AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adiyogi statue: ನಂದಿಬೆಟ್ಟದ ಬಳಿ ಆದಿಯೋಗಿ ಪ್ರತಿಮೆ ಸ್ಥಾಪನೆ, ಯಥಾಸ್ಥಿತಿ ಕಾಯ್ದುಕೊಳ್ಳುವ ಆದೇಶ ಮುಂದುವರಿಸಿದ ಹೈಕೋರ್ಟ್

ಹೈಕೋರ್ಟ್ ಆದೇಶದಂತೆ ಜನವರಿ 15 ಭಾನುವಾರದಂದು ಇಶಾ ಫೌಂಡೇಶನ್ ವತಿಯಿಂದ ಆದಿಯೋಗಿ ಪ್ರತಿಮೆ ಅನಾವರಣ ಆಗಿತ್ತು. ವಿಚಾರಣೆ ವೇಳೆ ಉಳಿದಂತೆ ಕಾಮಗಾರಿ ನಡೆಸದೇ ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶಿಸಿತ್ತು. ಇದೀಗ ಮತ್ತೆ ಆ ಆದೇಶ ಮುಂದುವರಿದಿದೆ.

Adiyogi statue: ನಂದಿಬೆಟ್ಟದ ಬಳಿ ಆದಿಯೋಗಿ ಪ್ರತಿಮೆ ಸ್ಥಾಪನೆ, ಯಥಾಸ್ಥಿತಿ ಕಾಯ್ದುಕೊಳ್ಳುವ ಆದೇಶ ಮುಂದುವರಿಸಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್ ಮತ್ತು ಆದಿಯೋಗಿ ಪ್ರತಿಮೆ
TV9 Web
| Edited By: |

Updated on:Feb 02, 2023 | 7:19 PM

Share

ಬೆಂಗಳೂರು/ ಚಿಕ್ಕಬಳ್ಳಾಪುರ: ನಂದಿ ಬೆಟ್ಟದ ಬಳಿ ಆದಿಯೋಗಿ ಪ್ರತಿಮೆ (Adiyogi statue) ಅನಾವರಣಕ್ಕೆ ಅನುಮತಿ ನೀಡಿದ್ದ ಹೈಕೋರ್ಟ್ (Karnataka High Court), ಉಳಿದಂತೆ ಕಾಮಗಾರಿ ನಡೆಸದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿತ್ತು. ಇದೀಗ ಹೈಕೋರ್ಟ್ ಮತ್ತೆ ಯಥಾಸ್ಥಿತಿ ಕಾಯ್ದುಕೊಳ್ಳುವ ಆದೇಶ ಮುಂದುವರಿಸಿದೆ. ಎಸ್.ಕ್ಯಾತಪ್ಪ ಮತ್ತಿತರರು ಸಲ್ಲಿಸಿದ್ದ ಪಿಐಎಲ್‌ ವಿಚಾರಣೆ ವೇಳೆ, ಯಥಾಸ್ಥಿತಿ ಆದೇಶದ ತೆರವಿಗೆ ಇಶಾ ಪ್ರತಿಷ್ಠಾನ (Isha Foundation) ಮನವಿ ಮಾಡಿದರೆ, ಇತ್ತ ಪ್ರತಿಮೆ ಸ್ಥಾಪನೆ ವಿಚಾರದಲ್ಲಿ ಕೋರ್ಟ್ ಮೆಟ್ಟಿಲೇರಿದ್ದ ಅರ್ಜಿದಾರರು, ಪ್ರತಿಮೆ ಅನಾವರಣಗೊಳಿಸಿದ ದಿನದಂದು ಬೆಂಕಿ ಹಾಕಲಾಗಿದೆ. ಪಟಾಕಿ ಸಿಡಿಸಿ ಪರಿಸರಕ್ಕೆ ಹಾನಿಯಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಾದ ಪ್ರತಿವಾದ ಆಲಿಸಿದ ಕೋರ್ಟ್, ಯಥಾಸ್ಥಿತಿ ಮುಂದುವರಿಸಿ ವಿಚಾರಣೆಯನ್ನು ಮತ್ತೆ ಮುಂದೂಡಿತು.

ಇಶಾ ಫೌಂಡೇಷನ್ ವತಿಯಿಂದ ನಿರ್ಮಾಣ ಮಾಡಲಾದ ಆದಿಯೋಗಿ ಪ್ರತಿಮೆ ಜನವರಿ 15ರಂದು ಕೋರ್ಟ್ ಆದೇಶದಂತೆ ಲೋಕಾರ್ಪಣೆಗೊಂಡಿತ್ತು. ಇದಕ್ಕೂ ಮುನ್ನ ಪ್ರತಿಮೆ ಸ್ಥಾಪನೆ ವಿರೋಧಿಸಿ ಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು. ಜನವರಿ 11ರಂದು ವಿಚಾರಣೆ ನಡೆಸಿದ್ದ ಕೋರ್ಟ್, ಆದಿಯೋಗಿ ಪ್ರತಿಮೆ ಸ್ಥಾಪನೆ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿತ್ತು. ಅಲ್ಲದೆ, ಸರ್ಕಾರ ಮತ್ತು ಇಶಾ ಯೋಗ ಕೇಂದ್ರ ಸೇರಿ 16 ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿತ್ತು. ಆದಿಯೋಗಿ ಪ್ರತಿಮೆ ಸ್ಥಾಪನೆ ಸ್ಥಳವು ಪರಿಸರ ಸೂಕ್ಷ್ಮ ವಲಯವಾಗಿದ್ದು, ಅದನ್ನು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುವುದು ಸರಿಯಲ್ಲ ಎಂದು ಅರ್ಜಿದಾರರ ಪರ ವಕೀಲ ಎಂ. ಶಿವಪ್ರಕಾಶ್ ಅವರು ವಾದ ಮಂಡಿಸಿದ್ದರು.

ಇದನ್ನೂ ಓದಿ: ಇಶಾ ಫೌಂಡೇಷನ್ ಆದಿಯೋಗಿ ಪ್ರತಿಮೆ ನೋಡಲು ಅವಲಗುರ್ಕಿ ಗ್ರಾಮ ಪಂಚಾಯತಿಗೆ ಸುಂಕ ಕಟ್ಟಬೇಕಂತೆ! ಶಿವನ ಭಕ್ತರು ಕೆಂಡಾಮಂಡಲ

ಆದಿಯೋಗಿ ಪ್ರತಿಮೆ ಸ್ಥಾಪನೆಗಾಗಿ ಸರ್ಕಾರ ಕಾನೂನುಬಾಹಿರವಾಗಿ ಜಮೀನು ಮಂಜೂರು ಮಾಡಿದೆ. ನಂದಿ ಬೆಟ್ಟಕ್ಕೆ ಐತಿಹಾಸಿಕ ಮಹತ್ವವಿದೆ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದರು. ವಾದ ಆಲಿಸಿದ ಕೋರ್ಟ್, ಪರಿಸರದ ಮೇಲೆ ಪರಿಣಾಮ ಬೀರಬಹುದೆಂಬುದನ್ನು ಒಪ್ಪಬಹುದು ಎಂದು ಸರ್ಕಾರದ‌ ಅಧಿಸೂಚನೆಯನ್ನು ಪ್ರಶ್ನಿಸಲು ಅವಕಾಶ ನೀಡಿ ಯಥಾಸ್ಥಿತಿಗೆ ಆದೇಶಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:19 pm, Thu, 2 February 23

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್