AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಸಾವು: ಅನುಮಾನ ವ್ಯಕ್ತಪಡಿಸಿ ದೂರು ನೀಡಿದ ಪೋಷಕರು

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗಡಿಗವಾರಹಳ್ಳಿಯಲ್ಲಿ ನಡೆದಿದೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಸಾವು: ಅನುಮಾನ ವ್ಯಕ್ತಪಡಿಸಿ ದೂರು ನೀಡಿದ ಪೋಷಕರು
ಮೃತ ವಿದ್ಯಾರ್ಥಿನಿ ತನುಶ್ರೀ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jul 19, 2023 | 7:15 PM

Share

ಚಿಕ್ಕಬಳ್ಳಾಪುರ: ಮೊರಾರ್ಜಿ ದೇಸಾಯಿ ವಸತಿ ಶಾಲೆ (Morarji Desai) ಯ 8ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗಡಿಗವಾರಹಳ್ಳಿಯಲ್ಲಿ ನಡೆದಿದೆ. ತನುಶ್ರೀ ಮೃತ ವಿದ್ಯಾರ್ಥಿನಿ. ರಾತ್ರಿ ಊಟ ಮಾಡಿ ಮಲಗಿದ್ದ ವಿದ್ಯಾರ್ಥಿನಿ ಬೆಳಗ್ಗೆ ತೀವ್ರ ಅಸ್ವಸ್ಥಳಾಗಿದ್ದಳು. ಹಾಗಾಗಿ ವಿದ್ಯಾರ್ಥಿನಿಯನ್ನು ಚಿಂತಾಮಣಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.

ಸದ್ಯ ವಿದ್ಯಾರ್ಥಿನಿ ತನುಶ್ರೀ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Kolar News: ಕೌಟುಂಬಿಕ ಕಲಹ, ಪತ್ನಿಯನ್ನು ಕೊಂದು ಎಸ್ಕೇಪ್ ಆದ ಪತಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ 2ನೇ ಬಲಿ

ಚಿಕ್ಕಮಗಳೂರು: ಧಾರಾಕಾರ ಮಳೆಗೆ ಜಿಲ್ಲೆಯಲ್ಲಿ ಎರಡನೇ ಬಲಿ ಆಗಿದೆ. ಭತ್ತದ ಗದ್ದೆಗೆ ತೆರಳುವಾಗ ಕಾಲು ಜಾರಿ ಬಿದ್ದ ವೃದ್ಧೆ ರಭಸವಾಗಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋಗಿದ್ದು, ಹೇಮಾವತಿ ನದಿಯಲ್ಲಿ ವೃದ್ಧೆಯ ಶವ ಪತ್ತೆ ಆಗಿದೆ. ದಾರದಹಳ್ಳಿ ಗ್ರಾಮದ ದೇವಮ್ಮ(61) ಮೃತ ವೃದ್ಧೆ. ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮದ ಬಳಿ ಇರುವ ಹೇಮಾವತಿ ನದಿಯಲ್ಲಿ ಘಟನೆ ನಡೆದಿದೆ.

ಹೇಮಾವತಿ ನದಿಯ ದಡದಲ್ಲಿ ಸಿಲುಕಿದ್ದ ಶವವನ್ನು ಸ್ಥಳೀಯರು ಮೇಲಕ್ಕೆತ್ತಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಇದನ್ನೂ ಓದಿ: ಹೆಂಡತಿಯ ಅನೈತಿಕ ಸಂಬಂಧದಿಂದ ಮನನೊಂದ ಗಂಡ; ಸಾವಿನ ಆಡಿಯೋ ರೆಕಾರ್ಡ್​ ಮಾಡಿ ಆತ್ಮಹತ್ಯೆಗೆ ಶರಣು

ಬ್ರೀಡ್ಜ್​ಗೆ ಬೈಕ್ ಡಿಕ್ಕಿ ಮೂವರಿಗೆ ಗಾಯ

ಹಾವೇರಿ: ಬ್ರೀಡ್ಜ್​ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರಿಗೆ ಗಾಯಗಳಾಗಿರುವಂತಹ ಘಟನೆ ಹಾವೇರಿ ಸಮೀಪದ ಕಾಗಿನೆಲೆಯ ಬೈಪಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಘಟನೆ ನಡೆದಿದೆ. ಮಹಾಲಿಂಗಪ್ಪ (20), ಬಸವರಾಜ್ (18), ಮಹೇಶ್ ಗೌಡ (25) ಮೃತರು. ಓರ್ವನಿಗೆ ಅತಿಯಾದ ರಕ್ತಸ್ರಾವ ಉಂಟಾಗಿದ್ದು, ಮತ್ತಿಬರು ಅಪಾಯದಿಂದ ಪಾರಾಗಿದ್ದಾರೆ. ಅತಿ ವೇಗದಲ್ಲಿದ್ದ ಬೈಕ್ ಕಂಟ್ರೋಲ್ ತಪ್ಪಿ ಬ್ರಿಡ್ಜ್​ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಮೂವರು ಗಾಯಾಳು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹಾವೇರಿ ಸಂಚಾರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.  ‌

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ