AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಂತಾಮಣಿಯಲ್ಲಿ ಹುಣಸೆಹಣ್ಣಿನ ಘಮಲು, ಭಾರೀ ಸಂಖ್ಯೆಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಟ್ಟ ಪಕ್ಕದ ರಾಜ್ಯಗಳ ವ್ಯಾಪಾರಿಗಳು

Chintamani tamarind market: ಈ ಬಾರಿ ಮರದಲ್ಲಿರುವ ಎಲೆಗಳನ್ನೇ ಮೀರಿಸುವ ಹಾಗೆ ಹುಣಸೆ ಕಾಯಿಗಳು ಬಿಟ್ಟಿವೆ. ಇದ್ರಿಂದ ಅಗತ್ಯಕ್ಕಿಂತ ಹೆಚ್ಚಿಗೆ ಸರಕು ಮಾರುಕಟ್ಟೆಗ ಬರ್ತಿದೆ. ಭಾನುವಾರ, ಮಂಗಳವಾರ ಹಾಗೂ ಶುಕ್ರವಾರ ಹುಣಸೆ ಹಣ್ಣಿನ ಸಂತೆ ನಡೆಯುತ್ತೆ, ನೂರಾರು ಟನ್ ಹುಣಸೆಹಣ್ಣು ಮಾರುಕಟ್ಟೆಗೆ ಬರ್ತಿದೆ. ಆದರೆ ಇದ್ರಿಂದ ನಿರೀಕ್ಷೆಯಷ್ಟು ಬೆಲೆ ಸಿಗ್ತಿಲ್ಲ. ರೈತರಂತೂ ಬೆಲೆ ಕಡಿಮೆಯಿಂದ ಅಸಮಾಧಾನಗೊಂಡಿದ್ದಾರೆ.

ಚಿಂತಾಮಣಿಯಲ್ಲಿ ಹುಣಸೆಹಣ್ಣಿನ ಘಮಲು, ಭಾರೀ ಸಂಖ್ಯೆಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಟ್ಟ ಪಕ್ಕದ ರಾಜ್ಯಗಳ ವ್ಯಾಪಾರಿಗಳು
ಚಿಂತಾಮಣಿ ಮಾರುಕಟ್ಟೆಯಲ್ಲಿ ಹುಣಸೆಹಣ್ಣಿನ ಘಮಲು, ಲಗ್ಗೆಯಿಟ್ಟ ವ್ಯಾಪಾರಿಗಳು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಸಾಧು ಶ್ರೀನಾಥ್​|

Updated on: Mar 23, 2024 | 6:58 AM

Share

ರುಚಿ ರುಚಿಯಾಗಿ ಸವಿರುಚಿಗಾಗಿ ಅಡುಗೆ ಮಾಡಬೇಕು ಅಂದ್ರೆ ಅದೊಂದು ಪದಾರ್ಥ ಬೇಕೆ ಬೇಕು, ಅಡುಗೆ ಮನೆಯಲ್ಲಿ ಅದು ಇಲ್ಲದೆ ಅಡುಗೆ ಪರಿಪೂರ್ಣವಾಗಲ್ಲ, ಈಗ ಅದರ ಸೀಜನ್ ಆರಂಭವಾಗಿದ್ದು… ಅದೊಂದು ಮಾರುಕಟ್ಟೆಯಲ್ಲಿ ಅದರದ್ದೇ ಕಾರುಕಾರು. ಅಷ್ಟಕ್ಕೂ ಅದೇನ್ ಅಂತೀರಾ ಈ ವರದಿ ನೋಡಿ!! ಇದು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ, ಇದು ಕೋಲಾರ ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗೆ ಖ್ಯಾತಿ. ಇಂಥದರಲ್ಲಿ ಇಲ್ಲಿ ನಡೆಯುವ ಹುಣಸೆ ಹಣ್ಣಿನ ಮಾರುಕಟ್ಟೆ (tamarind traders) ದಕ್ಷಿಣ ಭಾರತದಲ್ಲಿ ಖ್ಯಾತಿ. ಈಗ ಎಲ್ಲಿ ನೋಡಿದ್ರೂ ಎತ್ತ ನೋಡಿದ್ರೂ… ಹುಣಸೆ ಹಣ್ಣಿನ ಸಿಜನ್ (Chintamani tamarind market).

ಇದ್ರಿಂದ ರೈತರು ತಾವು ಬೆಳೆದ ಹುಣಸೆ ಹಣ್ಣು ಹಾಗೂ ಕಾಯಿಯನ್ನು ತೆಗೆದುಕೊಂಡು ಚಿಂತಾಮಣಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಾರೆ. ಇದ್ರಿಂದ ಹುಣಸೆ ಹಣ್ಣು ಕೊಂಡುಕೊಳ್ಳಲು ಕೇರಳ ತಮಿಳನಾಡು ಆಂದ್ರ ಮಹಾರಾಷ್ಟ್ರದಿಂದಲೂ ದೊಡ್ಡ ದೊಡ್ಡ ಕಂಪನಿಗಳು ದೊಡ್ಡ ದೊಡ್ಡ ವರ್ತಕರು ಇಲ್ಲಿಗೆ ಆಗಮಿಸಿ ಹುಣಸೆ ಹಣ್ಣು ಖರೀದಿ ಮಾಡ್ತಿದ್ದಾರೆ.

Also Read: Forest Poachers – ಚಿಕ್ಕಬಳ್ಳಾಪುರದಲ್ಲಿ ನವಿಲುಗಳ ಮಾರಣಹೋಮ, ತಿಂಗಳಲ್ಲಿ 15ಕ್ಕೂ ಹೆಚ್ಚು ರಾಷ್ಟ್ರಪಕ್ಷಿಗಳ ಹತ್ಯೆ

ಈ ಬಾರಿ ಹುಣಸೆ ಮರದಲ್ಲಿರುವ ಎಲೆಗಳನ್ನೇ ಮೀರಿಸುವ ಹಾಗೆ ಹುಣಸೆ ಕಾಯಿಗಳು ಬಿಟ್ಟಿವೆ. ಇದ್ರಿಂದ ಅಗತ್ಯಕ್ಕಿಂತ ಹೆಚ್ಚಿಗೆ ಸರಕು ಮಾರುಕಟ್ಟೆಗ ಬರ್ತಿದೆ. ಭಾನುವಾರ, ಮಂಗಳವಾರ ಹಾಗೂ ಶುಕ್ರವಾರ ಹುಣಸೆ ಹಣ್ಣಿನ ಸಂತೆ ನಡೆಯುತ್ತೆ, ನೂರಾರು ಟನ್ ಹುಣಸೆಹಣ್ಣು ಮಾರುಕಟ್ಟೆಗೆ ಬರ್ತಿದೆ. ಆದರೆ ಇದ್ರಿಂದ ನಿರೀಕ್ಷೆಯಷ್ಟು ಬೆಲೆ ಸಿಗ್ತಿಲ್ಲ. ರೈತರಂತೂ ಬೆಲೆ ಕಡಿಮೆಯಿಂದ ಅಸಮಾಧಾನಗೊಂಡಿದ್ದಾರೆ.

ಮತ್ತೊಂದೆಡೆ ಹುಣಸೆ ಹಣ್ಣಿನ ಆಟಾಟೋಪದ ಮುಂದೆ ಟೊಮ್ಯಾಟೊ ಬೆಲೆ ಕುಸಿದಿದೆ. ಕೆ.ಜಿ. ಹುಣಸೆಹಣ್ಣು 30 ರೂಪಾಯಿಗೆ ಬಿಕಾರಿಯಾಗ್ತಿದೆ, ಇದ್ರಿಂದ ಟೊಮ್ಯಾಟೊ ಹಣ್ಣುಗಳನ್ನು ಕೇಳೋರೆ ಇಲ್ಲದಂತಾಗಿದೆ. ಟೊಮ್ಯಾಟೊಗೂ ಒಂದು ಕಾಲವಾದ್ರೆ ಹುಣಸೆಗೂ ಒಂದು ಕಾಲ ಎನ್ನುವಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ​

Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ