AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಲೇಡಿ ಡಾನ್! ಸರ್ಕಾರಿ ರಸ್ತೆಯಲ್ಲಿ ವಾಹನಗಳನ್ನು ಅಡ್ಡಗಡ್ಡಿ ಹಣ ವಸೂಲಿ

ಅದು ಹೇಳಿ ಕೇಳಿ ರಾಜ್ಯದ ಪ್ರಸಿದ್ದ ಅರಣ್ಯ ಪ್ರವಾಸೋಧ್ಯಮದ ತಾಣ. ಪ್ರತಿದಿನ ಅಲ್ಲಿಗೆ ಸಾವಿರಾರು ಜನ ಪ್ರವಾಸಗಿರು ಬರ್ತಾರೆ, ಇದನ್ನೆ ಬಂಡವಾಳ ಮಾಡಿಕೊಂಡ ಸ್ಥಳೀಯ ಮಹಿಳೆಯೊರ್ವಳು. ಸಂಬಂಧವಿಲ್ಲದಿದ್ರೂ, ಗ್ರಾಮದ ನಡುರಸ್ತೆಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ಪಾರ್ಕಿಂಗ್ ನೆಪದಲ್ಲಿ ಹಣ ವಸೂಲಿ ಮಾಡ್ತಿದ್ದಾಳೆ. ಪ್ರಶ್ನಿಸಿದ್ರೆ ಕಾರು ಬೈಕ್​ಗಳಿಗೆ ಅಡ್ಡ ಕುಳಿತು ಅವಾಜ್ ಹಾಕುತ್ತಿದ್ದಾರೆ. ಅಷ್ಟಕ್ಕೂ ಆ ಲೇಡಿ ಡಾನ್ ಯಾರು? ಆಕೆಯ ಬಂಡವಾಳ ಏನು ಅಂತೀರಾ: ಇಲ್ಲಿದೆ ನೋಡಿ.

ಚಿಕ್ಕಬಳ್ಳಾಪುರದಲ್ಲಿ ಲೇಡಿ ಡಾನ್! ಸರ್ಕಾರಿ ರಸ್ತೆಯಲ್ಲಿ ವಾಹನಗಳನ್ನು ಅಡ್ಡಗಡ್ಡಿ ಹಣ ವಸೂಲಿ
ಮಹಿಳೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Sep 17, 2023 | 8:57 PM

Share

ಚಿಕ್ಕಬಳ್ಳಾಪುರ, ಸೆ.17: ಕೇಳಿದಷ್ಟು ಹಣ ಕೊಡಲಿಲ್ಲ ಎಂದು ಕಾರು ಬೈಕ್​ಗಳಿಗೆ ಅಡ್ಡ ಕುಳಿತು ಚಾರಣಿಗರಿಗೆ ಅವಾಜ್ ಹಾಕುತ್ತಿರುವುದು ಚಿಕ್ಕಬಳ್ಳಾಫುರ (Chikkaballapura) ತಾಲೂಕಿನ ಕಳವಾರ ಗ್ರಾಮದಲ್ಲಿ. ಹೌದು, ಈ ಗ್ರಾಮದ ಬಳಿ ಇರುವ ಸ್ಕಂದಗಿರಿ ಅರಣ್ಯ ಪ್ರವಾಸೋಧ್ಯಮ ಸ್ಥಳಕ್ಕೆ ಟ್ರಕ್ಕಿಂಗ್ ಹೊಗಲು ಪ್ರತಿದಿನ ಸಾವಿರಾರು ಜನ ಪ್ರವಾಸಿಗರು(Tourists) ಬರುತ್ತಾರೆ. ಹೀಗೆ ಬರುವ ಪ್ರವಾಸಿಗರ ವಾಹನಗಳನ್ನು ಅಡ್ಡಗಟ್ಟಿ ಸ್ಥಳೀಯ ಕಲಾವತಿ ಎನ್ನುವ ಮಹಿಳೆ, ಪಾರ್ಕಿಂಗ್ ನೆಪದಲ್ಲಿ ಗ್ರಾಮದಲ್ಲಿ ನಡು ರಸ್ತೆಯಲ್ಲಿ ಹಣ ವಸೂಲಿ ಮಾಡುತ್ತಿದ್ದಾಳೆ. ಪ್ರಶ್ನಿಸಿದ ಪ್ರವಾಸಿಗರ ಮೇಲೆ ಅವಾಜ್ ಹಾಕುತ್ತಿದ್ದಾಳೆ.

ಇನ್ನು ಸ್ಕಂದಗಿರಿಗೆ ಹೋಗುವ ಮಾರ್ಗದಲ್ಲಿ ಪಾಪಾಗ್ನಿ ಮಠವಿದೆ. ಮಠದ ಆವರಣದಲ್ಲಿ ಸ್ವಲ್ಪ ಪಾರ್ಕಿಂಗ್ ಸ್ಥಳವಿದೆ. ಅಲ್ಲಿಯ ಕೆಲವರು ಕಲಾವತಿಯನ್ನು ಮೊದಲು ಪಾರ್ಕಿಂಗ್ ಶುಲ್ಕ ವಸೂಲಿ ಮಾಡಲು ಸೂಚಿಸಿದ್ದರಂತೆ. ಆದ್ರೆ, ಈಗ ಕಲಾವತಿಗೂ, ಪಾಪಾಗ್ನಿ ಮಠಕ್ಕೆ ಸಂಬಂಧವಿಲ್ಲ. ಆದರೂ ಅನಧಿಕೃತವಾಗಿ ಗ್ರಾಮದಲ್ಲಿ ಬರುವ ವಾಹನಗಳನ್ನು ಅಡ್ಡಗಟ್ಟಿ ವಸೂಲಿ ಮಾಡುತ್ತಿದ್ದಾಳೆ. ಇದರಿಂದ ಪಾಪಾಗ್ನಿ ಮಠಕ್ಕೆ ಕೆಟ್ಟ ಹೆಸರು ಬರುತ್ತಿದ್ದು, ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ವತಃ ಪಾಪಾಗ್ನಿ ಮಠ ಸಮಿತಿ ಒತ್ತಾಯ ಮಾಡಿದೆ.

ಇದನ್ನೂ ಓದಿ:ಶಕ್ತಿ ಯೋಜನೆ ಅಡ್ಡ ಪರಿಣಾಮ! ಕಾಫಿನಾಡಲ್ಲಿ ಸರ್ಕಾರಿ ಬಸ್ಸುಗಳು ಇಲ್ಲದೆ ಸುಗಮ ಪ್ರಯಾಣಕ್ಕಾಗಿ ಭಕ್ತರು, ಪ್ರವಾಸಿಗರು ಪರದಾಟ

ಸುಂದರವಾದ ಪ್ರಕೃತಿ ತಾಣದಲ್ಲಿ ಕೆಲವೊತ್ತು ವಿಹರಿಸಿ ಮನಸ್ಸಿಗೆ ನೆಮ್ಮದಿ ಕಂಡುಕೊಳ್ಳೋಣ ಎಂದು ರಾಜಧಾನಿ ಬೆಂಗಳೂರಿನ ಜನ, ಬೆಳ್ಳಂ ಬೆಳಿಗ್ಗೆ ಸ್ಕಂದಗಿರಿಯತ್ತ ಮುಖ ಮಾಡಿದ್ರೆ, ದಾರಿ ಮದ್ಯೆ ಕಲಾವತಿ ಎನ್ನುವ ಮಹಿಳೆ ಕೊಡಬಾರದ ಕಾಟ ಕೊಟ್ಟು, ಪ್ರವಾಸಿಗರ ನೆಮ್ಮದಿಯನ್ನು ಹಾಳು ಮಾಡುತ್ತಿದ್ದಾಳೆ. ಇದನ್ನರಿತ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಇದೀಗ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:57 pm, Sun, 17 September 23

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!