AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲಿನ ಬೇಗಗೆ ದಾಹ ತೀರಿಸಿಕೊಳ್ಳಲು ಲೆಮನ್​ ಜ್ಯೂಸ್ ಮೊರೆ; ನಿಂಬೆ ಹಣ್ಣಿಗೆ ಭಾರಿ ಡಿಮ್ಯಾಂಡ್​!

ಒಂದೆಡೆ ಬೇಸಿಗೆಯ ಬಿಸಿಗಾಳಿ ಹಾಗೂ ಉಷ್ಣ. ಬಿಸಿಲಿನ ತಾಪ ತಡೆದುಕೊಳ್ಳಲು ಜನರು, ನಿಂಬೆ ಹಣ್ಣಿನ ಜ್ಯೂಸ್, ಪಾನಕಗಳ ಮೊರೆ ಹೊಗುತ್ತಿದ್ದಾರೆ. ಇದ್ರಿಂದ ಮಾರುಕಟ್ಟೆಯೆಲ್ಲಿ ಸೇಬು ಹಣ್ಣಿನ ಬೆಲೆ ಕುಸಿದಿದ್ದು, ನಿಂಬೆ ಹಣ್ಣಿನ ಬೆಲೆ ಗಗನಕ್ಕೇರಿದೆ. ಕೆ.ಜಿ ನಿಂಬೆ ಹಣ್ಣಿನ ಬೆಲೆ ಇನ್ನೂರು ರೂಪಾಯಿ ಆಗಿದೆ. 

ಬಿಸಿಲಿನ ಬೇಗಗೆ ದಾಹ ತೀರಿಸಿಕೊಳ್ಳಲು ಲೆಮನ್​ ಜ್ಯೂಸ್ ಮೊರೆ; ನಿಂಬೆ ಹಣ್ಣಿಗೆ ಭಾರಿ ಡಿಮ್ಯಾಂಡ್​!
ನಿಂಬೆ ಹಣ್ಣಿಗೆ ಭಾರಿ ಡಿಮ್ಯಾಂಡ್​
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Mar 21, 2024 | 9:47 PM

Share

ಚಿಕ್ಕಬಳ್ಳಾಪುರ, ಮಾ.21: ಬೆಸಿಗೆಯ ಬಿಸಿ ತಡೆದುಕೊಳ್ಳಲಾಗದ ಜನ, ಬಿಸಿಗಾಳಿಯಿಂದ ದೇಹವನ್ನು ತಂಪಾಗಿಡಲು ಪರದಾಡುತ್ತಿದ್ದಾರೆ. ಸುಲಭವಾಗಿ ನಿಂಬೆ ಹಣ್ಣಿನ ಪಾನಕ, ಜ್ಯೂಸ್​(Lemon juice)ಗಳಿಂದ ದೇಹವನ್ನು ತಂಪಾಗಿ ಮಾಡಿಕೊಳ್ಳಬಹುದು, ಇದರಿಂದ ನಿಂಬೆ ಹಣ್ಣಿಗೆ ಮಾರುಕಟ್ಟೆಯಲ್ಲಿ ಭಾರಿ ಡಿಮ್ಯಾಂಡ್ ಬಂದಿದೆ. ಕೆ.ಜಿ ಸೇಬು ಹಣ್ಣಿನ ಬೆಲೆ 180 ರೂಪಾಯಿ ಆದರೆ, ಕೆ.ಜಿ ನಿಂಬೆ ಹಣ್ಣಿನ ಬೆಲೆ ಇನ್ನೂರು ರೂಪಾಯಿ ಆಗಿದೆ. ಈ ಹಿನ್ನಲೆ ಈಗ ಎಲ್ಲಿ ನೋಡಿದರೂ ನಿಂಬೆ ಹಣ್ಣು ಹಾಗೂ ನಿಂಬೆ ಹಣ್ಣಿನ ಜ್ಯೂಸ್​ನದ್ದೆ ಕಾರುಬಾರಾಗಿದೆ.

ಬಿಸಿಗಾಳಿ ಹಾಗೂ ಉಷ್ಣದಿಂದ ಬಾಣಂತಿಯರು, ಗರ್ಭಿಣಿಯರು ಹಾಗೂ ಮಕ್ಕಳು ತುಂಬಾ ಹುಷಾರ್​ ಆಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇದರಿಂದ ಜ್ಯೂಸ್ ಅಂಗಡಿಗಳಿಗೆ ಬರುವ ಗ್ರಾಹಕರು, ನಿಂಬೆ ಹಣ್ಣಿನ ಜ್ಯೂಸ್​ಗಳನ್ನೆ ಕೇಳುತ್ತಿದ್ದಾರೆ. ಆದ್ರೆ, ಒಂದು ನಿಂಬೆ ಹಣ್ಣಿನ ಬೆಲೆ 7 ರಿಂದ 8 ರೂಪಾಯಿ ಇದೆ. ಈ ಹಿನ್ನಲೆ ಜ್ಯೂಸ್ ಅಂಗಡಿಯವರು ವಿಧಿಯಿಲ್ಲದೆ ದುಬಾರಿ ಬೆಲೆ ತೆತ್ತು ನಿಂಬೆ ಹಣ್ಣುಗಳನ್ನು ಖರೀದಿ ಮಾಡುತ್ತಿದ್ದಾರೆ. ನಿಂಬೆ ಹಣ್ಣಿಗಂತೂ ಭಾರಿ ಬೇಡಿಕೆ ಬಂದಿದ್ದು, ಮಾರುಕಟ್ಟೆಯಲ್ಲಿ ನಿಂಬೆ ಹಣ್ಣುಗಳು ಆ್ಯಪಲ್ ಬೆಲೆಯನ್ನೆ ಮಿರಿಸಿದೆ.

ಇದನ್ನೂ ಓದಿ:ಊಟದ ಬಳಿಕ ನಿಂಬೆ ನೀರು ಕುಡಿಯುವುದರಿಂದ ಸಿಗುವ ಲಾಭಗಳು

35 ಸಾವಿರ ರೂಪಾಯಿಗೆ ಹರಾಜಾದ ಒಂದು ನಿಂಬೆ ಹಣ್ಣು

ಇನ್ನು ಯುಗಾದಿ, ರಾಮನವಮಿ ವೇಳೆಗೆ ನಿಂಬೆ ಹಣ್ಣು ಖರೀದಿ ಮತ್ತಷ್ಟು ದುಬಾರಿಯಾಗಲಿದ್ದು, ಬೇಸಿಗೆಯ ಬಯಲು ಪ್ರದೇಶಗಳಾದ ಆಂಧ್ರ, ತಮಿಳುನಾಡಿನಲ್ಲಿಯೂ ನಿಂಬೆಹಣ್ಣಿನ ಬೆಲೆ ಹೆಚ್ಚಾಗಿದೆ. ಇದೆಲ್ಲದರ ಆಚೆಗೆ ನೋಡುವುದಾದರೆ ತಮಿಳುನಾಡಿನ ಗ್ರಾಮವೊಂದರಲ್ಲಿ ಒಂದು ನಿಂಬೆಹಣ್ಣಿನ ಬೆಲೆ 35 ಸಾವಿರ ರೂಪಾಯಿ ಇದೆ. ಹೌದು, ನೀವು ಕೇಳಿದ್ದು ಸರಿ. ಏನಪ್ಪಾ ಆ ನಿಂಬೆಹಣ್ಣಿನ ವಿಶೇಷತೆ ಅಂದರೆ, ತಮಿಳುನಾಡಿನ ಶಿವಗರಿ ಗ್ರಾಮದ ಶಿವನ ದೇವಸ್ಥಾನದಲ್ಲಿ ಇದೇ ತಿಂಗಳ 8ರಂದು ನಡೆದ ವಿಶೇಷ ಪೂಜೆ ನಡೆಯಿತು. ಆ ವೇಳೆ ನಿಂಬೆಹಣ್ಣು ಮತ್ತು ಇತರ ಪೂಜಾ ಸಾಮಗ್ರಿಗಳನ್ನು ಹರಾಜು ಹಾಕಲಾಯಿತು. ಆಗ ಭಕ್ತರು ಇಷ್ಟೊಂದು ದುಬಾರಿ ಬೆಲೆ ಕೊಟ್ಟು ಖರೀದಿ ಮಾಡಿದರು. ಹೀಗೆ ಖರೀದಿ ಆಡಿದ ನಿಂಬೆಹಣ್ಣನ್ನು ಮನೆಗೆ ತೆಗೆದುಕೊಂಡು ಹೋದರೆ ಒಳಿತಾಗುತ್ತದೆ ಎಂ-ದು ಅಲ್ಲಿನ ಭಕ್ತರು ನಂಬುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ​

Published On - 9:44 pm, Thu, 21 March 24

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!