AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುದಲ್ಲಿ ಡಾ ಸುಧಾಕರ್​ ಸೋತಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಅಂಧಾಭಿಮಾನಿ

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ 2023 ಪ್ರಕಟಗೊಂಡಿದ್ದು, ಹಾಲಿ ಸಚಿವರಾಗಿದ್ದ ಡಾ.ಕೆ ಸುಧಾಕರ್ ಅವರಿಗೆ ಸೋಲಾಗಿದೆ. ಹೀಗಾಗಿ ಅವರ ಅಂಧ ಅಭಿಮಾನಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಚಿಕ್ಕಬಳ್ಳಾಪುದಲ್ಲಿ ಡಾ ಸುಧಾಕರ್​ ಸೋತಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಅಂಧಾಭಿಮಾನಿ
ಸುಧಾಕರ್ ಹಾಗೂ ಮೃತ ಅಭಿಮಾನಿ
Follow us
ರಮೇಶ್ ಬಿ. ಜವಳಗೇರಾ
|

Updated on:May 15, 2023 | 11:45 AM

ಚಿಕ್ಕಬಳ್ಳಾಪುರ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election Results 2023) ಚಿಕ್ಕಬಳ್ಳಾಪುರದಲ್ಲಿ(Chikkaballapura)  ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್(Dr K Sudhakar)​ ಸೋಲುಕಂಡಿದ್ದಾರೆ. ಇದರಿಂದ ಮನನೊಂದು ಅಂಧಾಭಿಮಾನಿಯೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾನೆ. ಈ ಘಟನೆ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕಿನ ವಡ್ರೆಪಾಳ್ಯದಲ್ಲಿ ನಡೆದಿದೆ. ಚಿತ್ತಾರ ವೆಂಕಟೇಶ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಚಿಕ್ಕಬಳ್ಳಾಪುರ ‌ನಗ‌ರದ ಕೋಟೆ ನಿವಾಸಿ ವೆಂಕಟೇಶ ಸುಧಾಕರ್ ಅವರ ಕಟ್ಟಾ ಅಭಿಮಾನಿಯಾಗಿದ್ದ. ಇದೀಗ ಅವರ ಸೋಲಿನಿಂದ ಬೇಸರಗೊಂಡು ಕೆರೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ಸಾರಾ ಮಹೇಶ್ ಸೋಲು; ಮನನೊಂದ ಅಭಿಮಾನಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನ

ಆಪರೇಷನ್‌ ಕಮಲದ ಮೂಲಕ ಬಿಜೆಪಿ ಸೇರಿದ್ದ ಸುಧಾಕರ್‌ ವಿರುದ್ಧ ಕಾಂಗ್ರೆಸ್‌ನ ಪ್ರದೀಪ್ ಈಶ್ವರ್ 10,642 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ರಾಜಕಾರಣಕ್ಕೆ ಹೊಸದಾಗಿ ಪಾದಾರ್ಪಣೆ ಮಾಡಿ ತಿಂಗಳ ಕಾಲ ಚುನಾವಣಾ ಪ್ರಚಾರ ಮಾಡಿದ್ದ ಪ್ರದೀಪ್ ಈಶ್ವರ್ ಸುಧಾಕರ್ ಅವರನ್ನು ಮಣಿಸಿದ್ದು ಅಚ್ಚರಿಗೆ ಕಾರಣವಾಗಿದೆ. ಪ್ರದೀಪ್ ಈಶ್ವರ್ ಅಬ್ಬರದ ಭಾಷಣ ಮಾಡುವ ಮೂಲಕ ಸಿನಿಮಾ ಡೈಲಾಗ್ ಹೊಡೆದು ಜನರ ಮನ ಗೆದ್ದಿದ್ದಾರೆ. ಈ ಫಲಿತಾಂಶ ಎಲ್ಲರ ಹುಬ್ಬೇರುವಂತೆ ಮಾಡಿದೆ.

ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಸಾರಾ ಮಹೇಶ್ ಅಭಿಮಾನಿ

ಇನ್ನು ಜೆಡಿಎಸ್ ಪಕ್ಷದ ಅಭ್ಯರ್ಥಿ ಸಾರಾ ಮಹೇಶ್ (Sa Ra Mahesh) ಅವರು ಸೋಲು ಅನುಭಿಸಿದ ಹಿನ್ನೆಲೆ ಮನನೊಂದ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆಯ ಕೆಆರ್ ನಗರ (KR Nagar) ತಾಲೂಕಿನ ದಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ವೆಂಕಟೇಶ್ ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Published On - 9:52 am, Mon, 15 May 23