AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಹಳೆಯ ದ್ವೇಷಕ್ಕೆ ಇಡೀ ಕುಟುಂಬಕ್ಕೆ ವಿಷ ಹಾಕಿದ ಪಾಪಿರೆಡ್ಡಿ; ಮೂವರ ಸ್ಥೀತಿ ಗಂಭೀರ

ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ದೇವಿರೆಡ್ಡಿಪಲ್ಲಿಯಲ್ಲಿ ಹಳೆಯ ದ್ವೇಷದ ಕಾರಣ ಒಂದೇ ಕುಟುಂಬದ 8 ಮಂದಿಗೆ ವಿಷ ನೀಡಲಾಗಿದ್ದು, ಕುಟುಂಬಸ್ಥರು ಅಸ್ವಸ್ಥಗೊಂಡಿದ್ದಾರೆ. ಸಾಂಬಾರಿಗೆ ವಿಷ ಬೆರೆಸಿ ಈ ಕೃತ್ಯ ಎಸಗಲಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಪೊಲೀಸರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಮುಂದುವರೆದಿದೆ.

ಚಿಕ್ಕಬಳ್ಳಾಪುರ: ಹಳೆಯ ದ್ವೇಷಕ್ಕೆ ಇಡೀ ಕುಟುಂಬಕ್ಕೆ ವಿಷ ಹಾಕಿದ ಪಾಪಿರೆಡ್ಡಿ; ಮೂವರ ಸ್ಥೀತಿ ಗಂಭೀರ
ಚಿಕ್ಕಬಳ್ಳಾಪುರದಲ್ಲಿ ಹಳೆಯ ದ್ವೇಷಕ್ಕೆ ಇಡೀ ಕುಟುಂಬಕ್ಕೆ ವಿಷ , 8 ಮಂದಿ ಅಸ್ವಸ್ಥ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಭಾವನಾ ಹೆಗಡೆ|

Updated on: Nov 15, 2025 | 11:11 AM

Share

ಚಿಕ್ಕಬಳ್ಳಾಪುರ, ನವೆಂಬರ್ 15: ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಬಾಗೇಪಲ್ಲಿ(ಭಾಗ್ಯನಗರ) ತಾಲೂಕಿನ ದೇವಿರೆಡ್ಡಿಪಲ್ಲಿಯಲ್ಲಿ ಒಂದೇ ಕುಟುಂಬದ 8 ಜನ ವಿಷ ಸೇವಿಸಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬದ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆಯೆಂದು ಕೇಳಿಬಂದಿದ್ದು, ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಂಬಾರಿಗೆ ವಿಷ ಬೆರೆಸಿದ್ದ ಪಾಪಿ

ದೇವಿರೆಡ್ಡಿಪಲ್ಲಿಯ ಮದ್ದರೆಡ್ಡಿ ಮತ್ತು ಪಾಪಿರೆಡ್ಡಿ ಎಂಬುವವರು ಅಕ್ಕಪಕ್ಕದ ಮನೆಯವರಾಗಿದ್ದು, ಎರಡು ವರ್ಷಗಳ ಹಿಂದೆ ಇಬ್ಬರ ಮನೆಗಳ ನಡುವಿನ ಮೂರಡಿ ಖಾಲಿ ಜಾಗದ ಸಲುವಾಗಿ ಜಗಳವಾಗಿತ್ತು. ಇದೇ ದ್ವೇಷದ ಹಿನ್ನೆಲೆಯಲ್ಲಿ ಚೌಡರೆಡ್ಡಿ ಎಂಬಾತನಿಗೆ ಸುಪಾರಿ ಕೊಟ್ಟ ಪಾಪಿರೆಡ್ಡಿ ಕುಟುಂಬದವರ ಆಹಾರದಲ್ಲಿ ವಿಷ ಬೆರೆಸುವಂತೆ ಹೇಳಿದ್ದ. ಅಂತೆಯೇ ಮದ್ದರೆಡ್ಡಿಯ ಅಡುಗೆ ಮನೆಗೆ ನೀರು ಕುಡಿಯುವ ನೆಪದಲ್ಲಿ ತೆರಳಿದ್ದ ಚೌಡರೆಡ್ಡಿ, ಸಾಂಬಾರಿಗೆ ವಿಷದ ಪೌಡರ್ ಬರೆಸಿದ್ದ.

ವಿಷ ಸೇವಿಸಿದ ಮೂವರ ಸ್ಥಿತಿ ಚಿಂತಾಜನಕ

ಇದನ್ನರಿಯದ ಕುಟುಂಬಸ್ಥರು ಎಂದಿನಂತೆ ಊಟ ಮಾಡಿದ್ದು, ಮನೆ ಯಜಮಾನಿ ಮದ್ದಕ್ಕ ಹಾಗೂ ಇವರ ಇಬ್ಬರು ಮಕ್ಕಳಾದ ಮದ್ದರೆಡ್ಡಿ ಹಾಗೂ ಮಂಜುನಾಥ್ ಸೇರಿದಂತೆ ಮದ್ದರೆಡ್ಡಿ ಪತ್ನಿ ಭಾಗ್ಯಮ್ಮ, ಮಗಳು ಮಣಿ, ಮಂಜುನಾಥ್ ಪತ್ನಿ ಈಶ್ವರಮ್ಮ, ಮಂಜುನಾಥ್ ನ ಮಗ ಸುಬ್ರಮಣಿ, ಹಾಗೂ ಸಂಬಂಧಿ ಬಾಲಕಿ ಭಾನುಶ್ರೀ ಈ ಎಂಟೂ ಜನ ಅಸ್ವಸ್ಥರಾಗಿದ್ದಾರೆ.

ಈ 8 ಜನರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಸದ್ಯಕ್ಕೆ ಮಂಜುನಾಥ್ ಹಾಗೂ ಮದ್ದರೆಡ್ಡಿ ಸೇರಿದಂತೆ ಸುಬ್ರಮಣಿ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿರಿಸಲಾಗಿದೆ. ಉಳಿದ 5 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದರೂ ದೇಹದೊಳಗೆ ವಿಷ ಸೇರಿರುವುದರಿಂದ ಯಾವಾಗ ಏನಾಗುತ್ತದೆಂದು ಹೇಳಲಾಗುವುದಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಈ ಹಿನ್ನೆಲೆ ಎಸ್ಪಿ ಕುಶಲ್ ಚೌಕ್ಸೆ ಸೇರಿದಂತೆ ಬಾಗೇಪಲ್ಲಿ ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಪ್ರಮುಖ ಆರೋಪಿಗಳಾದ ಪಾಪಿರೆಡ್ಡಿ ಹಾಗೂ ಚೌಡರೆಡ್ಡಿಯನ್ನು ಬಂಧಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ