AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಬೆನ್ನಲ್ಲೇ ಚಿಕ್ಕಬಳ್ಳಾಪುರದಲ್ಲೂ ಬ್ಯಾನರ್ ಗಲಾಟೆ: ಕಾಂಗ್ರೆಸ್ ನಾಯಕನ ಅಶ್ಲೀಲ ನಿಂದನೆಗೆ ಕಣ್ಣೀರು ಹಾಕಿದ ಪೌರಾಯುಕ್ತೆ

ಬಳ್ಳಾರಿ ಬಳಿಕ ಇದೀಗ ಚಿಕ್ಕಬಳ್ಳಾಪುರದಲ್ಲಿ ಬ್ಯಾನರ್ ಗಲಾಟೆ ಗಮನ ಸೆಳೆದಿದೆ. ಬ್ಯಾನರ್ ತೆಗೆಸಿದ ವಿಚಾರವಾಗಿ ಕೆಪಿಸಿಸಿ ರಾಜ್ಯ ಸಂಯೋಜಕರೂ ಆಗಿರುವ, ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡಗೆ ಅವಾಚ್ಯ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಿಂದನೆ ವಿಚಾರವಾಗಿ ಪೌರಾಯುಕ್ತೆ ಕಣ್ಣೀರು ಹಾಕಿದ್ದಾರೆ.

ಬಳ್ಳಾರಿ ಬೆನ್ನಲ್ಲೇ ಚಿಕ್ಕಬಳ್ಳಾಪುರದಲ್ಲೂ ಬ್ಯಾನರ್ ಗಲಾಟೆ: ಕಾಂಗ್ರೆಸ್ ನಾಯಕನ ಅಶ್ಲೀಲ ನಿಂದನೆಗೆ ಕಣ್ಣೀರು ಹಾಕಿದ ಪೌರಾಯುಕ್ತೆ
ರಾಜೀವ್ ಗೌಡ ಹಾಗೂ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Jan 14, 2026 | 1:30 PM

Share

ಚಿಕ್ಕಬಳ್ಳಾಪುರ, ಜನವರಿ 14: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ (Congress) ಮುಖಂಡ ರಾಜೀವ್ ಗೌಡ ಅವಾಚ್ಯ ಹಾಗೂ ಅಶ್ಲಿಲ ಪದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ನಡು ರಸ್ತೆಯಲ್ಲಿ ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಕೋಪಗೊಂಡು, ದೂರವಾಣಿ ಕರೆ ಮೂಲಕ ಅವ್ಯಾಚ್ಚ ಶಬ್ದಗಳನ್ನು ಬಳಸಿ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.

ಆರೋಪಿತ ರಾಜೀವ್ ಗೌಡ ಅವರು ಕೆಪಿಸಿಸಿ ರಾಜ್ಯ ಸಂಯೋಜಕರಾಗಿದ್ದು, ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ದೂರವಾಣಿ ಕರೆ ವೇಳೆ ‘ಬೆಂಕಿ ಹಾಕಿ ಸುಟ್ಟು ಹಾಕುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ, ದಂಗೆ ಮಾಡಿಸುತ್ತೇನೆ’ ಎಂದು ಗಂಭೀರ ಬೆದರಿಕೆ ಹಾಕಲಾಗಿದೆ ಎಂದು ಪೌರಾಯುಕ್ತೆ ಅಮೃತಾ ಗೌಡ ದೂರಿದ್ದಾರೆ.

ಈ ವೇಳೆ ಸ್ಥಳೀಯ ಶಾಸಕ ಬಿ.ಎನ್. ರವಿಕುಮಾರ್ ಅವರ ಮೇಲೂ ಅವ್ಯಾಚ್ಚ ಹಾಗೂ ಅಶ್ಲಿಲ ಪದಗಳಿಂದ ನಿಂದನೆ ನಡೆದಿದ್ದು, ಪರೋಕ್ಷವಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರಿಗೂ ಅವಮಾನಿಸಲಾಗಿದೆ ಎನ್ನಲಾಗಿದೆ.

ಈ ಘಟನೆಯಿಂದ ಶಿಡ್ಲಘಟ್ಟ ನಗರಸಭೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಭಯಭೀತಗೊಂಡಿದ್ದು, ಸಾರ್ವಜನಿಕ ಸೇವೆ ನಿರ್ವಹಿಸುವ ಅಧಿಕಾರಿಗಳಿಗೆ ಈ ರೀತಿಯ ಬೆದರಿಕೆಗಳು ಅಸಹ್ಯಕರವಾಗಿವೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳು ಮೇಲಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಅಧಿಕಾರಿಗಳು, ಸಿಬ್ಬಂದಿ ಮುಂದೆ ಆಯುಕ್ತೆ ಅಮೃತಾ ಕಣ್ಣೀರು

ರಾಜೀವ್ ಗೌಡ ಜೀವ ಬೆದರಿಕೆ ಹಾಕಿದ್ದಕ್ಕೆ ಮನನೊಂದು ಆಯುಕ್ತೆ ಅಮೃತಾ ಅಧಿಕಾರಿಗಳು, ಸಿಬ್ಬಂದಿ ಮುಂದೆ ಕಣ್ಣೀರು ಹಾಕಿದ್ದಾರೆ. ನಾನು ಸಾಫ್ಟ್​​ವೇರ್​ ಇಂಜಿನಿಯರ್​ ಆಗಿದ್ದೆ, ಪತಿ ಎನ್ಆರ್​ಐ ಆಗಿದ್ದಾರೆ. ಐಟಿ ಕೆಲಸ ಬಿಟ್ಟು ನಾಗರಿಕರ ಸೇವೆಗೆ ಬಂದೆ. ತಂದೆಯ ಆಸೆ ಈಡೇರಿಸಲು ಕೆಎಎಸ್​ ಪರೀಕ್ಷೆ ಬರೆದಿದ್ದೆ. ಇಲ್ಲಿ ನೋಡಿದರೆ ಅವಾಚ್ಯವಾಗಿ ನಿಂದಿಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ಅಮೃತಾ ಅಳಲು ತೋಡಿಕೊಂಡಿದ್ದಾರೆ.

ಏತನ್ಮಧ್ಯೆ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಅಧಿಕಾರಿಗಳು, ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ. ​​​ರಾಜೀವ್ ಗೌಡ ಬಂಧನಕ್ಕೆ ಆಗ್ರಹಿಸಿ ಅಧಿಕಾರಿಗಳು, ಸಿಬ್ಬಂದಿ ಕೆಲಸ ಕಾರ್ಯ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರಾಣ ಬೆದರಿಕೆ ಹಾಕಿಲ್ಲ: ರಾಜೀವ್​ ಗೌಡ ಸ್ಪಷ್ಟನೆ

ಶಿಡ್ಲಘಟ್ಟ ನಗರಸಭೆ ಆಯುಕ್ತೆ ಅಮೃತಾಗೌಡಗೆ ಪ್ರಾಣ ಬೆದರಿಕೆ ಹಾಕಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಪ್ರತಿಕ್ರಿಯಿಸಿದ್ದಾರೆ. ‘ಟಿವಿ9’ ಜತೆ ಮಾತನಾಡಿದ ಅವರು, ಬ್ಯಾನರ್ ಸುಟ್ಟು ಹಾಕುತ್ತೇನೆ ಎಂದು ಹೇಳಿದ್ದೇನೆ. ಅವರನ್ನೇ ಸುಟ್ಟು ಹಾಕುತ್ತೇನೆ ಎಂದು ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ರಮ್ಯಾ, ವಿಜಯಲಕ್ಷ್ಮಿ ಬೆನ್ನಲ್ಲೇ ಕಾಂಗ್ರೆಸ್ ಶಾಸಕಿಗೂ ಅಶ್ಲೀಲ ಕಾಮೆಂಟ್ ಕಾಟ

ನಾವು ಹಾಕಿದ್ದ ಬ್ಯಾನರ್​​ನಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿರಲಿಲ್ಲ. ನಾವು ಅನುಮತಿ ಪಡೆದು ಬ್ಯಾನರ್ ಅಳವಡಿಸಿದ್ದೆವು. ನಮ್ಮ ಬ್ಯಾನರ್​ ತೆಗೆದು ಬೇರೆ ಬ್ಯಾನರ್ ಹಾಕಲು ಹಾಗೆ ಮಾಡಿದ್ದಾರೆ. ಈ ಹಿಂದೆ ನಮ್ಮ ಬ್ಯಾನರ್ ತೆಗೆದು ಬೇರೆಯವರ ಬ್ಯಾನರ್​ಗೆ ಅವಕಾಶ. ನಾನು ಮಾತನಾಡಿರುವ ಆಡಿಯೋ ಕ್ಲಿಪ್​ ಎಡಿಟ್ ಮಾಡಲಾಗಿದೆ ಎಂದು ರಾಜೀವ್ ಗೌಡ ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:02 am, Wed, 14 January 26

ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!