ದರು. ಯುವತಿಯನ್ನ ಸಹ ಅವರ ಪೋಷಕರ ಜೊತೆ ಮಾತನಾಡಲು ಅವಕಾಶ ನೀಡಲಾಗಿತ್ತು. ಆ ವೇಳೆ ಪೋಷಕರು ಎಷ್ಟು ಬೇಡಿಕೊಂಡಿದ್ದರೂ ಸಹ ಯುವತಿ ಮಾತ್ರ ತಾನು ಮದುವೆಯಾದ ಯುವಕನ ಜೊತೆಯಲ್ಲೇ ಹೋಗುವುದಾಗಿ ಕಡ್ಡಿಮುರಿದಂತೆ ಹೇಳಿದ್ದಳು. ಆದ್ರೆ, ಇದೀಗ ಯುವತಿ, ಯುವಕನನ್ನು ನಡು ನೀರಿನಲ್ಲೇ ಕೈಕೊಟ್ಟು ಹೋಗಿದ್ದಾಳೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ