AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapura: ಸೂಟು ಬೂಟು ತೆಗೆದು, ಸಲಕೆ, ಪೊರಕೆ ಹಿಡಿದು ವಿದ್ಯಾರ್ಥಿನಿಯರಿಗೆ ಸ್ವಚ್ಚತೆ ಪಾಠ ಮಾಡಿದ ನ್ಯಾಯಾಧೀಶ ಬಿ.ವೀರಪ್ಪ

ನಗರದ ಸರ್ಕಾರಿ ಮಹಿಳಾ ಕಾಲೇಜಿನ ಪರಿಶೀಲನೆಗೆ ಬಂದ ನ್ಯಾಯಮೂರ್ತಿಗಳು, ಸ್ವತಃ ತಾವೆ ಶೂಟು ಬೂಟು ತೆಗೆದು ಸಲಿಕೆ ಪೊರಕೆ ಹಿಡಿದು ಸ್ವಚ್ಚತೆ ಮಾಡುವುದರ ಮೂಲಕ ವಿದ್ಯಾರ್ಥಿನಿಯರಿಗೆ ಸ್ವಚ್ಚತೆಯ ಪಾಠ ಮಾಡಿದ್ದಾರೆ.

Chikkaballapura: ಸೂಟು ಬೂಟು ತೆಗೆದು, ಸಲಕೆ, ಪೊರಕೆ ಹಿಡಿದು ವಿದ್ಯಾರ್ಥಿನಿಯರಿಗೆ ಸ್ವಚ್ಚತೆ ಪಾಠ ಮಾಡಿದ ನ್ಯಾಯಾಧೀಶ ಬಿ.ವೀರಪ್ಪ
ಸ್ವಚ್ಛತೆ ಪಾಠ ಮಾಡಿದ ನ್ಯಾಯಾಧೀಶ ಬಿ. ವೀರಪ್ಪ
TV9 Web
| Edited By: |

Updated on: Jan 08, 2023 | 4:16 PM

Share

ಚಿಕ್ಕಬಳ್ಳಾಪುರ: ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಅವ್ಯವಸ್ಥೆ ಕುರಿತು ಸ್ವತಃ ಕಾಲೇಜಿನ ವಿದ್ಯಾರ್ಥಿನಿಯರು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾಯಾಧೀಶ ಬಿ.ವೀರಪ್ಪ ರವರಿಗೆ ಪತ್ರ ಬರೆದಿದ್ದರು. ಈ ಹಿನ್ನಲೆ ಇಂದು(ಜ.7) ಕಾಲೇಜು ಪರಿಶೀಲನೆಗೆ ಬಂದ ನ್ಯಾಯಮೂರ್ತಿಗಳು, ಸ್ವತಃ ತಾವೆ ಶೂಟು ಬೂಟು ತೆಗೆದು ಸಲಿಕೆ, ಪೊರಕೆ ಹಿಡಿದು ಸ್ವಚ್ಚತೆ ಮಾಡುವುದರ ಮೂಲಕ ವಿದ್ಯಾರ್ಥಿನಿಯರಿಗೆ ಸ್ವಚ್ಚತೆಯ ಪಾಠ ಮಾಡಿದ್ದಾರೆ.

ಕಾಲೇಜಿನ ಮೂಲೆ ಮೂಲೆಯಲ್ಲೂ ಇಂಚಿಂಚು ಪರಿಶೀಲನೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪನವರು. 500 ಹೆಣ್ಣು ಮಕ್ಕಳಿಗೆ ಒಂದೇ ಟಾಯ್ಲೆಟ್, ಮೂಲಸೌಕರ್ಯವಿಲ್ಲದ ಕೊಠಡಿಗಳು, ಕುಡಿಯುವ ನೀರಿನ ಕೊರತೆ, ಗಿಡ ಗಂಟೆಗಳು ಬೆಳೆದಿರುವ ಕಾಲೇಜಿನ ಆವರಣ, ಮತ್ತೊಂದೆಡೆ ಅರ್ಧಕ್ಕೆ ನಿಂತು ಪಾಳು ಕೊಂಪೆಯಾದ ಕಾಲೇಜು ಕಟ್ಟಡವನ್ನ ಕಂಡು ನ್ಯಾಯಧೀಶರು ಪುಲ್ ಗರಂ ಆದರು.

ಇದನ್ನೂ ಓದಿ:PM-CM-President ಗಳಿಗೆ ಚಿಕ್ಕಬಳ್ಳಾಪುರ ಸರ್ಕಾರಿ ಕಾಲೇಜಿನ ನೂರಾರು ವಿದ್ಯಾರ್ಥಿನಿಯರು ಸಾಲು ಸಾಲು ಪತ್ರ ಬರೆದರು! ಉದ್ದೇಶವೇನು?

ಎರಡು ತಿಂಗಳುಗಳ ಒಳಗಾಗಿ ಅರ್ಧಕ್ಕೆ ನಿಂತಿರುವ ಕಾಲೇಜು ಕಟ್ಟಡ ಕಂಪ್ಲೀಟ್ ಮಾಡಿಕೊಡಲು ನ್ಯಾಯಾಧೀಶರು ಸೂಚನೆ ನೀಡಿದರು. ಒಂದು ವೇಳೆ ಪೂರ್ಣ ಆಗದೇ ಹೋದಲ್ಲಿ ಸ್ವಯಂ ಪಿ.ಐ.ಎಲ್ ದಾಖಲು ಮಾಡಿಕೊಂಡು ಅಧಿಕಾರಿಗಳು ಹಾಗೂ ಸರ್ಕಾರವನ್ನು ನ್ಯಾಯಾಲಯಕ್ಕೆ ಎಳೆಯುವುದಾಗಿ ಎಚ್ಚರಿಸಿದರು.

ವರದಿ: ಭೀಮಪ್ಪ ಪಾಟೀಲ ಟಿವಿ9 ಚಿಕ್ಕಬಳ್ಳಾಪುರ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್