ದೇವರ ದರ್ಶನಕ್ಕೆ ಬಂದು ಸೆಲ್ಪಿಗೆ ಮುಗಿಬೀಳುತ್ತಿರುವ ಭಕ್ತರು, ಭಕ್ತರ ಉದ್ಧಟತನಕ್ಕೆ ಹೈರಾಣಾದ ಅರ್ಚಕರು, ಭಕ್ತರು!

ಪುರಾಣ ಪ್ರಸಿದ್ಧ ನಂದಿ ಶ್ರೀ ಭೋಗನಂದೀಶ್ವರ ದೇವಸ್ಥಾನದಲ್ಲಿ ದೇವರ ಮುಂದೆ ನಿಂತು ಭಕ್ತಿ, ಭಾವದಿಂದ ಪ್ರಾರ್ಥನೆ ಮಾಡುವುದರ ಬದಲು ಕೈಲ್ಲೊಂದು ಮೊಬೈಲ್ ಹಿಡಿದು ಸೆಲ್ಫಿ ಪೋಟೋ, ವೀಡಿಯೋ ತೆಗೆದುಕೊಳ್ಳುವುದು, ಸಾಮಾಜಿಕ ಜಾಲತಾಣಗಳ್ಳಿ ಲೈವ್‍ಸ್ಟ್ರೀಮಿಂಗ್ ಮಾಡುವುದು ಹೆಚ್ಚಾಗುತ್ತಿದೆ. ಇದರಿಂದ ಭಕ್ತಿ ಹಾಗೂ ನಿಷ್ಠೆಯಿಂದ ಬರುವ ಭಕ್ತರು ಹಾಗೂ ದೇವಸ್ಥಾನದ ಅರ್ಚಕರಿಗೆ ಕಿರಿಕಿರಿ ಉಂಟಾಗುತ್ತಿದೆ.

ದೇವರ ದರ್ಶನಕ್ಕೆ ಬಂದು ಸೆಲ್ಪಿಗೆ ಮುಗಿಬೀಳುತ್ತಿರುವ ಭಕ್ತರು, ಭಕ್ತರ ಉದ್ಧಟತನಕ್ಕೆ ಹೈರಾಣಾದ ಅರ್ಚಕರು, ಭಕ್ತರು!
ದೇವರ ದರ್ಶನಕ್ಕೆ ಬಂದು ಸೆಲ್ಪಿಗೆ ಮುಗಿಬೀಳುತ್ತಿರುವ ಭಕ್ತರು, ಭಕ್ತರ ಉದ್ಧಟತನಕ್ಕೆ ಹೈರಾಣಾದ ಅರ್ಚಕರು
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಸಾಧು ಶ್ರೀನಾಥ್​

Updated on: Oct 30, 2023 | 4:42 PM

ದೇವಸ್ಥಾನ ಹಾಗೂ ಗರ್ಭಗುಡಿಗಳಲ್ಲಿ ಮೊಬೈಲ್ ಬಳಕೆ ನಿಷೇದಿಸಿ ಮುಜರಾಯಿ ಇಲಾಖೆ ಆದೇಶ ಮಾಡಿದ್ದರೂ, ಅದೊಂದು ಐತಿಹಾಸಿಕ ಪ್ರಸಿದ್ದ, ಪುರಾಣ ಪ್ರಸಿದ್ದ ದೇವಸ್ಥಾನವೊಂದರಲ್ಲಿ ಭಕ್ತರು ಮನಸ್ಸೋ ಇಚ್ಚೆ ದೇವರ ಮುಂದೆ ಸೆಲ್ಪಿಗೆ (Mobile Selfies) ಮುಗಿಬೀಳುವುದು, ಸಾಮಾಜಿಕ ಜಾಲತಾಣದಲ್ಲಿ ಲೈವ್‍ಗಳನ್ನು ನೀಡುತ್ತಿರುವುದು ಹೆಚ್ಚಾಗುತ್ತಿದೆ. ಇದರಿಂದ ದೇವಸ್ಥಾನದ ಅರ್ಚಕರು ಹಾಗೂ ಅನೇಕ ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ಅದು ಎಲ್ಲಿ ಅಂತೀರಾ ಈ ವರದಿ ನೋಡಿ…

ಹೀಗೆ.. ದೇವರ ಮುಂದೆ ನಿಂತು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದಿರುವುದು ಚಿಕ್ಕಬಳ್ಳಾಪುರ (Chikkaballapur) ತಾಲ್ಲೂಕಿನ ಐತಿಹಾಸಿಕ ಪ್ರಸಿದ್ದ, ಪುರಾಣ ಪ್ರಸಿದ್ಧ ನಂದಿ ಶ್ರೀ ಭೋಗನಂದೀಶ್ವರ ದೇವಸ್ಥಾನದಲ್ಲಿ (Sri Bhoga Nandeeshwara temple ). ದೇವಸ್ಥಾನ ನಂದಿ ಗಿರಿಧಾಮದ ತಪ್ಪಲಿನಲ್ಲಿದೆ, ನಂದಿ ಗಿರಿಧಾಮಕ್ಕೆ ಬಂದ ಕೆಲವು ಪ್ರವಾಸಿಗರು ಹಾಗೂ ಉತ್ತರ ಭಾರತ ಮೂಲದ ಪ್ರವಾಸಿಗರು ದೇವರ ದರ್ಶನಕ್ಕೆಂದು ಪ್ರತಿದಿನ ಬರುತ್ತಾರೆ. ಆದರೆ ದೇವರ ಮುಂದೆ ನಿಂತು ಭಕ್ತಿ, ಭಾವದಿಂದ ಪ್ರಾರ್ಥನೆ ಮಾಡುವುದರ ಬದಲು ಕೈಲ್ಲೊಂದು ಮೊಬೈಲ್ ಹಿಡಿದು ಸೆಲ್ಫಿ ಪೋಟೋ, ವೀಡಿಯೋ ತೆಗೆದುಕೊಳ್ಳುವುದು, ಸಾಮಾಜಿಕ ಜಾಲತಾಣಗಳ್ಳಿ ಲೈವ್‍ಸ್ಟ್ರೀಮಿಂಗ್ ಮಾಡುವುದು ಹೆಚ್ಚಾಗುತ್ತಿದೆ. ಇದರಿಂದ ಭಕ್ತಿ ಹಾಗೂ ನಿಷ್ಠೆಯಿಂದ ಬರುವ ಭಕ್ತರು ಹಾಗೂ ದೇವಸ್ಥಾನದ ಅರ್ಚಕರಿಗೆ ಕಿರಿಕಿರಿ ಉಂಟಾಗುತ್ತಿದೆ.

ಇನ್ನು ದೇವಸ್ಥಾನದ ಪುರೋಹಿತರುಗಳು ಅಭಿಷೇಕ, ಅರ್ಚನೆ, ಮಹಾಮಂಗಳಾರತಿ ಮಾಡುವಾಗಲೂ ಕೆಲವರು ಕೈಯಲ್ಲಿ ಮೊಬೈಲ್ ಹಿಡಿದು ಪೋಟೋ, ವೀಡಿಯೋ ಮೊರೆಹೋಗುತ್ತಾರೆ, ಇನ್ನೂ ಕೆಲವರು ವಾಟ್ಸಾಪ್ ವೀಡಿಯೋ ಕಾಲ್ ಮಾಡಿ, ಲೈವ್‍ನಲ್ಲಿ ದೇವರನ್ನು ತೋರಿಸುವುದರ ಬದಲು ಮನಸ್ಸಿಗೆ ಬಂದಂತೆ ದೇವರ ಮುಂದೆ ಮಾತನಾಡುತ್ತಿದ್ದಾರೆ. ಇದಕ್ಕೆಲ್ಲಾ ದೇವಸ್ಥಾನದ ಆಡಳಿತ ಮಂಡಳಿ ಕಡಿವಾಣ ಹಾಕಬೇಕು ಎನ್ನುತ್ತಾರೆ ಕೆಲವು ಭಕ್ತರು.

ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇದ ಮಾಡಿ, ಸರ್ಕಾರ ಆದೇಶ ಮಾಡಿದ್ದರೂ ಕೆಲವು ಭಕ್ತರು ಸೆಲ್ಫಿ, ಪೋಟೋ, ವೀಡಿಯೋಗಳಿಗೆಂದೇ ದೇವಸ್ಥಾನಗಳಿಗೆ ಬಂದು ದೇವರ ಮುಂದೆ ಚಾಟಿಂಗ್ ಮಾಡುತ್ತಿದ್ದಾರೆ. ಇದರಿಂದ ನಿಷ್ಠಾವಂತ ಭಕ್ತರು ಹಾಗೂ ಅರ್ಚಕರ ಗಮನಕ್ಕೆ ಭಂಗ ಬರುತ್ತಿದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾಜಿ ವಿಧಾನ ಪರಿಷತ್ ಸದಸ್ಯ ಮಲ್ಲಿಕಾರ್ಜುನ ಉಪಸ್ಥಿತಿಯಲ್ಲಿ ನಡೆದ ಅಯ್ಕೆ
ಮಾಜಿ ವಿಧಾನ ಪರಿಷತ್ ಸದಸ್ಯ ಮಲ್ಲಿಕಾರ್ಜುನ ಉಪಸ್ಥಿತಿಯಲ್ಲಿ ನಡೆದ ಅಯ್ಕೆ
HTT 40 ಟ್ರೈನಿ ಏರ್ ಕ್ರಾಫ್ಟ್​ನಲ್ಲಿ ಸಂಸದ ತೇಜಸ್ವಿ ಸೂರ್ಯ ಹಾರಾಟ
HTT 40 ಟ್ರೈನಿ ಏರ್ ಕ್ರಾಫ್ಟ್​ನಲ್ಲಿ ಸಂಸದ ತೇಜಸ್ವಿ ಸೂರ್ಯ ಹಾರಾಟ
ಮದುವೆ ಸಂಭ್ರಮದ ನಡುವೆಯೂ ಊರಿನ ಶಾಲೆಗೆ ಭೇಟಿ ನೀಡಿದ ಡಾಲಿ ಧನಂಜಯ
ಮದುವೆ ಸಂಭ್ರಮದ ನಡುವೆಯೂ ಊರಿನ ಶಾಲೆಗೆ ಭೇಟಿ ನೀಡಿದ ಡಾಲಿ ಧನಂಜಯ
ಚಾಮರಾಜನಗರ: ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಹಠಾತ್​ ಹೃದಯಾಘಾತ
ಚಾಮರಾಜನಗರ: ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಹಠಾತ್​ ಹೃದಯಾಘಾತ
ಶಾರ್ಟ್ ಸರ್ಕ್ಯೂಟ್​ನಿಂದಾಗಿ ಹೊತ್ತಿದ ಬೆಂಕಿ ಪಕ್ಕದ ಕಟ್ಟಡಕ್ಕೆ ಪಸರಿಸಿದೆ
ಶಾರ್ಟ್ ಸರ್ಕ್ಯೂಟ್​ನಿಂದಾಗಿ ಹೊತ್ತಿದ ಬೆಂಕಿ ಪಕ್ಕದ ಕಟ್ಟಡಕ್ಕೆ ಪಸರಿಸಿದೆ
ವಿಜಯೇಂದ್ರ ಜೊತೆ ಯಾರೆಲ್ಲ ಹೋಗಿದ್ದರು ಅನ್ನೋದು ಪತ್ತೆಯಾಗಲಿಲ್ಲ
ವಿಜಯೇಂದ್ರ ಜೊತೆ ಯಾರೆಲ್ಲ ಹೋಗಿದ್ದರು ಅನ್ನೋದು ಪತ್ತೆಯಾಗಲಿಲ್ಲ
ಶಿವಕುಮಾರ್ ದುರ್ದಾನ ತೆಗೆದುಕೊಂಡರಂತೆ ಬೆನ್ನುಹಾಕಿದ್ದು ಯಾಕೆ ಗೊತ್ತಾ?
ಶಿವಕುಮಾರ್ ದುರ್ದಾನ ತೆಗೆದುಕೊಂಡರಂತೆ ಬೆನ್ನುಹಾಕಿದ್ದು ಯಾಕೆ ಗೊತ್ತಾ?
ಪ್ರಿಯಕರ ನಾಗೇಂದ್ರನ ಪ್ರಿಯತಮೆ ಇನ್ನೂ ಅಪ್ರಾಪ್ತೆಯಂತೆ
ಪ್ರಿಯಕರ ನಾಗೇಂದ್ರನ ಪ್ರಿಯತಮೆ ಇನ್ನೂ ಅಪ್ರಾಪ್ತೆಯಂತೆ
ಮೆಟ್ರೋ ದರ ಏರಿಕೆ ಬಿಸಿ: BMRCL ಎಂಡಿ ಮಹತ್ವದ ಸುದ್ದಿಗೋಷ್ಠಿ
ಮೆಟ್ರೋ ದರ ಏರಿಕೆ ಬಿಸಿ: BMRCL ಎಂಡಿ ಮಹತ್ವದ ಸುದ್ದಿಗೋಷ್ಠಿ
ಬಿಜೆಪಿ ಆಂತರಿಕ ವಿಷಯಗಳ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ: ಸಿಟಿ ರವಿ
ಬಿಜೆಪಿ ಆಂತರಿಕ ವಿಷಯಗಳ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ: ಸಿಟಿ ರವಿ