AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೋ ಜೀರ್ಣೋದ್ದಾರ ಮಾಡಿದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಚಿಂತಾಮಣಿ ಅರಣ್ಯ ಇಲಾಖೆ ಬೀಗ ಹಾಕಿತು! ಕಾರಣ ಇಲ್ಲಿದೆ

ಈ ಜಾಗದ ಬಗ್ಗೆ ತಕರಾರು ಎತ್ತಿರುವ ಚಿಂತಾಮಣಿ ಅರಣ್ಯ ಇಲಾಖೆ, ಇದು ತನಗೆ ಸೇರಿದ ಜಾಗ, ಇಲ್ಲಿಂದ ಮೊದಲು ಜಾಗ ಖಾಲಿ ಮಾಡುವಂತೆ ವಾರ್ನಿಂಗ್ ಕೊಟ್ಟಿದ್ದಾರೆ ಎಂದು ದೇವಸ್ಥಾನದ ಅರ್ಚಕರಾದ ನಾರಾಯಣಸ್ವಾಮಿ ಅಲವತ್ತುಕೊಂಡಿದ್ದಾರೆ.

ಯಾರೋ ಜೀರ್ಣೋದ್ದಾರ ಮಾಡಿದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಚಿಂತಾಮಣಿ ಅರಣ್ಯ ಇಲಾಖೆ ಬೀಗ ಹಾಕಿತು! ಕಾರಣ ಇಲ್ಲಿದೆ
ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಚಿಂತಾಮಣಿ ಅರಣ್ಯ ಇಲಾಖೆ ಬೀಗ
TV9 Web
| Edited By: |

Updated on: Dec 26, 2022 | 3:41 PM

Share

ಅದು ಮುಗಿಲೆತ್ತರಕ್ಕೆ ಬೆಳೆದು ನಿಂತ ಸುಂದರವಾದ ಬೆಟ್ಟ, ಆ ಬೆಟ್ಟದಲ್ಲಿ ಹಾಳುಬಿದ್ದಿದ್ದ ಒಂದು ಆಂಜನೇಯಸ್ವಾಮಿ (Anjaneya Swamy) ದೇವಸ್ಥಾನ ಇತ್ತು. ಆ ದೇವಸ್ಥಾನ ನೋಡಿದ ಆಂಜನೇಯಸ್ವಾಮಿ ಭಕ್ತರೊಬ್ಬರು… ಲಕ್ಷಾಂತರ ರೂಪಾಯಿ ಖರ್ಚು ಮಾಡಿ… ದೇವಸ್ಥಾನವನ್ನು ಜೀರ್ಣೋದ್ದಾರ (Renovation) ಮಾಡಿ, ಬಂದ ಭಕ್ತರಿಗೆ ಆಂಜನೇಯಸ್ವಾಮಿಯ ದರ್ಶನ ಮಾಡಿಸ್ತಿದ್ದರು. ಆದ್ರೆ ಅದೇ ದೇವಸ್ಥಾನದ (Temple) ಮೇಲೆ ಕಣ್ಣು ಹಾಕಿದ ಅರಣ್ಯ ಇಲಾಖೆ ಅಧಿಕಾರಿಗಳು, ಈಗ ದೇವಸ್ಥಾನ ಅರಣ್ಯ ಇಲಾಖೆ (Chintamani Forest Department) ವ್ಯಾಪ್ತಿಗೆ ಸೇರುತ್ತೆ… ಜಾಗ ಬಿಡಿ ಅಂತ ಫರ್ನಾನು ಹೊರಡಿಸಿದ್ದಾರೆ. ಈ ಕುರಿತು ಒಂದು ವರದಿ.

ಇದು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಅಂಬಾಜಿದುರ್ಗ ಬೆಟ್ಟ. ಬೆಟ್ಟದ ಮೇಲೆ ಪ್ರಕೃತಿಯ ಮಡಿಲಲ್ಲಿ ನೆಲೆ ನಿಂತಿರೋ ಅಂಜಿನೇಯಸ್ವಾಮಿ, ಇಲ್ಲಿಯ ಆಂಜನೇಯಸ್ವಾಮಿಗೆ ಒಂದು ಸುಂದರ ದೇವಸ್ಥಾನ ಇಲ್ಲದೆ… ಇರೊ ದೇವಸ್ಥಾನ ಪಾಳು ಬಿದ್ದಿತ್ತು. ಇದನ್ನು ಗಮನಿಸಿದ ಸ್ಥಳೀಯ ನಾರಾಯಣಸ್ವಾಮಿ ಎಂಬುವವರು ಆಂಜನೇಯಸ್ವಾಮಿ ವಿಗ್ರಹಕ್ಕೆ ಒಂದು ದೇವಸ್ಥಾನ ನಿರ್ಮಾಣ ಮಾಡಲು ಮುಂದಾಗಿದ್ದಾರೆ.

Also Read:

New Year Guidelines: ಹೊಸ ವರ್ಷಾಚರಣೆಗೆ ಕೊರೊನಾ ರೂಲ್ಸ್​​; ಸೆಲೆಬ್ರೆಶನ್​ಗೆ ರಾತ್ರಿ 1 ಗಂಟೆಯವರೆಗೆ ಮಾತ್ರ ಅವಕಾಶ, ಮಾಸ್ಕ್​, ಲಸಿಕೆ ಕಡ್ಡಾಯ

ಕೊನೆಗೆ ಲಕ್ಷಾಂತರ ಬಂಡವಾಳ ಹಾಕಿ ದಾನಿಗಳ ಧನ ಸಹಾಯದಿಂದ ರಸ್ತೆ ನಿರ್ಮಾಣ ಮಾಡಿ, ಪಾಳು ಬಿದ್ದಿದ್ದ ದೇವಸ್ಥಾನಕ್ಕೆ ಮರುಜೀವ ಕೊಟ್ಟಿದ್ದಾರೆ. ಇದ್ರಿಂದ ರಾಜ್ಯದ ವಿವಿಧ ಮೂಲೆಗಳಿಂದ ಭಕ್ತಾಧಿಗಳು ಬರುತ್ತಿದ್ರು.

Chintamani Forest Department closed Anjaneya Temple renovated in forest area

ಆದರೆ ಈ ಜಾಗದ ಬಗ್ಗೆ ತಕರಾರು ಎತ್ತಿರುವ ಚಿಂತಾಮಣಿ ಅರಣ್ಯ ಇಲಾಖೆ, ಇದು ಅರಣ್ಯ ಇಲಾಖೆಗೆ ಸೇರಿದ ಜಾಗ ಇಲ್ಲಿಂದ ಮೊದಲು ಜಾಗ ಖಾಲಿ ಮಾಡುವಂತೆ ವಾರ್ನಿಂಗ್ ಕೊಟ್ಟಿದ್ದಾರೆ ಎಂದು ದೇವಸ್ಥಾನದ ಅರ್ಚಕರಾದ ನಾರಾಯಣಸ್ವಾಮಿ ಅಲವತ್ತುಕೊಂಡಿದ್ದಾರೆ.

ಒಂದೆಡೆ ಆಂಜನೇಯಸ್ವಾಮಿ ದೇವಸ್ಥಾನ, ಮತ್ತೊಂದೆಡೆ ಅಂಬಾಜಿದುರ್ಗಾದ ಪ್ರಕೃತಿ ಸೌಂದರ್ಯ. ಪ್ರಕೃತಿ ಸೌಂದರ್ಯ ಸವಿಯಲು ಬೆಟ್ಟಕ್ಕೆ ಬಂದವರು ಆಂಜನೇಯಸ್ವಾಮಿ ದರ್ಶನ ಮಾಡ್ತಿದ್ರು. ಇನ್ನು ಕೆಲವರು ಆಂಜನೇಯಸ್ವಾಮಿ ದರ್ಶನಕ್ಕೆ ಬಂದು ಬೆಟ್ಟದಲ್ಲಿ ಪ್ರವಾಸ ಮಾಡ್ತಿದ್ರು. ಇದ್ರಿಂದ ದಿನೇ ದಿನೇ ಬೆಟ್ಟದಲ್ಲಿ ಪ್ರವಾಸಿಗರು ಹಾಗೂ ಭಕ್ತರ ಸಂಖ್ಯೆ ಹೆಚ್ಚಾಗುತ್ತಿತ್ತು. ಆ ಕಾರಣವಾಗಿ ಅರಣ್ಯ ಇಲಾಖೆ ಇದೀಗ ನಿರ್ಬಂಧ ವಿಧಿಸಿದೆ. ಇದ್ರಿಂದ ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Chintamani Forest Department closed Anjaneya Temple renovated in forest area

ಸದ್ಯ ಚಿಂತಾಮಣಿಯ ಅಂಬಾಜಿದುರ್ಗ ಬೆಟ್ಟದ ಮೇಲಿರೋ ಆಂಜನೇಯಸ್ವಾಮಿ ದೇವಸ್ಥಾನ ವಿವಾದದ ಕೇಂದ್ರಬಿಂದುವಾಗಿದ್ದು, ಅರಣ್ಯ ಇಲಾಖೆ ಮತ್ತು ಅರ್ಚಕ ನಾರಾಯಣಸ್ವಾಮಿ ನಡುವೆ ದೇವಸ್ಥಾನವನ್ನು ಉಳಿಸಿಕೊಳ್ಳಲು ಹಗ್ಗಜಗ್ಗಾಟ ನಡೆದಿದೆ. ಕೊನೆಗೆ ಆಂಜನೇಯಸ್ವಾಮಿ ಯಾರ ಪಾಲಾಗ್ತಾನೆ ಕಾದು ನೋಡಬೇಕು.

ವರದಿ: ಭೀಮಪ್ಪ ಪಾಟೀಲ, ಟಿವಿ 9, ಚಿಕ್ಕಬಳ್ಳಾಪುರ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?