AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನ ಮಿಡಿಯುವ ಸಂಗತಿ; ನತದೃಷ್ಟ ಜೀಪ್ ಚಾಲಕ, ತಂದೆ ರಮೇಶ್ ಶವ ಆಸ್ಪತ್ರೆಯಲ್ಲಿದ್ರೂ ಬಿ.ಎಸ್ಸಿ ಪರೀಕ್ಷೆಗೆ ಹಾಜರಾದ ಮಗ

ತಂದೆಯ ಶವ ಆಸ್ಪತ್ರೆಯಲ್ಲಿದ್ರೂ ಇಂದು ನಡೆದ ಬಿ.ಎಸ್ಸಿ ಅಂತಿಮ ವರ್ಷದ ಪರೀಕ್ಷೆಗೆ ಮೃತ ರಮೇಶ್ ಮಗ ಆರ್. ವಿಜಯ್ ಕುಮಾರ್ ಬೆಂಗಳೂರಿಗೆ ಆಗಮಿಸಿ ಪರೀಕ್ಷೆಗೆ ಹಾಜರಾಗಿದ್ದಾನೆ. ನಿನ್ನೆ ರಾತ್ರಿ ತಂದೆ ಅಪಘಾತದಲ್ಲಿ ಮೃತಪಟ್ಟಿದ್ದರೂ ಇಂದು ಗಟ್ಟಿ ಮನಸ್ಸು ಮಾಡಿ ತಂದೆ ಸಾವು ತನ್ನ ವಿದ್ಯಾಭ್ಯಾಸಕ್ಕೆ ಸಮಸ್ಯೆಯಾಗಬಾರದು ತಂದೆಯ ಆಸೆ ಸಂಪೂರ್ಣವಾಗಬೇಕೆಂದು ವಿಜಯ್ ಪರೀಕ್ಷೆಗೆ ಹಾಜರಾಗಿದ್ದಾನೆ.

ಮನ ಮಿಡಿಯುವ ಸಂಗತಿ; ನತದೃಷ್ಟ ಜೀಪ್ ಚಾಲಕ, ತಂದೆ ರಮೇಶ್ ಶವ ಆಸ್ಪತ್ರೆಯಲ್ಲಿದ್ರೂ ಬಿ.ಎಸ್ಸಿ ಪರೀಕ್ಷೆಗೆ ಹಾಜರಾದ ಮಗ
ಒಳ ಚಿತ್ರದಲ್ಲಿ ಜೀಪ್ ಚಾಲಕ ರಮೇಶ್
TV9 Web
| Updated By: ಆಯೇಷಾ ಬಾನು|

Updated on:Sep 13, 2021 | 3:07 PM

Share

ಚಿಕ್ಕಬಳ್ಳಾಪುರ: ಜೀವನೋಪಾಯಕ್ಕಾಗಿ ತನ್ನ ತಂದೆ ಓಡಿಸುತ್ತಿದ್ದ ಜೀಪ್​ ಅಪಘಾತಕ್ಕೆ ತುತ್ತಾಗಿ ಛಿದ್ರಛಿದ್ರವಾಗಿತ್ತು. ಆದರೂ ಆ ಜೀಪ್​ ಚಾಲಕನ ಪುತ್ರ ತನ್ನ ಜೀವನವನ್ನು ಕಟ್ಟಿಕೊಳ್ಳಲು ಧೈರ್ಯ ತೋರಿ ಜೀವನದ ಪರೀಕ್ಷೆಗೆ ಎದೆಯೊಡ್ಡಿ, ಅಂತಿಮ ವರ್ಷದ ಬಿ.ಎಸ್ಸಿ ಪರೀಕ್ಷೆ ಬರೆದು ಅಖಂಡ ಮನೋಬಲ ತೋರಿದ್ದಾರೆ.

ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಚಿಂತಾಮಣಿ ತಾಲೂಕಿನ ಮರಿನಾಯಕನಹಳ್ಳಿ ಗೇಟ್ ಬಳಿ ಲಾರಿಯನ್ನು ಓವರ್ಟೇಕ್ ಮಾಡಲು ಹೋಗಿ, ಏಕಾಏಕಿ ಜೀಪ್ಗೆ ಡಿಕ್ಕಿ ಹೊಡೆದು 8 ಜನ ಮೃತಪಟ್ಟಿದ್ದರು. ಈ ಘಟನೆಗೆ ಸಂಬಂಧಿಸಿ ಮತ್ತೊಂದು ಮನ ಮಿಡಿಯುವ ಘಟನೆ ನಡೆದಿದೆ. ಜೀಪ್ ಚಾಲಕ, ಮಾಲೀಕನಾಗಿದ್ದ ಮೃತ ರಮೇಶ್ ಮಗ ತಂದೆಯನ್ನು ಕಳೆದುಕೊಂಡ ದುಃಖದ ನಡುವೆಯೂ ಪರೀಕ್ಷೆ ಬರೆದಿದ್ದಾನೆ.

ತಂದೆಯ ಶವ ಆಸ್ಪತ್ರೆಯಲ್ಲಿದ್ರೂ ಇಂದು ನಡೆದ ಬಿ.ಎಸ್ಸಿ ಅಂತಿಮ ವರ್ಷದ ಪರೀಕ್ಷೆಗೆ ಮೃತ ರಮೇಶ್ ಮಗ ಆರ್. ವಿಜಯ್ ಕುಮಾರ್ ಬೆಂಗಳೂರಿಗೆ ಆಗಮಿಸಿ ಪರೀಕ್ಷೆಗೆ ಹಾಜರಾಗಿದ್ದಾನೆ. ನಿನ್ನೆ ರಾತ್ರಿ ತಂದೆ ಅಪಘಾತದಲ್ಲಿ ಮೃತಪಟ್ಟಿದ್ದರೂ ಇಂದು ಗಟ್ಟಿ ಮನಸ್ಸು ಮಾಡಿ ತಂದೆ ಸಾವು ತನ್ನ ವಿದ್ಯಾಭ್ಯಾಸಕ್ಕೆ ಸಮಸ್ಯೆಯಾಗಬಾರದು ತಂದೆಯ ಆಸೆ ಸಂಪೂರ್ಣವಾಗಬೇಕೆಂದು ವಿಜಯ್ ಪರೀಕ್ಷೆಗೆ ಹಾಜರಾಗಿದ್ದಾನೆ.

ಮಗನನ್ನು ಹೆಚ್ಚಿನ ವಿಧ್ಯಾಭ್ಯಾಸಕ್ಕೆ ವಿದೇಶಕ್ಕೆ ಕಳುಹಿಸುವ ಆಸೆಯನ್ನು ಮೃತ ರಮೇಶ ಹೊಂದಿದ್ದರು. ಚನ್ನಾಗಿ ಓದು ಮಗನೆ. ನಿನನ್ನು ಫಾರಿನ್ಗೆ ಕಳಿಸುವೆ ಎಂದು ಮೃತ ರಮೇಶ್ ಹೇಳುತ್ತಿದ್ದರಂತೆ. ಹೀಗಾಗಿ ಬಿ.ಎಸ್ಸಿ ಅಂತಿಮ ವರ್ಷದ ಮೈಕ್ರೋಬಯಾಲಜಿ ಓದುತ್ತಿರುವ ವಿಜಯ್ ತಂದೆಯ ಆಸೆಯಂತೆ ವಿಧ್ಯಾಭ್ಯಾಸಕ್ಕೆ ತೊಂದರೆಯಾಗಬಾರದೆಂದು ದುಃಖದಲ್ಲೇ ಪರೀಕ್ಷೆ ಬರೆದಿದ್ದಾನೆ.

ಮೃತ ರಮೇಶ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ನಿವಾಸಿ. ಬೆಂಗಳೂರು ರಸ್ತೆಯಿಂದ ಮದನಪಲ್ಲಿ ಕಡೆಗೆ ವೇಗವಾಗಿ ಮುನ್ನುಗ್ಗುತ್ತಿದ್ದ ಲಾರಿಯೊಂದು, ಓವರ್ಟೇಕ್ ಮಾಡಲು ಹೋಗಿ, ಏಕಾಏಕಿ ಜೀಪ್ಗೆ ಡಿಕ್ಕಿ ಹೊಡೆದಿದೆ. ಇದ್ರಿಂದ ಸ್ಥಳದಲ್ಲೇ 6 ಜನ ಮೃತಪಟ್ಟಿದ್ರೆ, ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮತ್ತಿಬ್ಬರು ಕೊನೆಯುಸಿರೆಳದಿದ್ರು ಇಷ್ಟೇ ಅಲ್ಲ, 9 ಜನರಿಗೆ ಗಂಭೀರವಾಗಿ ಗಾಯವಾಗಿದೆ.

ಚಿಂತಾಮಣಿಯ ನಾರಾಯಣಸ್ವಾಮಿ, ಮುನಿರತ್ನಮ್ಮ, ಜೀಪ್ ಚಾಲಕ ರಮೇಶ್, ಆಂಧ್ರ ಮೂಲದ ವೆಂಕಟಲಕ್ಷ್ಮಮ್ಮ, ಕಿತ್ತಗನೂರು ಗ್ರಾಮದ ಮುನಿಕೃಷ್ಣಪ್ಪ, ಶ್ರೀನಿವಾಸಪುರ ಮೂಲದ ನಿಖಿಲ್ ಮೃತರಾಗಿದ್ದಾರೆ.

ಇದನ್ನೂ ಓದಿ: 8 ಮಂದಿಯ ಆಹುತಿ ತೆಗೆದುಕೊಂಡ ಅಪಘಾತಕ್ಕೆ ಚಿಂತಾಮಣಿ ಆರ್​ಟಿಒ -ಜೀಪ್ ಮಾಲಿಕ ಕಾರಣ: ಸಂಸದ ಮುನಿಸ್ವಾಮಿ ಕಿಡಿಕಿಡಿ

Published On - 2:10 pm, Mon, 13 September 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ