AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಡಿಸಿಸಿ ಬ್ಯಾಂಕ್​ನಲ್ಲಿ ಭ್ರಷ್ಟಾಚಾರ ನಡೆದಿದೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ತನಿಖೆ ನಡೆದರೆ ರಮೇಶ ಕುಮಾರ್ ಸೇರಿದಂತೆ ಆಡಳಿತ ಮಂಡಳಿಯ ಕೆಲವರು ಜೈಲಿಗೆ ಹೊಗುತ್ತಾರೆ ಎಂಬ ಕಾರಣಕ್ಕೆ ಬ್ಯಾಂಕ್​ನಲ್ಲಿ ತನಿಖೆ ನಡೆಯದಂತೆ ಹೈಕೋರ್ಟ್​ನಿಂದ ತಡೆಯಾಜ್ಞೆ ತಂದಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಕೋಲಾರ ಡಿಸಿಸಿ ಬ್ಯಾಂಕ್​ನಲ್ಲಿ ಭ್ರಷ್ಟಾಚಾರ ನಡೆದಿದೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಆರೋಗ್ಯ ಸಚಿವ ಡಾ.ಕೆ.ಸುಧಾಕರ್
TV9 Web
| Edited By: |

Updated on:Oct 20, 2021 | 1:41 PM

Share

ಚಿಕ್ಕಬಳ್ಳಾಪುರ: ಜಿಲ್ಲಾ ಸಹಕಾರ ಬ್ಯಾಂಕ್​ನಲ್ಲಿ(ಡಿಸಿಸಿ) ಬ್ರಹ್ಮಂಡ ಭ್ರಷ್ಟಾಚಾರ ನಡೆದಿದೆ. ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್​ನಲ್ಲಿ ಅಧ್ಯಕ್ಷ ಗೋಪಾಲಗೌಡ ನಾಮಕಾವಸ್ತೆ ಅಧ್ಯಕ್ಷರಾಗಿದ್ದಾರೆ. ಬ್ಯಾಂಕ್​ನಲ್ಲಿ ಮಾಜಿ ಸ್ಪೀಕರ್ ಹಾಗೂ ಹಾಲಿ ಶ್ರೀನಿವಾಸಪುರ ಶಾಸಕ ಕೆ.ಆರ್ ರಮೇಶ ಕುಮಾರ್ ರಿಂಗ್ ಮಾಸ್ಟರ್ ಆಗಿದ್ದಾರೆ. ಬ್ಯಾಂಕ್​ನಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆದರೆ ರಮೇಶ ಕುಮಾರ್ ಸೇರಿದಂತೆ ಆಡಳಿತ ಮಂಡಳಿಯ ಕೆಲವರು ಜೈಲಿಗೆ ಹೊಗುತ್ತಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಜರಬಂಡನಹಳ್ಳಿ ಗ್ರಾಮದಲ್ಲಿ ಸ್ಥಳಿಯ ವಿಎಸ್​ಎಸ್​ಎನ್​ ಸಂಸ್ಥೆಯಿಂದ ರೈತರಿಗೆ ಸಾಲ ವಿತರಣೆ ಮಾಡಿದ ಬಳಿಕ ಮಾತನಾಡಿದ ಅವರು, ತನಿಖೆ ನಡೆದರೆ ರಮೇಶ ಕುಮಾರ್ ಸೇರಿದಂತೆ ಆಡಳಿತ ಮಂಡಳಿಯ ಕೆಲವರು ಜೈಲಿಗೆ ಹೊಗುತ್ತಾರೆ ಎಂಬ ಕಾರಣಕ್ಕೆ ಬ್ಯಾಂಕ್​ನಲ್ಲಿ ತನಿಖೆ ನಡೆಯದಂತೆ ಹೈಕೋರ್ಟ್​ನಿಂದ ತಡೆಯಾಜ್ಞೆ ತಂದಿದ್ದಾರೆ ಎಂದು ಹೇಳಿದ್ದಾರೆ.

ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಬ್ಯಾಂಕ್ ಹಾಗೂ ಕೋಲಾರ ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಮಹಾ ಮಂಡಳಿ ವಿಭಜನೆಗೆ ಶಾಸಕ ರಮೇಶ ಕುಮಾರ್, ಶಾಸಕ ಎನ್.ಎಚ್. ಶಿವಶಂಕರ ರೆಡ್ಡಿ ಸೇರಿದಂತೆ ಕೆಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಯಾರು ಎಷ್ಟೇ ತಡೆದರು ಎರಡು ಸಂಸ್ಥೆಗಳನ್ನು ವಿಭಜನೆ ಮಾಡಿಯೇ ಸಿದ್ಧ. ಇನ್ನೂ ಸಹಕಾರ ಇಲಾಖೆಯಲ್ಲಿ ಭ್ರಷ್ಟ ಅಧಿಕಾರಿಗಳು ತುಂಬಿದ್ದು, ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್​ಗೆ ಮನವಿ ಮಾಡಿರುವುದಾಗಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ವರದಿ: ಭೀಮಪ್ಪ ಪಾಟೀಲ್

ಇದನ್ನೂ ಓದಿ: ಗಡ್ಡ ಬಿಟ್ಟವರಿಗೆ ತಿಳಿಹಾಸ್ಯದೊಂದಿಗೆ ಶುಭ ಕೋರಿದ ಡಾ.ಸುಧಾಕರ್​; ವೈರಲ್​ ಆದ ಕೆಲವೇ ಕ್ಷಣಗಳಲ್ಲಿ ಪೋಸ್ಟ್​ ಡಿಲೀಟ್​!

ಕೊವಿಡ್ ಸೋಂಕಿನ ವಿರುದ್ಧ ಹೋರಾಟಕ್ಕೆ ಇನ್ನಷ್ಟು ಸಿದ್ಧತೆ, ಶೀಘ್ರವೇ 2,480 ವೈದ್ಯರ ನೇಮಕ: ಸಚಿವ ಕೆ.ಸುಧಾಕರ್​

Published On - 1:37 pm, Wed, 20 October 21

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ