AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್; ರೈತರ ಕೈ ಸೇರಲಿದೆ ಲಾಭದ ಹಣ!

ನಂದಿನಿ ಉತ್ಪನ್ನಗಳ ಬೇಡಿಕೆ ಹೆಚ್ಚಳದಿಂದ ಚಿಮುಲ್ 2 ಕೋಟಿ ರೂ. ಲಾಭ ಗಳಿಸಿದೆ. ಈ ಲಾಭವನ್ನು ಚಿಕ್ಕಬಳ್ಳಾಪುರ ರೈತರಿಗೆ ಹಂಚಲು ಮುಂದಾಗಿ, ಮೇ ತಿಂಗಳವರೆಗೆ ಪ್ರತಿ ಲೀಟರ್ ಹಾಲಿಗೆ 1.50 ರೂ. ಹೆಚ್ಚುವರಿ ದರ ನೀಡಲಿದೆ. ಈ ನಿರ್ಧಾರವು ರೈತರಿಗೆ ಉತ್ತಮ ಪ್ರೋತ್ಸಾಹ ನೀಡಲಿದ್ದು, ಚಿಮುಲ್ ರಾಜ್ಯದಲ್ಲೇ ಅತಿ ಹೆಚ್ಚು ಹಾಲಿನ ದರ ನೀಡುವ ಒಕ್ಕೂಟಗಳಲ್ಲಿ ಒಂದಾಗಲಿದೆ.

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್; ರೈತರ ಕೈ ಸೇರಲಿದೆ ಲಾಭದ ಹಣ!
ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Mar 07, 2026 | 3:17 PM

Share

ಚಿಕ್ಕಬಳ್ಳಾಪುರ, ಮಾರ್ಚ್​ 07: ನಂದಿನಿ ಉತ್ಪನ್ನಗಳಿಗೆ (Nandini Products) ಹೆಚ್ಚುತ್ತಿರುವ ಬೇಡಿಕೆಯ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ (ಚಿಮುಲ್) ಉತ್ತಮ ಲಾಭ ಗಳಿಸಿದ್ದು, ಅದರ ಲಾಭವನ್ನು ರೈತರಿಗೆ ಹಂಚಲು ಮುಂದಾಗಿದೆ. ಮುಂದಿನ ಮೇ ತಿಂಗಳವರೆಗೆ ಚಿಮುಲ್ ಪ್ರತಿ ಲೀಟರ್​ಗೆ ಹೆಚ್ಚಿನ ದರ ನೀಡುವ ಮೂಲಕ ರೈತರಿಗೆ ಶುಭ ಸುದ್ದಿ ನೀಡಿದೆ.

ಒಂದು ಲೀಟರ್​ಗೆ ಒಂದೂವರೆ ರೂ. ಹೆಚ್ಚಳ!

ಚಿಮುಲ್ ಪ್ರಸ್ತುತ ಸುಮಾರು 2 ಕೋಟಿ ರೂಪಾಯಿ ಲಾಭದಲ್ಲಿದ್ದು, ರೈತರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರತಿ ಲೀಟರ್ ಹಾಲಿನ ಮೇಲೆ 1.50 ರೂಪಾಯಿ ಹೆಚ್ಚುವರಿ ದರ ನೀಡಲು ನಿರ್ಧರಿಸಲಾಗಿದೆ. ಚಿಮುಲ್ ಅಧ್ಯಕ್ಷ ಮಂಜುನಾಥ್ ರೆಡ್ಡಿ ಟಿವಿ9 ಜೊತೆ ಮಾತನಾಡಿ, ಈ ಹೆಚ್ಚುವರಿ ದರವನ್ನು ಮುಂದಿನ ಮೇ ತಿಂಗಳವರೆಗೆ ರೈತರಿಗೆ ನೀಡಲಾಗುತ್ತದೆ. ಈಗಾಗಲೇ ಒಕ್ಕೂಟದಿಂದ ಪ್ರತಿ ಲೀಟರ್ ಹಾಲಿಗೆ 36 ರೂಪಾಯಿ 90 ಪೈಸೆ ನೀಡಲಾಗುತ್ತಿದ್ದು, ರಾಜ್ಯ ಸರ್ಕಾರದ 5 ರೂಪಾಯಿ ಸಬ್ಸಿಡಿ ಸೇರಿ ಒಟ್ಟು 41 ರೂಪಾಯಿ 90 ಪೈಸೆ ರೈತರಿಗೆ ಸಂದಾಯವಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್‌ ಬರುತ್ತಾ? ಅಂತೆ-ಕಂತೆಗಳಿಗೆ ಕೆಎಂಎಫ್‌ ಎಂಡಿ ಸ್ಪಷ್ಟನೆ

ರಾಜ್ಯದಲ್ಲೇ ಅತಿ ಹೆಚ್ಚು ಹಾಲಿನ ದರ ನೀಡುತ್ತಿರುವ ಒಕ್ಕೂಟಗಳಲ್ಲಿ ಚಿಮುಲ್ ಕೂಡ ಒಂದಾಗಿದೆ. ಈಗ ಹೆಚ್ಚುವರಿ 1.50 ರೂಪಾಯಿ ನೀಡುವ ನಿರ್ಧಾರದಿಂದ ಜಿಲ್ಲೆಯ ಹಾಲು ಉತ್ಪಾದಕ ರೈತರಿಗೆ ಮತ್ತಷ್ಟು ಪ್ರೋತ್ಸಾಹ ಸಿಗಲಿದೆ ಎಂದು ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು