AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿಗಿರಿಧಾಮದ ಪ್ರಕೃತಿ ಸೌಂದರ್ಯ ಸವಿಯಲು ಬರೋ ಸವಾರರ ಬಳಿ ದುಪ್ಪಟ್ಟು ಹಣ ವಸೂಲಿ, ಗುತ್ತಿಗೆದಾರನ ಆಟಟೋಪಕ್ಕೆ ಇಲ್ವಾ ಬ್ರೇಕ್?

Nandi Hills | ಅದು ಹೇಳಿ ಕೇಳಿ ಪ್ರಕೃತಿ ಸೌಂದರ್ಯದ ಸುಂದರ ತಾಣ. ರಾಜಧಾನಿ ಬೆಂಗಳೂರಿನಿಂದ ಕೂಗಳತೆ ದೂರದಲ್ಲಿರುವ ಕಾರಣ, ವಿಕೆಂಡ್ ಬಂದ್ರೆ ಸಾಕು, ಬೆಂಗಳೂರಿನ ಜನ ಅಲ್ಲಿಗೆ ಹೋಗಿ ಮಸ್ತ್ ಎಂಜಾಯ್ ಮಾಡ್ತಾರೆ. ಆದ್ರೆ ಆ ಪ್ರವಾಸಿ ತಾಣಕ್ಕೆ ಬರೋ ಬೈಕ್ ಸವಾರರಿಂದ ಅಲ್ಲಿ ಮನಸ್ಸೋ ಇಚ್ಚೆ ಹಣ ವಸೂಲಿ ಮಾಡ್ತಿದ್ದಾರೆ.

ನಂದಿಗಿರಿಧಾಮದ ಪ್ರಕೃತಿ ಸೌಂದರ್ಯ ಸವಿಯಲು ಬರೋ ಸವಾರರ ಬಳಿ ದುಪ್ಪಟ್ಟು ಹಣ ವಸೂಲಿ, ಗುತ್ತಿಗೆದಾರನ ಆಟಟೋಪಕ್ಕೆ ಇಲ್ವಾ ಬ್ರೇಕ್?
ನಂದಿಗಿರಿಧಾಮದಲ್ಲಿ ಗುತ್ತಿಗೆದಾರ ಸತ್ಯನಾರಾಯಣ, ಹೆಲ್ಮೆಟ್ ಸಂಗ್ರಹ ನೆಪದಲ್ಲಿ ಬೈಕ್ ಸವಾರರಿಂದ ನಿಗದಿಗಿಂತ ಹಣಕ್ಕಿಂತ ಹೆಚ್ಚು ವಸೂಲಿ ಮಾಡುತ್ತಿದ್ದಾರೆ.
ಆಯೇಷಾ ಬಾನು
|

Updated on:Feb 22, 2021 | 7:13 AM

Share

ಚಿಕ್ಕಬಳ್ಳಾಪುರ: ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರದ ನಂದಿಗಿರಿಧಾಮದ ಪ್ರಕೃತಿ ಸೌಂದರ್ಯ ಸವಿಯಲು ರಾಜಧಾನಿಯ ಜನ ಸೇರಿದಂತೆ ಸಾವಿರಾರು ಪ್ರವಾಸಿಗರು ನಿತ್ಯ ಲಗ್ಗೆ ಇಡ್ತಾರೆ. ಹೀಗೆ ಗಿರಿಧಾಮಕ್ಕೆ ಬರುವ ಬೈಕ್ ಸವಾರ ಪ್ರವಾಸಿಗಳಿಂದ ಗಿರಿಧಾಮದಲ್ಲಿ ಅಕ್ರಮ ವಸೂಲಿ ನಡೆಯುತ್ತೆ ಅನ್ನೋ ಮಾಹಿತಿ ಟಿವಿ9ಗೆ ಸಿಕ್ಕಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದಾಗ ಗುತ್ತಿಗೆದಾರ ಸತ್ಯನಾರಾಯಣ, ಹೆಲ್ಮೆಟ್ ಸಂಗ್ರಹ ನೆಪದಲ್ಲಿ ಬೈಕ್ ಸವಾರರಿಂದ ನಿಗದಿಗಿಂತ ಐದಾರು ಪಟ್ಟು ಹೆಚ್ಚು ಹಣ ವಸೂಲಿ ಮಾಡ್ತಿರುವ ದೃಶ್ಯ ಕಂಡು ಬಂತು.

ನಂದಿಗಿರಿಧಾಮದಲ್ಲಿ ಸತ್ಯನಾರಾಯಣ ಅನ್ನೊ ಗುತ್ತಿಗೆದಾರನಿಗೆ ರಾಜ್ಯ ತೋಟಗಾರಿಕೆ ಇಲಾಖೆ, ಗಿರಿಧಾಮಕ್ಕೆ ಬರೋ ಪ್ರವಾಸಿಗಳ ಹೆಲ್ಮೆಟ್‌ ಸಂಗ್ರಹಿಸಿ ನಂತರ ವಾಪಸ್ ಕೊಡಲು ತಲಾ ಐದು ರೂಪಾಯಿ ಹಾಗೂ ಬ್ಯಾಗ್‌ಗೆ ಐದು ರೂಪಾಯಿ ದರ ನಿಗದಿ ಮಾಡಿದೆ. ಆದ್ರೆ ಸತ್ಯನಾರಾಯಣ ಪ್ರವಾಸಿಗಳಿಂದ ಒಂದು ಹೆಲ್ಮೆಟ್ ಹಾಗೂ ಒಂದು ಬ್ಯಾಗ್​ಗೆ 20-30, 40 ರೂಪಾಯಿಯಂತೆ ವಸೂಲಿ ಮಾಡ್ತಿದ್ದಾನೆ. ಸ್ವತಃ ಟಿವಿ9 ಪ್ರತಿನಿಧಿ ಹೆಲ್ಮೆಟ್ ಇಟ್ಟು ವಾಪಸ್ ಪಡೆದಾಗ ಐದು ರೂಪಾಯಿ ಬದಲು 30 ರೂಪಾಯಿ ಹಣ ವಸೂಲಿ ಮಾಡಿದ್ದು, ವಿಡಿಯೊ ರೆಕಾರ್ಡ ಆಗಿದೆ.

ಗಿರಿಧಾಮದಲ್ಲಿ ಈಗಾಗಲೇ ಹೆಜ್ಜೆ ಹೆಜ್ಜೆಗೂ ದುಬಾರಿ ದುನಿಯಾ ಕಾಡ್ತಿದೆ. ಆದ್ರೆ ಗುತ್ತಿಗೆದಾರ ಸರ್ಕಾರ ನಿಗದಿ ಮಾಡಿದ ದರ ಬಿಟ್ಟು ಪ್ರವಾಸಿಗರ ಬ್ಯಾಗ್ ಹಾಗೂ ಹೆಲ್ಮೆಟ್‌ಗೆ ಮನಸ್ಸೊ ಇಚ್ಚೆ ಹಣ ವಸೂಲಿ ಮಾಡ್ತಿದ್ದಾನೆ. ಈ ಗುತ್ತಿಗೆದಾರನ ಆಟಟೋಪಕ್ಕೆ ಸಂಬಂಧ ಪಟ್ಟವರು ಬ್ರೇಕ್ ಹಾಕಬೇಕಿದೆ.

ಇದನ್ನೂ ಓದಿ: ನಂದಿಬೆಟ್ಟದ ಜಾಲಿ ರೈಡ್‌ ತಂದಿಟ್ಟ ಅವಾಂತರ.. ಕಾರುಗಳ ನಡುವೆ ಸರಣಿ ಅಪಘಾತ

Published On - 7:13 am, Mon, 22 February 21

Follow Us
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!