AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ದರ್ಶನಕ್ಕೆ ಬಂದು ಸೆಲ್ಪಿಗೆ ಮುಗಿಬೀಳುತ್ತಿರುವ ಭಕ್ತರು, ಭಕ್ತರ ಉದ್ಧಟತನಕ್ಕೆ ಹೈರಾಣಾದ ಅರ್ಚಕರು, ಭಕ್ತರು!

ಪುರಾಣ ಪ್ರಸಿದ್ಧ ನಂದಿ ಶ್ರೀ ಭೋಗನಂದೀಶ್ವರ ದೇವಸ್ಥಾನದಲ್ಲಿ ದೇವರ ಮುಂದೆ ನಿಂತು ಭಕ್ತಿ, ಭಾವದಿಂದ ಪ್ರಾರ್ಥನೆ ಮಾಡುವುದರ ಬದಲು ಕೈಲ್ಲೊಂದು ಮೊಬೈಲ್ ಹಿಡಿದು ಸೆಲ್ಫಿ ಪೋಟೋ, ವೀಡಿಯೋ ತೆಗೆದುಕೊಳ್ಳುವುದು, ಸಾಮಾಜಿಕ ಜಾಲತಾಣಗಳ್ಳಿ ಲೈವ್‍ಸ್ಟ್ರೀಮಿಂಗ್ ಮಾಡುವುದು ಹೆಚ್ಚಾಗುತ್ತಿದೆ. ಇದರಿಂದ ಭಕ್ತಿ ಹಾಗೂ ನಿಷ್ಠೆಯಿಂದ ಬರುವ ಭಕ್ತರು ಹಾಗೂ ದೇವಸ್ಥಾನದ ಅರ್ಚಕರಿಗೆ ಕಿರಿಕಿರಿ ಉಂಟಾಗುತ್ತಿದೆ.

ದೇವರ ದರ್ಶನಕ್ಕೆ ಬಂದು ಸೆಲ್ಪಿಗೆ ಮುಗಿಬೀಳುತ್ತಿರುವ ಭಕ್ತರು, ಭಕ್ತರ ಉದ್ಧಟತನಕ್ಕೆ ಹೈರಾಣಾದ ಅರ್ಚಕರು, ಭಕ್ತರು!
ದೇವರ ದರ್ಶನಕ್ಕೆ ಬಂದು ಸೆಲ್ಪಿಗೆ ಮುಗಿಬೀಳುತ್ತಿರುವ ಭಕ್ತರು, ಭಕ್ತರ ಉದ್ಧಟತನಕ್ಕೆ ಹೈರಾಣಾದ ಅರ್ಚಕರು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಸಾಧು ಶ್ರೀನಾಥ್​|

Updated on: Oct 30, 2023 | 4:42 PM

Share

ದೇವಸ್ಥಾನ ಹಾಗೂ ಗರ್ಭಗುಡಿಗಳಲ್ಲಿ ಮೊಬೈಲ್ ಬಳಕೆ ನಿಷೇದಿಸಿ ಮುಜರಾಯಿ ಇಲಾಖೆ ಆದೇಶ ಮಾಡಿದ್ದರೂ, ಅದೊಂದು ಐತಿಹಾಸಿಕ ಪ್ರಸಿದ್ದ, ಪುರಾಣ ಪ್ರಸಿದ್ದ ದೇವಸ್ಥಾನವೊಂದರಲ್ಲಿ ಭಕ್ತರು ಮನಸ್ಸೋ ಇಚ್ಚೆ ದೇವರ ಮುಂದೆ ಸೆಲ್ಪಿಗೆ (Mobile Selfies) ಮುಗಿಬೀಳುವುದು, ಸಾಮಾಜಿಕ ಜಾಲತಾಣದಲ್ಲಿ ಲೈವ್‍ಗಳನ್ನು ನೀಡುತ್ತಿರುವುದು ಹೆಚ್ಚಾಗುತ್ತಿದೆ. ಇದರಿಂದ ದೇವಸ್ಥಾನದ ಅರ್ಚಕರು ಹಾಗೂ ಅನೇಕ ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ಅದು ಎಲ್ಲಿ ಅಂತೀರಾ ಈ ವರದಿ ನೋಡಿ…

ಹೀಗೆ.. ದೇವರ ಮುಂದೆ ನಿಂತು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದಿರುವುದು ಚಿಕ್ಕಬಳ್ಳಾಪುರ (Chikkaballapur) ತಾಲ್ಲೂಕಿನ ಐತಿಹಾಸಿಕ ಪ್ರಸಿದ್ದ, ಪುರಾಣ ಪ್ರಸಿದ್ಧ ನಂದಿ ಶ್ರೀ ಭೋಗನಂದೀಶ್ವರ ದೇವಸ್ಥಾನದಲ್ಲಿ (Sri Bhoga Nandeeshwara temple ). ದೇವಸ್ಥಾನ ನಂದಿ ಗಿರಿಧಾಮದ ತಪ್ಪಲಿನಲ್ಲಿದೆ, ನಂದಿ ಗಿರಿಧಾಮಕ್ಕೆ ಬಂದ ಕೆಲವು ಪ್ರವಾಸಿಗರು ಹಾಗೂ ಉತ್ತರ ಭಾರತ ಮೂಲದ ಪ್ರವಾಸಿಗರು ದೇವರ ದರ್ಶನಕ್ಕೆಂದು ಪ್ರತಿದಿನ ಬರುತ್ತಾರೆ. ಆದರೆ ದೇವರ ಮುಂದೆ ನಿಂತು ಭಕ್ತಿ, ಭಾವದಿಂದ ಪ್ರಾರ್ಥನೆ ಮಾಡುವುದರ ಬದಲು ಕೈಲ್ಲೊಂದು ಮೊಬೈಲ್ ಹಿಡಿದು ಸೆಲ್ಫಿ ಪೋಟೋ, ವೀಡಿಯೋ ತೆಗೆದುಕೊಳ್ಳುವುದು, ಸಾಮಾಜಿಕ ಜಾಲತಾಣಗಳ್ಳಿ ಲೈವ್‍ಸ್ಟ್ರೀಮಿಂಗ್ ಮಾಡುವುದು ಹೆಚ್ಚಾಗುತ್ತಿದೆ. ಇದರಿಂದ ಭಕ್ತಿ ಹಾಗೂ ನಿಷ್ಠೆಯಿಂದ ಬರುವ ಭಕ್ತರು ಹಾಗೂ ದೇವಸ್ಥಾನದ ಅರ್ಚಕರಿಗೆ ಕಿರಿಕಿರಿ ಉಂಟಾಗುತ್ತಿದೆ.

ಇನ್ನು ದೇವಸ್ಥಾನದ ಪುರೋಹಿತರುಗಳು ಅಭಿಷೇಕ, ಅರ್ಚನೆ, ಮಹಾಮಂಗಳಾರತಿ ಮಾಡುವಾಗಲೂ ಕೆಲವರು ಕೈಯಲ್ಲಿ ಮೊಬೈಲ್ ಹಿಡಿದು ಪೋಟೋ, ವೀಡಿಯೋ ಮೊರೆಹೋಗುತ್ತಾರೆ, ಇನ್ನೂ ಕೆಲವರು ವಾಟ್ಸಾಪ್ ವೀಡಿಯೋ ಕಾಲ್ ಮಾಡಿ, ಲೈವ್‍ನಲ್ಲಿ ದೇವರನ್ನು ತೋರಿಸುವುದರ ಬದಲು ಮನಸ್ಸಿಗೆ ಬಂದಂತೆ ದೇವರ ಮುಂದೆ ಮಾತನಾಡುತ್ತಿದ್ದಾರೆ. ಇದಕ್ಕೆಲ್ಲಾ ದೇವಸ್ಥಾನದ ಆಡಳಿತ ಮಂಡಳಿ ಕಡಿವಾಣ ಹಾಕಬೇಕು ಎನ್ನುತ್ತಾರೆ ಕೆಲವು ಭಕ್ತರು.

ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇದ ಮಾಡಿ, ಸರ್ಕಾರ ಆದೇಶ ಮಾಡಿದ್ದರೂ ಕೆಲವು ಭಕ್ತರು ಸೆಲ್ಫಿ, ಪೋಟೋ, ವೀಡಿಯೋಗಳಿಗೆಂದೇ ದೇವಸ್ಥಾನಗಳಿಗೆ ಬಂದು ದೇವರ ಮುಂದೆ ಚಾಟಿಂಗ್ ಮಾಡುತ್ತಿದ್ದಾರೆ. ಇದರಿಂದ ನಿಷ್ಠಾವಂತ ಭಕ್ತರು ಹಾಗೂ ಅರ್ಚಕರ ಗಮನಕ್ಕೆ ಭಂಗ ಬರುತ್ತಿದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!