AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಂಡೌಸ್ ಚಂಡಮಾರುತ ಎಫೆಕ್ಟ್: ಡಿ.12ರಂದು ಚಿಕ್ಕಬಳ್ಳಾಫುರ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಾಂಡೌಸ್ ಚಂಡಮಾರುತದಿಂದ ನಿರಂತರ ತುಂತುರು ಮಳೆ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ

ಮಾಂಡೌಸ್ ಚಂಡಮಾರುತ ಎಫೆಕ್ಟ್: ಡಿ.12ರಂದು ಚಿಕ್ಕಬಳ್ಳಾಫುರ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಚಿಕ್ಕಬಳ್ಳಾಪುರ ಸರ್ಕಾರಿ ಕಾಲೇಜು
TV9 Web
| Edited By: |

Updated on:Dec 12, 2022 | 6:33 AM

Share

ಚಿಕ್ಕಬಳ್ಳಾಫುರ: ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಮಾಂಡಸ್ ಚಂಡಮಾರುತದ ರೂಪ ತಳೆದಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು (Tamil Nadu), ಆಂಧ್ರ ಪ್ರದೇಶದಲ್ಲಿ (Andhra Pradesh) ಭಾರೀ ಮಳೆಯ (Heavy Rainfall) ಎಚ್ಚರಿಕೆ ನೀಡಲಾಗಿದೆ. ಈ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೂ ಬೀರಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ಇನ್ನೂ ಕೆಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದೆ. ಈ ಮಳೆ ಇನ್ನೂ 3 ದಿನಗಳ ಕಾಲ ಮುಂದುವರೆಯಲಿದೆ. ಈ ಸಂಬಂಧ ನಾಳೆ (ಡಿ.12) ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಬಳ್ಳಾಫುರ ಜಿಲ್ಲೆಯಾದ್ಯಂತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಮತ್ತು ಕಾಲೇಜುಗಳಿಗೆ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್​ ಆದೇಶ ಹೊರಡಿಸಿದ್ದಾರೆ.

ಕೋಲಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೂ ರಜೆ

ಕೋಲಾರ: ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆ ಹಾಗೂ ಶೀತ ಗಾಳಿ ಹಿನ್ನೆಲೆ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ಕೋಲಾರ ಡಿಡಿಪಿಐ ಕೃಷ್ಣಮೂರ್ತಿ ಆದೇಶ ಹೊರಡಿಸಿದ್ದಾರೆ. ಮಕ್ಕಳ ಹಿತ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ.

ಹಾಗೇ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳ ಸಮೀಪ ಸುತ್ತಾಡದಂತೆ ಸೂಚನೆ ನೀಡಿದ್ದಾರೆ. ಇನ್ನೂ ಪಾಠಗಳನ್ನು ಮುಂದಿನ ಸರ್ಕಾರಿ ರಜಾ ದಿನಗಳಲ್ಲಿ ಸರಿದೂಗಿಸುವಂತೆ ಶಿಕ್ಷಕರಿಗೆ ಸೂಚಿಸಲಾಗಿದೆ.

ರಾಜ್ಯಾದ್ಯಂತ ವಿಕೇಂಡ್​ಗೆ ಮಾರಕವಾದ ತುಂತುರು ಮಳೆ   

ಕಳೆದ ಅರ್ಧಗಂಟೆಯಿಂದ ಬಿಟ್ಟು ಬಿಡದೆ ಜಿಟಿ ಜಟಿ ಮಳೆ

ಉತ್ತರ ಕನ್ನಡ: ಜಿಲ್ಲೆಯಾದ್ಯಂತ ತುಂತುರು ಮಳೆಯಾಗುತ್ತಿದೆ. ಕಳೆದ ಅರ್ಧ ಗಂಟೆಯಿಂದ ಜಿಟಿಜಿಟಿ ಮಳೆಯಾಗುತ್ತಿದೆ. ಜಿಲ್ಲೆಯ ಭಟ್ಕಳ, ಕುಮಟಾ, ಕಾರವಾರ, ಶಿರಸಿ, ಜೋಯಿಡಾ, ದಾಂಡೇಲಿ ಭಾಗದಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ. ಜಿಟಿ ಜಿಟಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯಾದ್ಯಂತ ಇನ್ನು 3 ದಿನಗಳ ಕಾಲ ಮಳೆ ಮುಂದುವರೆಯಲಿದೆ.

ಜಿಟಿ ಜಿಟಿ ಮಳೆಗೆ ಬೇಸತ್ತು ಹೋದ ಚಾಮರಾಜನಗರ ಮಂದಿ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದ್ದು,  ನಗರದ ಅಂಬೇಡ್ಕರ್ ಕ್ರೀಡಾಂಗಣ ಕೆಸರುಮಯವಾಗಿದೆ. ಹಲವೆಡೆ ಮೋಡಕವಿದ ವಾತಾವರಣವಿದ್ದು, ಒಂದೆಡೆ ಚಳಿ, ಇನ್ನೊಂದೆಡೆ ತುಂತುರು ಮಳೆಯಾಗುತ್ತಿದೆ.

ಮೋಡ ಕವಿದ ವಾತವರಣ

ಯಾದಗಿರಿ: ಬಿಸಿಲು ಜಿಲ್ಲೆ ಯಾದಗಿರಿ ಜಿಲ್ಲೆಯಾದ್ಯಂತ ಬೆಳಗ್ಗೆ 6 ಗಂಟೆಯಿಂದ ಮೋಡ ಕವಿದ ವಾತವರಣವಿದೆ. ಆಗಾಗಾ ಸಣ್ಣ ಪ್ರಮಾಣದ ಮಳೆಯಾಗುತ್ತಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:08 pm, Sun, 11 December 22

Follow Us
Web contact
Web contact

TV9 Kannada

Read More
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ