AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಕಂಟೇನರ್​ ಬಿದ್ದು ತಂದೆ-ಮಗಳು ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ ತಾಲ್ಲೂಕಿನ ಮರಸನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಕಂಟೇನರ್ ಬೈಕ್ ಮೇಲೆ ಬಿದ್ದ ಪರಿಣಾಮ ತಂದೆ ಮತ್ತು ನಾಲ್ಕು ವರ್ಷದ ಮಗಳು ದೀಕ್ಷಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೆಂಕಟೇಶ್ ಪತ್ನಿ ರೂಪಾ ಅವರ ಸ್ಥಿತಿ ಗಂಭೀರವಾಗಿದೆ. ವಾಹನಗಳ ಅಜಾಗರೂಕ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ವಿವೇಕ ಬಿರಾದಾರ

Updated on: Apr 19, 2025 | 7:55 PM

ಚಿಕ್ಕಬಳ್ಳಾಪುರ, ಏಪ್ರಿಲ್​ 19: ಬೈಕ್ ಮೇಲೆ ಕಂಟೇನರ್​ ಬಿದ್ದು ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ (Chikkballapur) ತಾಲೂಕಿನ ಮರಸನಹಳ್ಳಿ ಬಳಿ ನಡೆದಿದೆ. ಬೈಕ್​ನಲ್ಲಿದ್ದ ತಂದೆ ವೆಂಕಟೇಶ್, ಮಗಳು ದೀಕ್ಷಿತಾ (4) ಮೃತ ದುರ್ದೈವಿಗಳು. ಮೃತ ವೆಂಕಟೇಶ್ ಪತ್ನಿ ರೂಪಾ ಸ್ಥಿತಿ ಚಿಂತಾಜನಕವಾಗಿದೆ. ಬೈಕ್​ ಸವಾರರು ಚಿಕ್ಕಬಳ್ಳಾಪುರ ತಾಲೂಕಿನ ಬಂಡಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ. ಕುಟುಂಬ ಬಂಡಹಳ್ಳಿಯಿಂದ ನಾಯನಹಳ್ಳಿಗೆ ಹೊರಟಿದ್ದಾಗ ದುರ್ಘಟನೆ ಸಂಭವಿಸಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಚಿಕ್ಕಬಳ್ಳಾಪುರ ತಾಲೂಕಿ ಲಿಂಗಶೆಟ್ಟಪುರ ಗೇಟ್ ಬಳಿಯ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾಗೇಪಲ್ಲಿ ಕಡೆಯಿಂದ ಬೆಂಗಳೂರು ಕಡೆಗೆ ಬೈಕ್ ಬರುತ್ತಿತ್ತು. ಬೈಕ್​ ಪಕ್ಕದಲ್ಲಿ ಕಂಟೇನರ್ ಸಹ ಬರುತ್ತಿತ್ತು. ಆದರೆ, ಲಿಂಗಶೆಟ್ಟಪುರ ಗೇಟ್ ಬಳಿ ಈಶಾ ಪೌಂಡೇಷನ್ ಕಡೆಯಿಂದ ಬಂದ ಕಾರೊಂದು ರಭಸವಾಗಿ ಹೆದ್ದಾರಿಗೆ ಬಂದಿದೆ. ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಕಂಟೇನರ್ ಚಾಲಕ ಸಡನ್​ ಆಗಿ ಬ್ರೇಕ್ ತುಳಿದು, ಕಂಟೇನರ್ ಅನ್ನು ಎಡಕ್ಕೆ ಎಳೆದಿದ್ದಾರೆ. ಕಂಟೇನರ್ ಪಕ್ಕದಲ್ಲೇ ಚಲಿಸುತ್ತಿದ್ದ ಬೈಕ್ ಸವಾರರ ಮೇಲೆ ಬಿದ್ದಿದೆ.

ಬೈಕ್ ಮೇಲೆ ಕಂಟೇನರ್ ಬಿದ್ದ ರಭಸಕ್ಕೆ ವೆಂಕಟೇಶ, ಅವರ ಪತ್ನಿ ರೂಪಾ ಮತ್ತು ಮಗಳು ದೀಕ್ಷಿತಾ ಕಂಟೇನರ್ ಕೆಳಗೆ ಸಿಲುಕಿದ್ದಾರೆ. ವೆಂಕಟೇಶ್ ಹಾಗೂ ದೀಕ್ಷಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೆಂಕಟೇಶ್ ಪತ್ನಿ ರೂಪಾ ಕಾಲುಗಳನ್ನು ಕಳೆದುಕೊಂಡಿದ್ದು, ಸಾವು ಬದುಕಿನ ಮದ್ಯ ಹೋರಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ
Image
ಕಸದ ರಾಶಿಯಲ್ಲಿ ಎಸೆದ ಪ್ಲಾಸ್ಟಿಕ್ ಕಂಟೇನರ್‌ನಲ್ಲಿ ಶಿಶುವಿನ ಶವ ಪತ್ತೆ
Image
ಉದ್ಯಮಿ ಸೇರಿ 6 ಜನ ಅಪ್ಪಚ್ಚಿ: ಕಾರಿನ ಮೇಲೆ ಲಾರಿ ಬಿದ್ದಿದ್ದೇಗೆ? ಕಾರಣವೇನು
Image
ಬೆಂಗಳೂರು: ರಸ್ತೆಗೆ ಅಡ್ಡಲಾಗಿ ಕಂಟೈನರ್ ನಿಲ್ಲಿಸಿದ ಚಾಲಕ, ಟ್ರಾಫಿಕ್ ಜಾಮ್
Image
ನೆಲಮಂಗಲ: ಬ್ರೇಕ್ ಫೇಲ್‌ ಆದ ಕಂಟೇನರ್ ನಿಂದ ಸರಣಿ ಅಪಘಾತ, ತಪ್ಪಿದ ಭಾರಿ ದುರಂತ

ಇದನ್ನೂ ನೋಡಿ: ಡಿವೈಡರ್​ಗೆ ಗುದ್ದಿ ಕಾರಿನ ಮೇಲೆ ಕಂಟೇನರ್​ ಬೀಳುತ್ತಿರುವ ಭಯಾನಕ ದೃಶ್ಯ ಇಲ್ಲಿದೆ

ಲಿಂಗಶೆಟ್ಟಿಪುರ ಗೇಟ್ ಬಳಿ ಈಶಾ ಪೌಂಡೇಷನ್‍ಗೆ ಹೋಗಿ ಬರುವ ವಾಹನಗಳು ಅಜಾಗರೂಕತೆಯಿಂದ ರಸ್ತೆಗೆ ನುಗ್ಗುತ್ತಿವೆ. ಇದರಿಂದಾಗಿ ಇಲ್ಲಿ ಆಗಾಗ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!