AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಲೇಡಿ ಡಾನ್! ಸರ್ಕಾರಿ ರಸ್ತೆಯಲ್ಲಿ ವಾಹನಗಳನ್ನು ಅಡ್ಡಗಡ್ಡಿ ಹಣ ವಸೂಲಿ

ಅದು ಹೇಳಿ ಕೇಳಿ ರಾಜ್ಯದ ಪ್ರಸಿದ್ದ ಅರಣ್ಯ ಪ್ರವಾಸೋಧ್ಯಮದ ತಾಣ. ಪ್ರತಿದಿನ ಅಲ್ಲಿಗೆ ಸಾವಿರಾರು ಜನ ಪ್ರವಾಸಗಿರು ಬರ್ತಾರೆ, ಇದನ್ನೆ ಬಂಡವಾಳ ಮಾಡಿಕೊಂಡ ಸ್ಥಳೀಯ ಮಹಿಳೆಯೊರ್ವಳು. ಸಂಬಂಧವಿಲ್ಲದಿದ್ರೂ, ಗ್ರಾಮದ ನಡುರಸ್ತೆಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ಪಾರ್ಕಿಂಗ್ ನೆಪದಲ್ಲಿ ಹಣ ವಸೂಲಿ ಮಾಡ್ತಿದ್ದಾಳೆ. ಪ್ರಶ್ನಿಸಿದ್ರೆ ಕಾರು ಬೈಕ್​ಗಳಿಗೆ ಅಡ್ಡ ಕುಳಿತು ಅವಾಜ್ ಹಾಕುತ್ತಿದ್ದಾರೆ. ಅಷ್ಟಕ್ಕೂ ಆ ಲೇಡಿ ಡಾನ್ ಯಾರು? ಆಕೆಯ ಬಂಡವಾಳ ಏನು ಅಂತೀರಾ: ಇಲ್ಲಿದೆ ನೋಡಿ.

ಚಿಕ್ಕಬಳ್ಳಾಪುರದಲ್ಲಿ ಲೇಡಿ ಡಾನ್! ಸರ್ಕಾರಿ ರಸ್ತೆಯಲ್ಲಿ ವಾಹನಗಳನ್ನು ಅಡ್ಡಗಡ್ಡಿ ಹಣ ವಸೂಲಿ
ಮಹಿಳೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Sep 17, 2023 | 8:57 PM

Share

ಚಿಕ್ಕಬಳ್ಳಾಪುರ, ಸೆ.17: ಕೇಳಿದಷ್ಟು ಹಣ ಕೊಡಲಿಲ್ಲ ಎಂದು ಕಾರು ಬೈಕ್​ಗಳಿಗೆ ಅಡ್ಡ ಕುಳಿತು ಚಾರಣಿಗರಿಗೆ ಅವಾಜ್ ಹಾಕುತ್ತಿರುವುದು ಚಿಕ್ಕಬಳ್ಳಾಫುರ (Chikkaballapura) ತಾಲೂಕಿನ ಕಳವಾರ ಗ್ರಾಮದಲ್ಲಿ. ಹೌದು, ಈ ಗ್ರಾಮದ ಬಳಿ ಇರುವ ಸ್ಕಂದಗಿರಿ ಅರಣ್ಯ ಪ್ರವಾಸೋಧ್ಯಮ ಸ್ಥಳಕ್ಕೆ ಟ್ರಕ್ಕಿಂಗ್ ಹೊಗಲು ಪ್ರತಿದಿನ ಸಾವಿರಾರು ಜನ ಪ್ರವಾಸಿಗರು(Tourists) ಬರುತ್ತಾರೆ. ಹೀಗೆ ಬರುವ ಪ್ರವಾಸಿಗರ ವಾಹನಗಳನ್ನು ಅಡ್ಡಗಟ್ಟಿ ಸ್ಥಳೀಯ ಕಲಾವತಿ ಎನ್ನುವ ಮಹಿಳೆ, ಪಾರ್ಕಿಂಗ್ ನೆಪದಲ್ಲಿ ಗ್ರಾಮದಲ್ಲಿ ನಡು ರಸ್ತೆಯಲ್ಲಿ ಹಣ ವಸೂಲಿ ಮಾಡುತ್ತಿದ್ದಾಳೆ. ಪ್ರಶ್ನಿಸಿದ ಪ್ರವಾಸಿಗರ ಮೇಲೆ ಅವಾಜ್ ಹಾಕುತ್ತಿದ್ದಾಳೆ.

ಇನ್ನು ಸ್ಕಂದಗಿರಿಗೆ ಹೋಗುವ ಮಾರ್ಗದಲ್ಲಿ ಪಾಪಾಗ್ನಿ ಮಠವಿದೆ. ಮಠದ ಆವರಣದಲ್ಲಿ ಸ್ವಲ್ಪ ಪಾರ್ಕಿಂಗ್ ಸ್ಥಳವಿದೆ. ಅಲ್ಲಿಯ ಕೆಲವರು ಕಲಾವತಿಯನ್ನು ಮೊದಲು ಪಾರ್ಕಿಂಗ್ ಶುಲ್ಕ ವಸೂಲಿ ಮಾಡಲು ಸೂಚಿಸಿದ್ದರಂತೆ. ಆದ್ರೆ, ಈಗ ಕಲಾವತಿಗೂ, ಪಾಪಾಗ್ನಿ ಮಠಕ್ಕೆ ಸಂಬಂಧವಿಲ್ಲ. ಆದರೂ ಅನಧಿಕೃತವಾಗಿ ಗ್ರಾಮದಲ್ಲಿ ಬರುವ ವಾಹನಗಳನ್ನು ಅಡ್ಡಗಟ್ಟಿ ವಸೂಲಿ ಮಾಡುತ್ತಿದ್ದಾಳೆ. ಇದರಿಂದ ಪಾಪಾಗ್ನಿ ಮಠಕ್ಕೆ ಕೆಟ್ಟ ಹೆಸರು ಬರುತ್ತಿದ್ದು, ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ವತಃ ಪಾಪಾಗ್ನಿ ಮಠ ಸಮಿತಿ ಒತ್ತಾಯ ಮಾಡಿದೆ.

ಇದನ್ನೂ ಓದಿ:ಶಕ್ತಿ ಯೋಜನೆ ಅಡ್ಡ ಪರಿಣಾಮ! ಕಾಫಿನಾಡಲ್ಲಿ ಸರ್ಕಾರಿ ಬಸ್ಸುಗಳು ಇಲ್ಲದೆ ಸುಗಮ ಪ್ರಯಾಣಕ್ಕಾಗಿ ಭಕ್ತರು, ಪ್ರವಾಸಿಗರು ಪರದಾಟ

ಸುಂದರವಾದ ಪ್ರಕೃತಿ ತಾಣದಲ್ಲಿ ಕೆಲವೊತ್ತು ವಿಹರಿಸಿ ಮನಸ್ಸಿಗೆ ನೆಮ್ಮದಿ ಕಂಡುಕೊಳ್ಳೋಣ ಎಂದು ರಾಜಧಾನಿ ಬೆಂಗಳೂರಿನ ಜನ, ಬೆಳ್ಳಂ ಬೆಳಿಗ್ಗೆ ಸ್ಕಂದಗಿರಿಯತ್ತ ಮುಖ ಮಾಡಿದ್ರೆ, ದಾರಿ ಮದ್ಯೆ ಕಲಾವತಿ ಎನ್ನುವ ಮಹಿಳೆ ಕೊಡಬಾರದ ಕಾಟ ಕೊಟ್ಟು, ಪ್ರವಾಸಿಗರ ನೆಮ್ಮದಿಯನ್ನು ಹಾಳು ಮಾಡುತ್ತಿದ್ದಾಳೆ. ಇದನ್ನರಿತ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಇದೀಗ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:57 pm, Sun, 17 September 23

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ