AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಮನೆ ದರೋಡೆಗೆ ಪೊಲೀಸ್​ನಿಂದಲೇ ಟ್ರೈನಿಂಗ್! ಆರೋಪಿ ಅಂದರ್

ಚಿಕ್ಕಬಳ್ಳಾಪುರದಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಬೆಚ್ಚಿಬೀಳಿಸುವ ಸಂಗತಿ ಬಯಲಾಗಿದೆ. ಹೆಣ್ಣೂರು ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಇಲಿಯಾಜ್ ರೌಡಿಶೀಟರ್‌ಗಳಿಗೆ ಮನೆ ದರೋಡೆಗೆ ತರಬೇತಿ ನೀಡಿ, ಅವರನ್ನು ಅಪರಾಧಕ್ಕೆ ಉತ್ತೇಜಿಸಿದ್ದಾನೆ. ಗೌರಿಬಿದನೂರಿನಲ್ಲಿ ನಡೆದ ದರೋಡೆಯಲ್ಲಿ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಗೌರಿಬಿದನೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರ: ಮನೆ ದರೋಡೆಗೆ ಪೊಲೀಸ್​ನಿಂದಲೇ ಟ್ರೈನಿಂಗ್! ಆರೋಪಿ ಅಂದರ್
ಪೊಲೀಸ್ ಹೆಡ್ ಕಾನ್ಸ್ಟೇಬಲ್ ಇಲಿಯಾಜ್
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Mar 05, 2025 | 3:02 PM

Share

ಚಿಕ್ಕಬಳ್ಳಾಪುರ, ಮಾರ್ಚ್​ 05: ಈ ಪ್ರಕರಣದಲ್ಲಿ ಬೇಲಿಯೇ ಎದ್ದು ಹೊಲ ಮೇದಂತಾಗಿದೆ. ದರೋಡೆಕೋರರನ್ನು ಹೆಡೆಮುರಿ ಕಟ್ಟಬೇಕಾಗಿದ್ದ ಪೊಲೀಸ್​​ ದರೋಡೆಗೆ ತರಬೇತಿ ನೀಡುತ್ತಿದ್ದನು ಎಂಬ ಪ್ರಕರಣ ಬೆಳಕಿಗೆ ಬಂದಿದೆ. ಹೆಣ್ಣೂರು (Hennur) ಟ್ರಾಫಿಕ್ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಇಲಿಯಾಜ್ (Police Head Constable) ರೌಡಿಶೀಟರ್ ಹಾಗೂ ಇತರರಿಗೆ ಮನೆ ದರೋಡೆಗೆ ತರಬೇತಿ ನೀಡುತ್ತಿದ್ದನು. ತರಬೇತಿ ನೀಡಿದ ಬಳಿಕ ಅವರನ್ನು ಮನೆ ದರೋಡಗೆ ಕಳುಹಿಸುತ್ತಿದ್ದನು.

ಗೌರಿಬಿದನೂರು ನಗರದ ಕರೇಕಲ್ಲಹಳ್ಳಿಯ ಶ್ರೀನಿವಾಸ್ ಎಂಬುವರ ಮನೆಯಲ್ಲಿ 2 ಕೋಟಿ ಹಣ ಕೆಜಿಗಟ್ಟಲೇ ಚಿನ್ನ ಇರುವ ಮಾಹಿತಿಯನ್ನು ದರೋಡೆಕೋರರು ಕಲೆಹಾಕಿದ್ದರು. ಫೆಬ್ರವರಿ 17 ರಂದು ದರೋಡಗೆ ಪ್ಲಾನ್ ಮಾಡಿದ್ದಾರೆ. ಬಳಿಕ, ಫೆಬ್ರವರಿ 20 ರಂದು ಮನೆಗೆ ನುಗ್ಗಿ ಮನೆಯವರನ್ನ ಬೆದರಿಸಿ ದರೋಡಗೆ ಪ್ರಯತ್ನಿಸಿದ್ದಾರೆ.

ಆದರೆ, ಶ್ರೀನಿವಾಸ್​ ಅವರ ಮನೆಯಲ್ಲಿ ಸಿಕ್ಕಿದ್ದು ಕೇವಲ ಒಂದು ಉಂಗುರ, 14 ಹರಳುಗಳು, ಎರಡು ಹರಳದ ಕಲ್ಲುಗಳು. ದರೋಡೆ ಪ್ರಕರಣ ದಾಖಲಿಸಿಕೊಂಡ ಗೌರಿಬಿದನೂರು ಪೊಲೀಸರು ತನಿಖೆ ನಡೆಸಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ತನಿಖೆ ವೇಳೆ ದರೋಡೆಕೋರರಿಗೆ ತರಬೇತಿ ನೀಡುತ್ತಿದ್ದು, ಪೊಲೀಸ್ ಹೆಡ್ ಕಾನ್ಸ್ಟೇಬಲ್ ಇಲಿಯಾಜ್ ಎಂದು ತಿಳಿದು ಬಂದಿದೆ.

ಇದನ್ನೂ ಓದಿ
Image
ಅನೈತಿಕ ಸಂಬಂಧ ಆರೋಪ: ಎರಡನೇ ಹೆಂಡತಿಯನ್ನ ಕೂಡಿಹಾಕಿ ಹಲ್ಲೆ
Image
ಚಿಕ್ಕಬಳ್ಳಾಪುರ: ಗಾಂಜಾ ಸಾಗಿಸುತ್ತಿದ್ದ ತಂದೆ, ಮಗಳು, ಮೊಮ್ಮಗ ಸೇರಿ 5 ಬಂಧನ
Image
ಚಿಕ್ಕಬಳ್ಳಾಪುರ: ಮೋಸ್ಟ್​ ವಾಟೆಂಡ್​​​ ಕಿಡ್ನ್ಯಾಪರ್​ ಬಾಂಬೆ ಸಲೀಂ ಬಂಧನ
Image
ಅಪ್ರಾಪ್ತೆ ಜತೆ ಲವ್, ಪ್ರೇಯಸಿಯ ಸಾಕಲು ಕಳ್ಳತನ ಮಾಡ್ತಿದ್ದ ಯುವಕ ಲಾಕ್

ಹೆಣ್ಣೂರು ಸಂಚಾರಿ ಠಾಣೆಯ ಹೆಡ್ ಕಾನ್‍ಸ್ಟೇಬಲ್ ಇಲಿಯಾಜ್, ಡಿಜೆಹಳ್ಳಿ ಪೊಲೀಸ್ ಠಾಣೆಯ ನಟೋರಿಯಸ್ ರೌಡಿಶೀಟರ್ ತನ್ವಿರ್ ಆಲಿಯಾಸ್ ಮೆಂಟಲ್ ತನು, ಸಾಬೀರ್, ಫೈರೋಜ್,ಬಷೀರ್ ಅಹಮದ್, ಇರ್ಫಾನ್ ಪಾಷಾ, ಬಾಬಾಜಾನ್, ಅಮೀನ್ ಬಂಧಿತರು.

ಇದನ್ನೂ ಓದಿ: ಸಾಲ ತೀರಿಸೋಕೆ ಬುರ್ಖಾ ತೊಟ್ಟು ವೃದ್ದೆಯ ಚಿನ್ನಾಭರಣ ಕದ್ದ ಖತರ್ನಾಕ್​ ಮಹಿಳೆಯರು

ಮನೆ ಬಾಗಿಲು ಮುರಿದು ಚಿನ್ನ ಕದ್ದ ಖದೀಮರು

ಬೆಳಗಾವಿ: ರಾಮದುರ್ಗ ಪಟ್ಟಣದ ಚಿನ್ನದ ವ್ಯಾಪಾರಿ ವಿರೇಶ್​ ಫತ್ತೇಪುರ ಎಂಬುವರ ಮನೆಯಲ್ಲಿನ ಸುಮಾರು 1 ಕೋಟಿ ರೂ. ಮೌಲ್ಯದ 1.200 ಕೆಜಿ ಚಿನ್ನಾಭರಣ ಕಳ್ಳತನವಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಖದೀಮರು ಬಾಗಿಲು ಮುರಿದು ಮನೆಯೊಳಗೆ ನುಗ್ಗಿ ಚಿನ್ನಾಭರಣ ಕದ್ದಿದ್ದಾರೆ. ಸ್ಥಳಕ್ಕೆ ಬೆರಳಚ್ಚು ಮತ್ತು ಶ್ವಾನದಳದ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸಿದ್ದಾರೆ. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:49 pm, Wed, 5 March 25

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?